<p><strong>ಬೆಂಗಳೂರು: </strong>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಟೋಲ್ ಶುಲ್ಕ ಹೆಚ್ಚಳ ಮಾಡಿರುವ ಕ್ರಮವನ್ನು ವಿರೋಧಿಸಿ ವಿವಿಧ ಸಂಘಟನೆಗಳ ಸದಸ್ಯರು ನವಯುಗ ಟೋಲ್ ಕೇಂದ್ರದ ಬಳಿ ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.<br /> <br /> ಟೋಲ್ ಹೆಚ್ಚಳ ಖಂಡಿಸಿ ಲಾರಿ ಮಾಲೀಕರು ಹಾಗೂ ಟ್ಯಾಕ್ಸಿ ಚಾಲಕರು ಶುಕ್ರವಾರ ವಾಹನಗಳನ್ನು ಸ್ಥಗಿತಗೊಳಿಸಿ ಹೋರಾಟ ಮಾಡುವುದಾಗಿ ಹೇಳಿದ್ದರು. ಅದರಂತೆ ಬೆಳಿಗ್ಗೆ 10 ಗಂಟೆಗೆ ಟೋಲ್ ಕೇಂದ್ರದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೆಲ ಕಾಲ ನವಯುಗ ಕಂಪೆನಿ ವಿರುದ್ಧ ಘೋಷಣೆಗಳನ್ನು ಕೂಗಿದರು.<br /> <br /> ಲಾರಿ ಮಾಲೀಕರು ಮತ್ತು ಏಜೆಂಟರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ, ‘ಟೋಲ್ ಶುಲ್ಕ ಕಡಿತಗೊಳಿಸುವ ಸಂಬಂಧ ಕೇಂದ್ರ ಹೆದ್ದಾರಿ ಸಚಿವ ಆಸ್ಕರ್ ಫರ್ನಾಂಡಿಸ್ ಹಾಗೂ ನವಯುಗ ಕಂಪೆನಿ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಹೀಗಾಗಿ ಕೆಲ ಕಾಲ ಸಾಂಕೇತಿಕ ಪ್ರತಿಭಟನೆ ನಡೆಸಲಾಗುತ್ತಿದೆ. ಟೋಲ್ ದರ ಇಳಿಸದಿದ್ದರೆ ತಮಿಳುನಾಡಿನ ಸೇಲಂನಲ್ಲಿ ಮೇ 11ರಂದು ದಕ್ಷಿಣ ಭಾರತದ ಲಾರಿ ಮಾಲೀಕರ ಸಭೆ ನಡೆಸುತ್ತೇವೆ. ಆ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಎಚ್ಚರಿಕೆ ನೀಡಿದರು<br /> <br /> ಪ್ರತಿಭಟನೆ ಹಿನ್ನೆಲೆಯಲ್ಲಿ ಟೋಲ್ ಕೇಂದ್ರಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. 4 ಎಸಿಪಿ, 15 ಇನ್ಸ್ಪೆಕ್ಟರ್, 30 ಎಸ್ಐಗಳು ಸೇರಿದಂತೆ 300 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಒಂದೂವರೆ ತಾಸಿನಲ್ಲಿ ಪ್ರತಿಭಟನೆ ಪೂರ್ಣಗೊಂಡಿದ್ದರಿಂದ ಟೋಲ್ ಸಂಗ್ರಹ ಪ್ರಕ್ರಿಯೆ ಸಹಜ ಸ್ಥಿತಿಗೆ ಮರಳಿತು. ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ ವಾಹನಗಳ ಓಡಾಟ ಕಡಿಮೆ ಇತ್ತು. ದೇವನಹಳ್ಳಿ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಂದ ನಗರಕ್ಕೆ ಬರುವವರು ಪರ್ಯಾಯ ಮಾರ್ಗ ಬಳಸಿದರು.<br /> <br /> ಪ್ರತಿಭಟನೆಯಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ 2 ಪಥಗಳಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಸಿಟಿ ಟ್ಯಾಕ್ಸಿ ಸೇರಿದಂತೆ ಇತರೆ ವಾಹನಗಳ ಓಡಾಟ ಕಡಿಮೆ ಇದ್ದುದರಿಂದ ಬಿಎಂಟಿಸಿ ವಾಯುವಜ್ರ ಬಸ್ಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿತ್ತು. ಮಧ್ಯಾಹ್ನ 12 ಗಂಟೆ ನಂತರ ಟ್ಯಾಕ್ಸಿ, ಕ್ಯಾಬ್ಗಳು ಸೇವೆ ಪುನರಾರಂಭಿಸಿದವು. ಸಂಯುಕ್ತ ಜನತಾ ದಳದ ರಾಜ್ಯ ಘಟಕದ ಅಧ್ಯಕ್ಷ ಎಂ.ಪಿ.ನಾಡಗೌಡ, ಪ್ರವಾಸಿ ಟ್ಯಾಕ್ಸಿ ಮಾಲೀಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.<br /> <br /> <strong>ಟೋಲ್ ಶುಲ್ಕ ಪರಿಶೀಲನೆಗೆ ಜಂಟಿ ಸಮಿತಿ ರಚನೆ<br /> ಬೆಂಗಳೂರು: </strong>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗುವ ರಾಷ್ಟ್ರೀಯ ಹೆದ್ದಾರಿಯ ಟೋಲ್ ಶುಲ್ಕ ವಿವಾದ ಕುರಿತು ಪರಿಶೀಲನೆ ನಡೆಸಲು ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಸಮಿತಿ ರಚಿಸಲಾಗಿದೆ.</p>.<p>ಈ ಸಮಿತಿಯು ಕೇಂದ್ರ ಭೂಸಾರಿಗೆ ಸಚಿವ ಆಸ್ಕರ್ ಫರ್ನಾಂಡಿಸ್ ಅವರಿಗೆ ಇದೇ 12ರಂದು ವರದಿ ಸಲ್ಲಿಸಲಿದೆ.<br /> <br /> ಸಚಿವ ಫರ್ನಾಂಡಿಸ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಎನ್ಎಚ್ಎಐ, ರಾಜ್ಯ ಸರ್ಕಾರ, ನವಯುಗ ಎಂಜಿನಿಯರಿಂಗ್ ಕಂಪೆನಿ ಪ್ರತಿನಿಧಿಗಳ ಜೊತೆ ಶುಕ್ರವಾರ ಸಭೆ ನಡೆಸಿದರು. ಶುಲ್ಕ ಹೆಚ್ಚಳ ವಿವಾದಕ್ಕೆ ಸಂಬಂಧಿಸಿದಂತೆ ಸಮಿತಿ ರಚನೆಯಾಗಿದ್ದನ್ನು ಹೊರತುಪಡಿಸಿದರೆ, ಬೇರೆ ಯಾವುದೇ ಮಹತ್ವದ ನಿರ್ಧಾರ ಶುಕ್ರವಾರದ ಸಭೆಯಲ್ಲಿ ಆಗಿಲ್ಲ ಎಂದು ಮೂಲಗಳು ತಿಳಿಸಿವೆ.