<p><strong>ನವದೆಹಲಿ (ಪಿಟಿಐ): </strong> ತಮಿಳುನಾಡು ಮೂಲದ ಅಸ್ಟ್ರಾಲ್ ಕನ್ಸಲ್ಟನ್ಸಿ ಸಂಸ್ಥೆ ಬಾಡಿಗೆ ಪಡೆಯುವ ಗುತ್ತಿಗೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಿಬಿಐ, ಗುರುವಾರ ಭಾರತ್ ಅರ್ಥ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಅಧ್ಯಕ್ಷ ವಿ.ಆರ್.ಎಸ್. ನಟರಾಜನ್ ಸೇರಿದಂತೆ ಹಲವು ಅಧಿಕಾರಿಗಳ ನಿವಾಸದಲ್ಲಿ ಶೋಧ ನಡೆಸಿತು. <br /> <br /> ಬೆಂಗಳೂರು, ಕೊಯಿಮತ್ತೂರು ಸೇರಿದಂತೆ ದೇಶದ ಹಲವೆಡೆ ಏಕಕಾಲಕ್ಕೆ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ ಸಂಸ್ಥೆ, ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದೆ. <br /> <br /> ಬೆಂಗಳೂರಿನಲ್ಲಿರುವ ನಟರಾಜನ್ ಅವರ ನಿವಾಸದ ಮೇಲೆ ಗುರುವಾರ ಬೆಳಗಿನ ಜಾವ ದಾಳಿ ನಡೆಸಿದ ಅಧಿಕಾರಿಗಳ ತಂಡ ಕಡತ ಮತ್ತು ದಾಖಲೆಗಳಿಗಾಗಿ ಜಾಲಾಡಿತು. ದಾಳಿ ವೇಳೆ ಅನೇಕ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. <br /> <br /> ಅಲ್ಲದೆ, ಸೇನೆಗಾಗಿ ಟಟ್ರಾ ಟ್ರಕ್ಗಳ ಆಮದಿನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಟರಾಜನ್ ಹಾಗೂ ಅಸ್ಟ್ರಾಲ್ನ ನಿರ್ದೇಶಕ ಸಿ.ಎಸ್.ಶ್ರೀವತ್ಸನ್ ಅವರ ವಿರುದ್ಧ ವಂಚನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ.<br /> <br /> ಟಟ್ರಾ ಟ್ರಕ್ ಪೂರೈಕೆ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬುಧವಾರ ಇಬ್ಬರು ನಿವೃತ್ತ ಸೇನಾ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದ ಸಿಬಿಐ, ನಟರಾಜನ್ ಮತ್ತು ವೆಕ್ಟ್ರಾ ಅಧ್ಯಕ್ಷ ರವೀಂದ್ರ ರಿಶಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಈ ವೇಳೆ ಪ್ರಮುಖ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong> ತಮಿಳುನಾಡು ಮೂಲದ ಅಸ್ಟ್ರಾಲ್ ಕನ್ಸಲ್ಟನ್ಸಿ ಸಂಸ್ಥೆ ಬಾಡಿಗೆ ಪಡೆಯುವ ಗುತ್ತಿಗೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಿಬಿಐ, ಗುರುವಾರ ಭಾರತ್ ಅರ್ಥ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್) ಅಧ್ಯಕ್ಷ ವಿ.ಆರ್.ಎಸ್. ನಟರಾಜನ್ ಸೇರಿದಂತೆ ಹಲವು ಅಧಿಕಾರಿಗಳ ನಿವಾಸದಲ್ಲಿ ಶೋಧ ನಡೆಸಿತು. <br /> <br /> ಬೆಂಗಳೂರು, ಕೊಯಿಮತ್ತೂರು ಸೇರಿದಂತೆ ದೇಶದ ಹಲವೆಡೆ ಏಕಕಾಲಕ್ಕೆ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ ಸಂಸ್ಥೆ, ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದೆ. <br /> <br /> ಬೆಂಗಳೂರಿನಲ್ಲಿರುವ ನಟರಾಜನ್ ಅವರ ನಿವಾಸದ ಮೇಲೆ ಗುರುವಾರ ಬೆಳಗಿನ ಜಾವ ದಾಳಿ ನಡೆಸಿದ ಅಧಿಕಾರಿಗಳ ತಂಡ ಕಡತ ಮತ್ತು ದಾಖಲೆಗಳಿಗಾಗಿ ಜಾಲಾಡಿತು. ದಾಳಿ ವೇಳೆ ಅನೇಕ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. <br /> <br /> ಅಲ್ಲದೆ, ಸೇನೆಗಾಗಿ ಟಟ್ರಾ ಟ್ರಕ್ಗಳ ಆಮದಿನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ನಟರಾಜನ್ ಹಾಗೂ ಅಸ್ಟ್ರಾಲ್ನ ನಿರ್ದೇಶಕ ಸಿ.ಎಸ್.ಶ್ರೀವತ್ಸನ್ ಅವರ ವಿರುದ್ಧ ವಂಚನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ.<br /> <br /> ಟಟ್ರಾ ಟ್ರಕ್ ಪೂರೈಕೆ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬುಧವಾರ ಇಬ್ಬರು ನಿವೃತ್ತ ಸೇನಾ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿದ್ದ ಸಿಬಿಐ, ನಟರಾಜನ್ ಮತ್ತು ವೆಕ್ಟ್ರಾ ಅಧ್ಯಕ್ಷ ರವೀಂದ್ರ ರಿಶಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಈ ವೇಳೆ ಪ್ರಮುಖ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>