<p><strong>ಬೆಂಗಳೂರು</strong>: ಐಪಿಎಲ್ ಏಳನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಟಿಕೆಟ್ ಗಿಟ್ಟಿಸಲು ಗುರುವಾರ ಮಧ್ಯರಾತ್ರಿಯಿಂದಲೇ ಕ್ರಿಕೆಟ್ ಪ್ರೇಮಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಕೌಂಟರ್ ಬಳಿ ಮುಗಿಬಿದ್ದಿದ್ದರು.<br /> <br /> ಭಾನುವಾರ ರಾತ್ರಿ 8 ಗಂಟೆಗೆ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಇಂದು (ಶುಕ್ರವಾರ) ಬೆಳಿಗ್ಗೆ 9 ಗಂಟೆಯಿಂದ ಟಿಕೆಟ್ ನೀಡಲಾಗುತ್ತದೆ. ಆದರೆ, ಗುರುವಾರ ರಾತ್ರಿಯೇ ಕ್ರೀಡಾಂಗಣದ ಹೊರಭಾಗದಲ್ಲಿ ಸಾಕಷ್ಟು ಅಭಿಮಾನಿಗಳು ಸಾಲಿನಲ್ಲಿ ನಿಂತಿದ್ದರು. ಅದರಲ್ಲೂ ಯುವತಿಯರ ದಂಡೇ ಹೆಚ್ಚಾಗಿತ್ತು.<br /> <br /> ನಿಗದಿತ ವೇಳಾಪಟ್ಟಿಯ ಪ್ರಕಾರ ಐಪಿಎಲ್ ಫೈನಲ್ ಮುಂಬೈಯಲ್ಲಿ ನಡೆಯಬೇಕಿತ್ತು. ಆದರೆ, ಕೊನೆಯಲ್ಲಿ ಈ ಮಹತ್ವದ ಅವಕಾಶ ಉದ್ಯಾನನಗರಿಯ ಪಾಲಾಗಿದೆ. ಆದ್ದರಿಂದ ಇಲ್ಲಿನ ಕ್ರಿಕೆಟ್ ಪ್ರೇಮಿಗಳು ಹೇಗಾದರೂ ಮಾಡಿ ಟಿಕೆಟ್ ಗಿಟ್ಟಿಸಲೇಬೇಕೆಂದು ಹರಸಾಹಸ ಮಾಡುತ್ತಿದ್ದಾರೆ.<br /> <br /> ಫೈನಲ್ ಪಂದ್ಯ ಉದ್ಯಾನನಗರಿಯಲ್ಲಿ ಆಯೋಜನೆಯಾಗಿರುವುದು ಇದೇ ಮೊದಲು. ಆದ್ದರಿಂದ ಈ ಪಂದ್ಯಕ್ಕೆ ಎಲ್ಲಿಲ್ಲದ ಬೇಡಿಕೆ. ಜೊತೆಗೆ, ಟಿಕೆಟ್ ಪಡೆಯಲು ಬೇರೆ ಬೇರೆ ಊರಿನಿಂದಲೂ ಅಭಿಮಾನಿಗಳು ಬಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಐಪಿಎಲ್ ಏಳನೇ ಆವೃತ್ತಿಯ ಫೈನಲ್ ಪಂದ್ಯಕ್ಕೆ ಟಿಕೆಟ್ ಗಿಟ್ಟಿಸಲು ಗುರುವಾರ ಮಧ್ಯರಾತ್ರಿಯಿಂದಲೇ ಕ್ರಿಕೆಟ್ ಪ್ರೇಮಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಕೌಂಟರ್ ಬಳಿ ಮುಗಿಬಿದ್ದಿದ್ದರು.<br /> <br /> ಭಾನುವಾರ ರಾತ್ರಿ 8 ಗಂಟೆಗೆ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಇಂದು (ಶುಕ್ರವಾರ) ಬೆಳಿಗ್ಗೆ 9 ಗಂಟೆಯಿಂದ ಟಿಕೆಟ್ ನೀಡಲಾಗುತ್ತದೆ. ಆದರೆ, ಗುರುವಾರ ರಾತ್ರಿಯೇ ಕ್ರೀಡಾಂಗಣದ ಹೊರಭಾಗದಲ್ಲಿ ಸಾಕಷ್ಟು ಅಭಿಮಾನಿಗಳು ಸಾಲಿನಲ್ಲಿ ನಿಂತಿದ್ದರು. ಅದರಲ್ಲೂ ಯುವತಿಯರ ದಂಡೇ ಹೆಚ್ಚಾಗಿತ್ತು.<br /> <br /> ನಿಗದಿತ ವೇಳಾಪಟ್ಟಿಯ ಪ್ರಕಾರ ಐಪಿಎಲ್ ಫೈನಲ್ ಮುಂಬೈಯಲ್ಲಿ ನಡೆಯಬೇಕಿತ್ತು. ಆದರೆ, ಕೊನೆಯಲ್ಲಿ ಈ ಮಹತ್ವದ ಅವಕಾಶ ಉದ್ಯಾನನಗರಿಯ ಪಾಲಾಗಿದೆ. ಆದ್ದರಿಂದ ಇಲ್ಲಿನ ಕ್ರಿಕೆಟ್ ಪ್ರೇಮಿಗಳು ಹೇಗಾದರೂ ಮಾಡಿ ಟಿಕೆಟ್ ಗಿಟ್ಟಿಸಲೇಬೇಕೆಂದು ಹರಸಾಹಸ ಮಾಡುತ್ತಿದ್ದಾರೆ.<br /> <br /> ಫೈನಲ್ ಪಂದ್ಯ ಉದ್ಯಾನನಗರಿಯಲ್ಲಿ ಆಯೋಜನೆಯಾಗಿರುವುದು ಇದೇ ಮೊದಲು. ಆದ್ದರಿಂದ ಈ ಪಂದ್ಯಕ್ಕೆ ಎಲ್ಲಿಲ್ಲದ ಬೇಡಿಕೆ. ಜೊತೆಗೆ, ಟಿಕೆಟ್ ಪಡೆಯಲು ಬೇರೆ ಬೇರೆ ಊರಿನಿಂದಲೂ ಅಭಿಮಾನಿಗಳು ಬಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>