<br /> <br /> ಟೋಲ್ ಶುಲ್ಕ ಕಡಿಮೆ ಮಾಡಬೇಕು ಎಂದಾದರೆ ಅದರಿಂದ ಆಗುವ ನಷ್ಟವನ್ನು ರಾಜ್ಯ ಅಥವಾ ಕೇಂದ್ರ ಸರ್ಕಾರ ಭರ್ತಿ ಮಾಡಿಕೊಡಬೇಕು.<br /> <br /> ಇದು ಸಾಧ್ಯವಾಗದಿದ್ದರೆ ಟೋಲ್ ಶುಲ್ಕ ಕಡಿಮೆ ಮಾಡಲು ಆಗದು ಎಂದು ನವಯುಗ ಕಂಪೆನಿ ಪ್ರತಿನಿಧಿಗಳು ಸ್ಪಷ್ಟಪಡಿಸಿದರು.<br /> ಟೋಲ್ ಶುಲ್ಕ ಹೆಚ್ಚಳ ಮಾಡಿದ ಕ್ರಮವನ್ನು ಒಪ್ಪಲಾಗದು. ಏಕೆಂದರೆ ನವಯುಗ ಕಂಪೆನಿ ಸರ್ವಿಸ್ ರಸ್ತೆ ನಿರ್ಮಿಸಿಲ್ಲ ಎಂದು ಸರ್ಕಾರದ ಪ್ರತಿನಿಧಿಗಳು ಹೇಳಿದರು.<br /> <br /> ‘ಟೋಲ್ ಶುಲ್ಕ ಹೆಚ್ಚಳದ ಲೆಕ್ಕಾಚಾರದಲ್ಲಿ ತಪ್ಪಿರಲು ಸಾಧ್ಯವಿಲ್ಲ. ಏಕೆಂದರೆ ಶುಲ್ಕ ಹೆಚ್ಚಳ ನಿರ್ಧಾರವನ್ನು ಹಲವು ಹಂತಗಳಲ್ಲಿ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಸರ್ವಿಸ್ ರಸ್ತೆ ನಿರ್ಮಾಣ ಪೂರ್ಣಗೊಳಿಸಲು ಜಮೀನು ನೀಡುವಂತೆ ಕೋರಿ ವಾಯುಪಡೆ, ರೈಲ್ವೆ ಇಲಾಖೆ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿ ಪ್ರಯೋಜನಕ್ಕೆ ಬಂದಿಲ್ಲ’ ಎಂದು ನವಯುಗ ಕಂಪೆನಿ ಪ್ರತಿನಿಧಿಗಳು ವಾದಿಸಿದರು.<br /> ಜಕ್ಕೂರು ವಾಯುನೆಲೆ, ಯಲಹಂಕದಲ್ಲಿರುವ ವಾಯುಪಡೆ ಕೇಂದ್ರದ ಬಳಿ ಮತ್ತು ವಿಮಾನ ನಿಲ್ದಾಣಕ್ಕೆ ಸಾಗುವ ಮಾರ್ಗದಲ್ಲಿ ಬರುವ ರೈಲ್ವೆ ಮೇಲ್ಸೇತುವೆ ಸಮೀಪ ಜಮೀನು ಸ್ವಾಧೀನಕ್ಕೆ ಅಡಚಣೆ ಎದುರಾದ ಕಾರಣ ಸರ್ವಿಸ್ ರಸ್ತೆಯ ಕಾರ್ಯ ಪೂರ್ಣಗೊಂಡಿಲ್ಲ ಎನ್ನಲಾಗಿದೆ.<br /> <br /> ‘ಜಂಟಿ ಸಮಿತಿ ವರದಿ ಸಲ್ಲಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನ್ನ ಕಳಕಳಿಯನ್ನು ವ್ಯಕ್ತಪಡಿಸಿದೆ’ ಎಂದು ಫರ್ನಾಂಡಿಸ್ ಅವರು ಸಭೆಯ ನಂತರ ತಿಳಿಸಿದರು.<br /> <br /> ವಿವಾದ ಕುರಿತು ಅಂತಿಮ ತೀರ್ಮಾನ ಹೊರಬರುವವರೆಗೆ ಟೋಲ್ ಶುಲ್ಕದಲ್ಲಿ ಕಡಿತ ಮಾಡಲಾಗುವುದೇ ಎಂಬ ಪ್ರಶ್ನೆಗೆ, ‘ಇಲ್ಲ’ ಎಂಬ ಉತ್ತರ ಎನ್ಎಚ್ಎಐ ಅಧಿಕಾರಿಗಳಿಂದ ಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಟೋಲ್ ಶುಲ್ಕ ಹೆಚ್ಚಳ ಮಾಡಿರುವ ಕ್ರಮವನ್ನು ವಿರೋಧಿಸಿ ವಿವಿಧ ಸಂಘಟನೆಗಳ ಸದಸ್ಯರು ನವಯುಗ ಟೋಲ್ ಕೇಂದ್ರದ ಬಳಿ ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿದರು.