<p><strong>ಸಿರವಾರ:</strong> ತುಂಗಭದ್ರಾ ನೀರವಾರಿ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಟಾಸ್ಕ್ವರ್ಕ್ ನೌಕರರು ಖಾಯಂಗಾಗಿ ಒತ್ತಾಯಿಸಿ ಮುಖ್ಯಮಂತ್ರಿ ಸದಾನಂದಗೌಡ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು.<br /> <br /> 25 ವರ್ಷಗಳಿಂದ ತುಂಗಭದ್ರಾ ನೀರಾವರಿ ಯೋಜನೆಯಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆ ವ್ಯಾಪ್ತಿಯ 1400 ಜನರು ವಿವಿಧ ಹುದ್ದೆಗಳಲ್ಲಿದ್ದಾರೆ. ಈ ಎಲ್ಲ ನೌಕರರನ್ನು ಸಂಪುಟದ ಉಪಸಮಿತಿಯಲ್ಲಿ ಸೇರಿಸಿ ಹುದ್ದೆಗೆ ಅನುಗುಣವಾಗಿ ವಿವಿಧ ಇಲಾಖೆಗಳಲ್ಲಿ ವಿಲೀನಗೊಳಿಸಿ ಕನಿಷ್ಠ ವೇತನ ನಿಗದಿ ಮಾಡಬೇಕೆಂದು ಬಿಜೆಪಿಯ ರಾಯಚೂರು ಗ್ರಾಮಾಂತರ ಘಟಕದ ಅಧ್ಯಕ್ಷ ಶಿವರಾಜ ಮರ್ಚೆಟಾಳ್ ನೇತ್ರತ್ವದಲ್ಲಿ ಮನವಿ ಸಲ್ಲಿಸಿದರು. <br /> <br /> ತುಂಗಭದ್ರಾ ಎಡದಂಡೆ ಕಾಲುವೆ ಟಾಸ್ಕ್ ನೌಕರರ ಸಂಘದ ಯರಮರಸ್ ವಿಭಾಗದ ಅಧ್ಯಕ್ಷ ಬಸವರಾಜ ಮರಕಮದಿನ್ನಿ, ಸಿರವಾರ ವಿಭಾಗದ ಪುರುಷೋತ್ತಮ, ರಾಮಣ್ಣ, ಮುನಿರಾಬಾದ್ದಿಂದ ಹುಲಿಗೆಣ್ಣ, ಕೊಪ್ಪಳದಿಂದ ಪಾಕ್ಷ ಮತ್ತು ಕಿನ್ನಾಳದಿಂದ ಪರಸಪ್ಪ ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ:</strong> ತುಂಗಭದ್ರಾ ನೀರವಾರಿ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಟಾಸ್ಕ್ವರ್ಕ್ ನೌಕರರು ಖಾಯಂಗಾಗಿ ಒತ್ತಾಯಿಸಿ ಮುಖ್ಯಮಂತ್ರಿ ಸದಾನಂದಗೌಡ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು.<br /> <br /> 25 ವರ್ಷಗಳಿಂದ ತುಂಗಭದ್ರಾ ನೀರಾವರಿ ಯೋಜನೆಯಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆ ವ್ಯಾಪ್ತಿಯ 1400 ಜನರು ವಿವಿಧ ಹುದ್ದೆಗಳಲ್ಲಿದ್ದಾರೆ. ಈ ಎಲ್ಲ ನೌಕರರನ್ನು ಸಂಪುಟದ ಉಪಸಮಿತಿಯಲ್ಲಿ ಸೇರಿಸಿ ಹುದ್ದೆಗೆ ಅನುಗುಣವಾಗಿ ವಿವಿಧ ಇಲಾಖೆಗಳಲ್ಲಿ ವಿಲೀನಗೊಳಿಸಿ ಕನಿಷ್ಠ ವೇತನ ನಿಗದಿ ಮಾಡಬೇಕೆಂದು ಬಿಜೆಪಿಯ ರಾಯಚೂರು ಗ್ರಾಮಾಂತರ ಘಟಕದ ಅಧ್ಯಕ್ಷ ಶಿವರಾಜ ಮರ್ಚೆಟಾಳ್ ನೇತ್ರತ್ವದಲ್ಲಿ ಮನವಿ ಸಲ್ಲಿಸಿದರು. <br /> <br /> ತುಂಗಭದ್ರಾ ಎಡದಂಡೆ ಕಾಲುವೆ ಟಾಸ್ಕ್ ನೌಕರರ ಸಂಘದ ಯರಮರಸ್ ವಿಭಾಗದ ಅಧ್ಯಕ್ಷ ಬಸವರಾಜ ಮರಕಮದಿನ್ನಿ, ಸಿರವಾರ ವಿಭಾಗದ ಪುರುಷೋತ್ತಮ, ರಾಮಣ್ಣ, ಮುನಿರಾಬಾದ್ದಿಂದ ಹುಲಿಗೆಣ್ಣ, ಕೊಪ್ಪಳದಿಂದ ಪಾಕ್ಷ ಮತ್ತು ಕಿನ್ನಾಳದಿಂದ ಪರಸಪ್ಪ ಇನ್ನಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>