<p><strong>ಪೀಣ್ಯ ದಾಸರಹಳ್ಳಿ:</strong> ಹೇಮಾವತಿ ಜಲಾಶಯದ ನೀರನ್ನು ತಿಪ್ಪಗೊಂಡನಹಳ್ಳಿ ಕೆರೆಗೆ ತರಲು ಚಿಂತಿಸಲಾಗಿದ್ದು, ಪೂರ್ವಭಾವಿಯಾಗಿ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ ಎಂದು ಶಾಸಕ ಎಸ್.ಮುನಿರಾಜು ತಿಳಿಸಿದರು.<br /> <br /> ದಾಸರಹಳ್ಳಿ ವಲಯದ ರಾಜಗೋಪಾಲನಗರ ವಾರ್ಡ್ನ ಅನ್ನಪೂರ್ಣೇಶ್ವರಿನಗರದ ಪಿಳ್ಳಪ್ಪನ ಕಟ್ಟೆ ಸಮೀಪ 55 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಕಸ ವಿಂಗಡಣೆ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> ಇದರಿಂದ ದಾಸರಹಳ್ಳಿ, ಹೆಗ್ಗನಹಳ್ಳಿ, ಸುಂಕದಕಟ್ಟೆ, ಮಾಗಡಿ ರಸ್ತೆ ಮತ್ತು ಸುತ್ತಮುತ್ತಲಿನ ಅನೇಕ ಬಡಾವಣೆಗಳ ಜನರಿಗೆ ಅನುಕೂಲವಾಗಲಿದೆ. ಕಾವೇರಿ ಯೋಜನೆಯ 4ನೇ ಹಂತದ 2ನೇ ಘಟ್ಟದ ಕಾಮಗಾರಿ ಮುಗಿದು ಮಾರ್ಚ್ನಲ್ಲಿ ಜನತೆಗೆ ನೀರು ಪೂರೈಸಬೇಕಿತ್ತು.<br /> <br /> ಆದರೆ, ಕನಕಪುರ ಬಳಿ ಕಾಮಗಾರಿಗೆ ಬಂಡೆ ಅಡ್ಡಿಯಾಗಿರುವುದರಿಂದ ಎರಡು-ಮೂರು ತಿಂಗಳು ವಿಳಂಬವಾಗಲಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಲಿದ್ದು, ನಾಗರಿಕರು ಸಹಕರಿಸಬೇಕು ಎಂದು ಕೋರಿದರು.ಪಾಲಿಕೆ ಸದಸ್ಯರಾದ ಎಚ್.ಎನ್.ಗಂಗಾಧರ್, ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಹೇಮಾವತಿ ಜಲಾಶಯದ ನೀರನ್ನು ತಿಪ್ಪಗೊಂಡನಹಳ್ಳಿ ಕೆರೆಗೆ ತರಲು ಚಿಂತಿಸಲಾಗಿದ್ದು, ಪೂರ್ವಭಾವಿಯಾಗಿ ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ ಎಂದು ಶಾಸಕ ಎಸ್.ಮುನಿರಾಜು ತಿಳಿಸಿದರು.<br /> <br /> ದಾಸರಹಳ್ಳಿ ವಲಯದ ರಾಜಗೋಪಾಲನಗರ ವಾರ್ಡ್ನ ಅನ್ನಪೂರ್ಣೇಶ್ವರಿನಗರದ ಪಿಳ್ಳಪ್ಪನ ಕಟ್ಟೆ ಸಮೀಪ 55 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಕಸ ವಿಂಗಡಣೆ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> ಇದರಿಂದ ದಾಸರಹಳ್ಳಿ, ಹೆಗ್ಗನಹಳ್ಳಿ, ಸುಂಕದಕಟ್ಟೆ, ಮಾಗಡಿ ರಸ್ತೆ ಮತ್ತು ಸುತ್ತಮುತ್ತಲಿನ ಅನೇಕ ಬಡಾವಣೆಗಳ ಜನರಿಗೆ ಅನುಕೂಲವಾಗಲಿದೆ. ಕಾವೇರಿ ಯೋಜನೆಯ 4ನೇ ಹಂತದ 2ನೇ ಘಟ್ಟದ ಕಾಮಗಾರಿ ಮುಗಿದು ಮಾರ್ಚ್ನಲ್ಲಿ ಜನತೆಗೆ ನೀರು ಪೂರೈಸಬೇಕಿತ್ತು.<br /> <br /> ಆದರೆ, ಕನಕಪುರ ಬಳಿ ಕಾಮಗಾರಿಗೆ ಬಂಡೆ ಅಡ್ಡಿಯಾಗಿರುವುದರಿಂದ ಎರಡು-ಮೂರು ತಿಂಗಳು ವಿಳಂಬವಾಗಲಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಲಿದ್ದು, ನಾಗರಿಕರು ಸಹಕರಿಸಬೇಕು ಎಂದು ಕೋರಿದರು.ಪಾಲಿಕೆ ಸದಸ್ಯರಾದ ಎಚ್.ಎನ್.ಗಂಗಾಧರ್, ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>