<br /> <br /> ಟೋಲ್ ಹೆಚ್ಚಳ ಖಂಡಿಸಿ ಲಾರಿ ಮಾಲೀಕರು ಹಾಗೂ ಟ್ಯಾಕ್ಸಿ ಚಾಲಕರು ಶುಕ್ರವಾರ ವಾಹನಗಳನ್ನು ಸ್ಥಗಿತಗೊಳಿಸಿ ಹೋರಾಟ ಮಾಡುವುದಾಗಿ ಹೇಳಿದ್ದರು. ಅದರಂತೆ ಬೆಳಿಗ್ಗೆ 10 ಗಂಟೆಗೆ ಟೋಲ್ ಕೇಂದ್ರದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕೆಲ ಕಾಲ ನವಯುಗ ಕಂಪೆನಿ ವಿರುದ್ಧ ಘೋಷಣೆಗಳನ್ನು ಕೂಗಿದರು.<br /> <br /> ಲಾರಿ ಮಾಲೀಕರು ಮತ್ತು ಏಜೆಂಟರ ಸಂಘದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ, ‘ಟೋಲ್ ಶುಲ್ಕ ಕಡಿತಗೊಳಿಸುವ ಸಂಬಂಧ ಕೇಂದ್ರ ಹೆದ್ದಾರಿ ಸಚಿವ ಆಸ್ಕರ್ ಫರ್ನಾಂಡಿಸ್ ಹಾಗೂ ನವಯುಗ ಕಂಪೆನಿ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಹೀಗಾಗಿ ಕೆಲ ಕಾಲ ಸಾಂಕೇತಿಕ ಪ್ರತಿಭಟನೆ ನಡೆಸಲಾಗುತ್ತಿದೆ. ಟೋಲ್ ದರ ಇಳಿಸದಿದ್ದರೆ ತಮಿಳುನಾಡಿನ ಸೇಲಂನಲ್ಲಿ ಮೇ 11ರಂದು ದಕ್ಷಿಣ ಭಾರತದ ಲಾರಿ ಮಾಲೀಕರ ಸಭೆ ನಡೆಸುತ್ತೇವೆ. ಆ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಎಚ್ಚರಿಕೆ ನೀಡಿದರು<br /> <br /> ಪ್ರತಿಭಟನೆ ಹಿನ್ನೆಲೆಯಲ್ಲಿ ಟೋಲ್ ಕೇಂದ್ರಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. 4 ಎಸಿಪಿ, 15 ಇನ್ಸ್ಪೆಕ್ಟರ್, 30 ಎಸ್ಐಗಳು ಸೇರಿದಂತೆ 300 ಮಂದಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಒಂದೂವರೆ ತಾಸಿನಲ್ಲಿ ಪ್ರತಿಭಟನೆ ಪೂರ್ಣಗೊಂಡಿದ್ದರಿಂದ ಟೋಲ್ ಸಂಗ್ರಹ ಪ್ರಕ್ರಿಯೆ ಸಹಜ ಸ್ಥಿತಿಗೆ ಮರಳಿತು. ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ ವಾಹನಗಳ ಓಡಾಟ ಕಡಿಮೆ ಇತ್ತು. ದೇವನಹಳ್ಳಿ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಂದ ನಗರಕ್ಕೆ ಬರುವವರು ಪರ್ಯಾಯ ಮಾರ್ಗ ಬಳಸಿದರು.