<p>ಚಿಕ್ಕಬಳ್ಳಾಪುರ: ಜಿಲ್ಲೆಯ ವಿವಿಧೆಡೆ ಟ್ಯಾಂಕ್ ನಿರ್ಮಾಣಕ್ಕೆ ಹಣ ಪಡೆಯಲಾಗಿದೆ. ಕಾಮಗಾರಿಯಲ್ಲಿ ಅಕ್ರಮ ಕಂಡು ಬಂದಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಸಮಿತಿ ರಚಿಸಿ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿನ್ನಪ್ಪ ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.<br /> ೧೩ನೇ ಹಣಕಾಸಿನ ಯೋಜನೆಯಲ್ಲಿ ಜಿಲ್ಲೆಯ ಎಲ್ಲ ೨೫ ಕ್ಷೇತ್ರಗಳಿಗೆ ₨ ೩.೬ ಕೋಟಿಯನ್ನು ಸಮನಾಗಿ ಹಂಚಲಾಗುವುದು ಎಂದು ಘೋಷಿಸಿದರು.<br /> <br /> ಬಾಗೇಪಲ್ಲಿ ತಾಲ್ಲೂಕು ಜೂಲಪಾಳ್ಯದಲ್ಲಿ ವೈದ್ಯರು ಅನಧಿಕೃತ ಗೈರು ಹಾಜರಾಗುತ್ತಿದ್ದಾರೆ. ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರನ್ನು ನೇಮಿಸಬೇಕೆಂದು ಸದಸ್ಯರು ಕೋರಿದರು.<br /> <br /> ಜೂಲಪಾಳ್ಯಕ್ಕೆ ಮತ್ತೊಬ್ಬ ವೈದ್ಯರನ್ನು ಹಂಗಾಮಿಯಾಗಿ ನೇಮಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಭರವಸೆ ನೀಡಿದರು.<br /> <br /> ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲಾ ಮತ್ತು ನಗರಗೆರೆ ಗ್ರಾಮಗಳಿಗೆ ಅಂಬುಲೆನ್ಸ್ ಒದಗಿಸಲು ಸಭೆ ಅನುಮೋದಿಸಿತು.<br /> ಜಿಲ್ಲೆಯಲ್ಲಿ ೮೦ ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ನಗರದಲ್ಲಿಯೇ 9 ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಎಲ್ಲ ಘಟಕಗಳನ್ನು ಸುಸ್ಥಿತಿಯಲ್ಲಿಡಬೇಕು ಮತ್ತು ಉತ್ತಮ ಗುಣಮಟ್ಟದ ನೀರು ಸರಬರಾಜು ಮಾಡಲು ಕ್ರಮ ವಹಿಸಬೇಕು ಎಂದು ಜಿ.ಪಂ. ಉಪಾಧ್ಯಕ್ಷ ರಾಘವೇಂದ್ರ ಹನುಮಾನ್ ಸೂಚಿಸಿದರು.<br /> <br /> ಶಿಡ್ಲಘಟ್ಟ ಶಾಸಕ ಎಂ.ರಾಜಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಜಿಲ್ಲೆಯ ವಿವಿಧೆಡೆ ಟ್ಯಾಂಕ್ ನಿರ್ಮಾಣಕ್ಕೆ ಹಣ ಪಡೆಯಲಾಗಿದೆ. ಕಾಮಗಾರಿಯಲ್ಲಿ ಅಕ್ರಮ ಕಂಡು ಬಂದಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಸಮಿತಿ ರಚಿಸಿ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿನ್ನಪ್ಪ ಹೇಳಿದರು.<br /> <br /> ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.<br /> ೧೩ನೇ ಹಣಕಾಸಿನ ಯೋಜನೆಯಲ್ಲಿ ಜಿಲ್ಲೆಯ ಎಲ್ಲ ೨೫ ಕ್ಷೇತ್ರಗಳಿಗೆ ₨ ೩.೬ ಕೋಟಿಯನ್ನು ಸಮನಾಗಿ ಹಂಚಲಾಗುವುದು ಎಂದು ಘೋಷಿಸಿದರು.<br /> <br /> ಬಾಗೇಪಲ್ಲಿ ತಾಲ್ಲೂಕು ಜೂಲಪಾಳ್ಯದಲ್ಲಿ ವೈದ್ಯರು ಅನಧಿಕೃತ ಗೈರು ಹಾಜರಾಗುತ್ತಿದ್ದಾರೆ. ಇದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ. ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರನ್ನು ನೇಮಿಸಬೇಕೆಂದು ಸದಸ್ಯರು ಕೋರಿದರು.<br /> <br /> ಜೂಲಪಾಳ್ಯಕ್ಕೆ ಮತ್ತೊಬ್ಬ ವೈದ್ಯರನ್ನು ಹಂಗಾಮಿಯಾಗಿ ನೇಮಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಭರವಸೆ ನೀಡಿದರು.<br /> <br /> ಚಿಂತಾಮಣಿ ತಾಲ್ಲೂಕಿನ ಮುರುಗಮಲ್ಲಾ ಮತ್ತು ನಗರಗೆರೆ ಗ್ರಾಮಗಳಿಗೆ ಅಂಬುಲೆನ್ಸ್ ಒದಗಿಸಲು ಸಭೆ ಅನುಮೋದಿಸಿತು.<br /> ಜಿಲ್ಲೆಯಲ್ಲಿ ೮೦ ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ನಗರದಲ್ಲಿಯೇ 9 ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಎಲ್ಲ ಘಟಕಗಳನ್ನು ಸುಸ್ಥಿತಿಯಲ್ಲಿಡಬೇಕು ಮತ್ತು ಉತ್ತಮ ಗುಣಮಟ್ಟದ ನೀರು ಸರಬರಾಜು ಮಾಡಲು ಕ್ರಮ ವಹಿಸಬೇಕು ಎಂದು ಜಿ.ಪಂ. ಉಪಾಧ್ಯಕ್ಷ ರಾಘವೇಂದ್ರ ಹನುಮಾನ್ ಸೂಚಿಸಿದರು.<br /> <br /> ಶಿಡ್ಲಘಟ್ಟ ಶಾಸಕ ಎಂ.ರಾಜಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೀಲಾ ಮಂಜುನಾಥ್ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>