<p><strong>ಕೂಡ್ಲಿಗಿ (ಬಳ್ಳಾರಿ):</strong> ತಾಲ್ಲೂಕಿನ ಶಿವಪುರ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭಾನುವಾರ ಮಧ್ಯಾಹ್ನ ತೈಲ ಟ್ಯಾಂಕರ್ ಉರುಳಿಬಿದ್ದು, ಸೋರಿಹೋಗುತ್ತಿದ್ದ ಪೆಟ್ರೋಲ್ ಹಾಗೂ ಡೀಸೆಲ್ಗೆ ಜನ ಮುಗಿಬಿದ್ದ ಘಟನೆ ನಡೆದಿದೆ. <br /> <br /> ಹಾಸನದಿಂದ ಹೊಸಪೇಟೆಗೆ ಹೊರಟಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ಟ್ಯಾಂಕರ್ನಿಂದ ಸೋರುತ್ತಿದ್ದ ಡೀಸೆಲ್, ಪೆಟ್ರೋಲ್ ಅನ್ನು ಜನತೆ ಮುಗಿಬಿದ್ದು ಕೈಗೆ ಸಿಕ್ಕ ಪಾತ್ರೆ, ಕ್ಯಾರಿಯರ್, ಡಬ್ಬಿಗಳಲ್ಲಿ ತುಂಬಿಕೊಂಡು ಹೋದರು.<br /> <br /> ಟ್ಯಾಂಕರ್ನಲ್ಲಿ ಸುಮಾರು 20,000 ಲೀ. ಡೀಸೆಲ್ ಹಾಗೂ ಪೆಟ್ರೋಲ್ ಸಾಗಣೆಯಾಗುತ್ತಿತ್ತೆಂದು ಪೊಲೀಸ್ ಮೂಲಗಳು ತಿಳಿಸಿವೆ. ಟ್ಯಾಂಕರ್ನಿಂದ ಅಂದಾಜು ಶೇ 30-35ರಷ್ಟು ಡೀಸೆಲ್ ಹಾಗೂ ಪೆಟ್ರೋಲ್ ಸೋರಿಕೆಯಾಗಿದೆ ಎನ್ನಲಾಗಿದೆ.<br /> <br /> ಅಗ್ನಿಶಾಮಕ ದಳದವರು ಟ್ಯಾಂಕರನ್ನು ಎತ್ತಿ ನಿಲ್ಲಿಸಿ, ಇಂಧನ ಸೋರಿಕೆಯನ್ನು ತಡೆಗಟ್ಟಿದ್ದಾರೆ. ಸ್ಥಳಕ್ಕೆ ಸಿಪಿಐ ಓ.ಬಿ.ಕಲ್ಲೇಶಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ (ಬಳ್ಳಾರಿ):</strong> ತಾಲ್ಲೂಕಿನ ಶಿವಪುರ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಭಾನುವಾರ ಮಧ್ಯಾಹ್ನ ತೈಲ ಟ್ಯಾಂಕರ್ ಉರುಳಿಬಿದ್ದು, ಸೋರಿಹೋಗುತ್ತಿದ್ದ ಪೆಟ್ರೋಲ್ ಹಾಗೂ ಡೀಸೆಲ್ಗೆ ಜನ ಮುಗಿಬಿದ್ದ ಘಟನೆ ನಡೆದಿದೆ. <br /> <br /> ಹಾಸನದಿಂದ ಹೊಸಪೇಟೆಗೆ ಹೊರಟಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ಟ್ಯಾಂಕರ್ನಿಂದ ಸೋರುತ್ತಿದ್ದ ಡೀಸೆಲ್, ಪೆಟ್ರೋಲ್ ಅನ್ನು ಜನತೆ ಮುಗಿಬಿದ್ದು ಕೈಗೆ ಸಿಕ್ಕ ಪಾತ್ರೆ, ಕ್ಯಾರಿಯರ್, ಡಬ್ಬಿಗಳಲ್ಲಿ ತುಂಬಿಕೊಂಡು ಹೋದರು.<br /> <br /> ಟ್ಯಾಂಕರ್ನಲ್ಲಿ ಸುಮಾರು 20,000 ಲೀ. ಡೀಸೆಲ್ ಹಾಗೂ ಪೆಟ್ರೋಲ್ ಸಾಗಣೆಯಾಗುತ್ತಿತ್ತೆಂದು ಪೊಲೀಸ್ ಮೂಲಗಳು ತಿಳಿಸಿವೆ. ಟ್ಯಾಂಕರ್ನಿಂದ ಅಂದಾಜು ಶೇ 30-35ರಷ್ಟು ಡೀಸೆಲ್ ಹಾಗೂ ಪೆಟ್ರೋಲ್ ಸೋರಿಕೆಯಾಗಿದೆ ಎನ್ನಲಾಗಿದೆ.<br /> <br /> ಅಗ್ನಿಶಾಮಕ ದಳದವರು ಟ್ಯಾಂಕರನ್ನು ಎತ್ತಿ ನಿಲ್ಲಿಸಿ, ಇಂಧನ ಸೋರಿಕೆಯನ್ನು ತಡೆಗಟ್ಟಿದ್ದಾರೆ. ಸ್ಥಳಕ್ಕೆ ಸಿಪಿಐ ಓ.ಬಿ.ಕಲ್ಲೇಶಪ್ಪ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>