<br /> <br /> ಪ್ರತಿಭಟನೆಯಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ 2 ಪಥಗಳಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಸಿಟಿ ಟ್ಯಾಕ್ಸಿ ಸೇರಿದಂತೆ ಇತರೆ ವಾಹನಗಳ ಓಡಾಟ ಕಡಿಮೆ ಇದ್ದುದರಿಂದ ಬಿಎಂಟಿಸಿ ವಾಯುವಜ್ರ ಬಸ್ಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿತ್ತು. ಮಧ್ಯಾಹ್ನ 12 ಗಂಟೆ ನಂತರ ಟ್ಯಾಕ್ಸಿ, ಕ್ಯಾಬ್ಗಳು ಸೇವೆ ಪುನರಾರಂಭಿಸಿದವು. ಸಂಯುಕ್ತ ಜನತಾ ದಳದ ರಾಜ್ಯ ಘಟಕದ ಅಧ್ಯಕ್ಷ ಎಂ.ಪಿ.ನಾಡಗೌಡ, ಪ್ರವಾಸಿ ಟ್ಯಾಕ್ಸಿ ಮಾಲೀಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಹೊಳ್ಳ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.<br /> <br /> <strong>ಟೋಲ್ ಶುಲ್ಕ ಪರಿಶೀಲನೆಗೆ ಜಂಟಿ ಸಮಿತಿ ರಚನೆ<br /> ಬೆಂಗಳೂರು: </strong>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗುವ ರಾಷ್ಟ್ರೀಯ ಹೆದ್ದಾರಿಯ ಟೋಲ್ ಶುಲ್ಕ ವಿವಾದ ಕುರಿತು ಪರಿಶೀಲನೆ ನಡೆಸಲು ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ಸಮಿತಿ ರಚಿಸಲಾಗಿದೆ.</p>.<p>ಈ ಸಮಿತಿಯು ಕೇಂದ್ರ ಭೂಸಾರಿಗೆ ಸಚಿವ ಆಸ್ಕರ್ ಫರ್ನಾಂಡಿಸ್ ಅವರಿಗೆ ಇದೇ 12ರಂದು ವರದಿ ಸಲ್ಲಿಸಲಿದೆ.<br /> <br /> ಸಚಿವ ಫರ್ನಾಂಡಿಸ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಎನ್ಎಚ್ಎಐ, ರಾಜ್ಯ ಸರ್ಕಾರ, ನವಯುಗ ಎಂಜಿನಿಯರಿಂಗ್ ಕಂಪೆನಿ ಪ್ರತಿನಿಧಿಗಳ ಜೊತೆ ಶುಕ್ರವಾರ ಸಭೆ ನಡೆಸಿದರು. ಶುಲ್ಕ ಹೆಚ್ಚಳ ವಿವಾದಕ್ಕೆ ಸಂಬಂಧಿಸಿದಂತೆ ಸಮಿತಿ ರಚನೆಯಾಗಿದ್ದನ್ನು ಹೊರತುಪಡಿಸಿದರೆ, ಬೇರೆ ಯಾವುದೇ ಮಹತ್ವದ ನಿರ್ಧಾರ ಶುಕ್ರವಾರದ ಸಭೆಯಲ್ಲಿ ಆಗಿಲ್ಲ ಎಂದು ಮೂಲಗಳು ತಿಳಿಸಿವೆ.<br /> <br /> ಟೋಲ್ ಶುಲ್ಕ ಕಡಿಮೆ ಮಾಡಬೇಕು ಎಂದಾದರೆ ಅದರಿಂದ ಆಗುವ ನಷ್ಟವನ್ನು ರಾಜ್ಯ ಅಥವಾ ಕೇಂದ್ರ ಸರ್ಕಾರ ಭರ್ತಿ ಮಾಡಿಕೊಡಬೇಕು.<br /> <br /> ಇದು ಸಾಧ್ಯವಾಗದಿದ್ದರೆ ಟೋಲ್ ಶುಲ್ಕ ಕಡಿಮೆ ಮಾಡಲು ಆಗದು ಎಂದು ನವಯುಗ ಕಂಪೆನಿ ಪ್ರತಿನಿಧಿಗಳು ಸ್ಪಷ್ಟಪಡಿಸಿದರು.<br /> ಟೋಲ್ ಶುಲ್ಕ ಹೆಚ್ಚಳ ಮಾಡಿದ ಕ್ರಮವನ್ನು ಒಪ್ಪಲಾಗದು. ಏಕೆಂದರೆ ನವಯುಗ ಕಂಪೆನಿ ಸರ್ವಿಸ್ ರಸ್ತೆ ನಿರ್ಮಿಸಿಲ್ಲ ಎಂದು ಸರ್ಕಾರದ ಪ್ರತಿನಿಧಿಗಳು ಹೇಳಿದರು.<br /> <br /> ‘ಟೋಲ್ ಶುಲ್ಕ ಹೆಚ್ಚಳದ ಲೆಕ್ಕಾಚಾರದಲ್ಲಿ ತಪ್ಪಿರಲು ಸಾಧ್ಯವಿಲ್ಲ. ಏಕೆಂದರೆ ಶುಲ್ಕ ಹೆಚ್ಚಳ ನಿರ್ಧಾರವನ್ನು ಹಲವು ಹಂತಗಳಲ್ಲಿ ಪರಿಶೀಲನೆಗೆ ಒಳಪಡಿಸಲಾಗುತ್ತದೆ. ಸರ್ವಿಸ್ ರಸ್ತೆ ನಿರ್ಮಾಣ ಪೂರ್ಣಗೊಳಿಸಲು ಜಮೀನು ನೀಡುವಂತೆ ಕೋರಿ ವಾಯುಪಡೆ, ರೈಲ್ವೆ ಇಲಾಖೆ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿ ಪ್ರಯೋಜನಕ್ಕೆ ಬಂದಿಲ್ಲ’ ಎಂದು ನವಯುಗ ಕಂಪೆನಿ ಪ್ರತಿನಿಧಿಗಳು ವಾದಿಸಿದರು.<br /> ಜಕ್ಕೂರು ವಾಯುನೆಲೆ, ಯಲಹಂಕದಲ್ಲಿರುವ ವಾಯುಪಡೆ ಕೇಂದ್ರದ ಬಳಿ ಮತ್ತು ವಿಮಾನ ನಿಲ್ದಾಣಕ್ಕೆ ಸಾಗುವ ಮಾರ್ಗದಲ್ಲಿ ಬರುವ ರೈಲ್ವೆ ಮೇಲ್ಸೇತುವೆ ಸಮೀಪ ಜಮೀನು ಸ್ವಾಧೀನಕ್ಕೆ ಅಡಚಣೆ ಎದುರಾದ ಕಾರಣ ಸರ್ವಿಸ್ ರಸ್ತೆಯ ಕಾರ್ಯ ಪೂರ್ಣಗೊಂಡಿಲ್ಲ ಎನ್ನಲಾಗಿದೆ.<br /> <br /> ‘ಜಂಟಿ ಸಮಿತಿ ವರದಿ ಸಲ್ಲಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನ್ನ ಕಳಕಳಿಯನ್ನು ವ್ಯಕ್ತಪಡಿಸಿದೆ’ ಎಂದು ಫರ್ನಾಂಡಿಸ್ ಅವರು ಸಭೆಯ ನಂತರ ತಿಳಿಸಿದರು.<br /> <br /> ವಿವಾದ ಕುರಿತು ಅಂತಿಮ ತೀರ್ಮಾನ ಹೊರಬರುವವರೆಗೆ ಟೋಲ್ ಶುಲ್ಕದಲ್ಲಿ ಕಡಿತ ಮಾಡಲಾಗುವುದೇ ಎಂಬ ಪ್ರಶ್ನೆಗೆ, ‘ಇಲ್ಲ’ ಎಂಬ ಉತ್ತರ ಎನ್ಎಚ್ಎಐ ಅಧಿಕಾರಿಗಳಿಂದ ಬಂತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>