<p><strong>ಬೆಂಗಳೂರು</strong>: `ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಎಲ್ಲ ಕೊಳವೆ ಬಾವಿಗಳಿಗೆ ಈ ವರ್ಷದಲ್ಲೇ ವಿದ್ಯುತ್ ಸಂಪರ್ಕ, ಟ್ರಾನ್ಸ್ಫಾರ್ಮರ್ಗಳ (ಟಿ.ಸಿ) ಕೊರತೆ ನೀಗಿಸಲು ತಾಲ್ಲೂಕು ಮಟ್ಟದಲ್ಲಿ `ಟಿ.ಸಿ. ಬ್ಯಾಂಕ್' ಸ್ಥಾಪನೆ, ಬಾಕಿ ಇರುವ ನೀರಾವರಿ ಯೋಜನೆಗಳನ್ನು ಐದು ವರ್ಷಗಳಲ್ಲಿ ಪೂರ್ಣ'.<br /> ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಗೆ ವಿಧಾನಸಭೆಯಲ್ಲಿ ಬುಧವಾರ ಉತ್ತರ ನೀಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಅಂಶಗಳನ್ನು ಪ್ರಕಟಿಸಿದರು.<br /> <br /> ಪರಿಶಿಷ್ಟರು, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಬಡ ರೈತರ ಜಮೀನುಗಳಲ್ಲಿ ಸರ್ಕಾರವೇ ಕೊಳವೆ ಬಾವಿ ಕೊರೆಯಲು ಅನುದಾನ ನೀಡಿತ್ತು. ಆದರೆ, ವಿದ್ಯುತ್ ಸಂಪರ್ಕ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ಬಾಕಿ ಇರುವ ಸುಮಾರು 31 ಸಾವಿರ ಕೊಳವೆ ಬಾವಿಗಳಿಗೆ ಈ ವರ್ಷದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಹೇಳಿದರು.<br /> <br /> ಪದೇ ಪದೇ ಟ್ರಾನ್ಸ್ಫಾರ್ಮರ್ಗಳು ಕೈಕೊಡುವುದರಿಂದ ಕೃಷಿಗೆ ಮಾತ್ರವಲ್ಲದೆ, ಕುಡಿಯುವ ನೀರು ಸರಬರಾಜಿಗೂ ತೊಂದರೆಯಾಗಿದೆ. ಇದನ್ನು ಸರಿ ಮಾಡುವ ಸಲುವಾಗಿ ತಾಲ್ಲೂಕು ಮಟ್ಟದಲ್ಲಿ `ಟಿ.ಸಿ. ಬ್ಯಾಂಕ್' ಸ್ಥಾಪಿಸಲಾಗುವುದು. ದುರಸ್ತಿಗೆ ಬಂದ ತಕ್ಷಣ ಅವುಗಳನ್ನು ಬದಲಿಸಲು ಈ ಬ್ಯಾಂಕ್ ಸಹಕಾರಿಯಾಗಲಿದೆ ಎಂದರು.<br /> <br /> ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ಕಂಪೆನಿಯಿಂದ ಟಿ.ಸಿ.ಗಳನ್ನು ಖರೀದಿಸುವುದಕ್ಕೆ ಪಾರದರ್ಶಕ ಕಾಯ್ದೆಯಡಿ ವಿನಾಯಿತಿ ನೀಡಲಾಗಿದೆ. ಅಗತ್ಯ ಬಿದ್ದಾಗ ವಿದ್ಯುತ್ ಸರಬರಾಜು ಕಂಪೆನಿಗಳೇ ಟಿ.ಸಿ.ಗಳನ್ನು ನೇರವಾಗಿ ಖರೀದಿಸಬಹುದು ಎಂದು ಅವರು ಹೇಳಿದರು.<br /> <br /> ರಾಜ್ಯದಲ್ಲಿ 72 ಟಿ.ಸಿ. ರಿಪೇರಿ ಕೇಂದ್ರಗಳಿದ್ದು, ಅವುಗಳನ್ನು ನೂರಕ್ಕೆ ಹೆಚ್ಚಿಸಲಾಗುವುದು. ಮುಂದಿನ ದಿನಗಳಲ್ಲಿ ಅವುಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶ ಇದೆ. ಹೆಚ್ಚು ಸಮಸ್ಯೆ ಇರುವ ಕಡೆ ಈ ರಿಪೇರಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ವಿವರಿಸಿದರು.<br /> <br /> <strong>ನೀರಾವರಿಗೆ ಆದ್ಯತೆ</strong>: ಎತ್ತಿನಹೊಳೆ, ಕಾವೇರಿ ಮತ್ತು ಕೃಷ್ಣಾ ಕೊಳ್ಳ ಸೇರಿದಂತೆ ಬಾಕಿ ಇರುವ ಎಲ್ಲ ನೀರಾವರಿ ಯೋಜನೆಗಳನ್ನು ಐದು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಈ ಸಲುವಾಗಿ ಪ್ರತಿ ವರ್ಷ ಕನಿಷ್ಠ 10 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಹೇಳಿದರು.<br /> <br /> <strong>ಕುಡಿಯುವ ನೀರು</strong>: ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಕೊಳವೆ ಬಾವಿ ಕೊರೆಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಬಳಿ 38 ಕೋಟಿ ರೂಪಾಯಿ ಅನುದಾನ ಇದೆ. ಇನ್ನೂ ಹೆಚ್ಚಿನ ಅನುದಾನ ಬೇಕಿದ್ದರೆ ತಕ್ಷಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ.<br /> <br /> ಶಾಸಕರ ಅಧ್ಯಕ್ಷತೆಯ ಕಾರ್ಯಪಡೆಗಳು ಸಭೆ ಸೇರಿ, ಕೊಳವೆ ಬಾವಿ ಕೊರೆಸುವ ಸಂಬಂಧ ತೀರ್ಮಾನ ತೆಗೆದುಕೊಳ್ಳಬೇಕು ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: `ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಎಲ್ಲ ಕೊಳವೆ ಬಾವಿಗಳಿಗೆ ಈ ವರ್ಷದಲ್ಲೇ ವಿದ್ಯುತ್ ಸಂಪರ್ಕ, ಟ್ರಾನ್ಸ್ಫಾರ್ಮರ್ಗಳ (ಟಿ.ಸಿ) ಕೊರತೆ ನೀಗಿಸಲು ತಾಲ್ಲೂಕು ಮಟ್ಟದಲ್ಲಿ `ಟಿ.ಸಿ. ಬ್ಯಾಂಕ್' ಸ್ಥಾಪನೆ, ಬಾಕಿ ಇರುವ ನೀರಾವರಿ ಯೋಜನೆಗಳನ್ನು ಐದು ವರ್ಷಗಳಲ್ಲಿ ಪೂರ್ಣ'.<br /> ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ನಡೆದ ಚರ್ಚೆಗೆ ವಿಧಾನಸಭೆಯಲ್ಲಿ ಬುಧವಾರ ಉತ್ತರ ನೀಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಅಂಶಗಳನ್ನು ಪ್ರಕಟಿಸಿದರು.<br /> <br /> ಪರಿಶಿಷ್ಟರು, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಬಡ ರೈತರ ಜಮೀನುಗಳಲ್ಲಿ ಸರ್ಕಾರವೇ ಕೊಳವೆ ಬಾವಿ ಕೊರೆಯಲು ಅನುದಾನ ನೀಡಿತ್ತು. ಆದರೆ, ವಿದ್ಯುತ್ ಸಂಪರ್ಕ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ಬಾಕಿ ಇರುವ ಸುಮಾರು 31 ಸಾವಿರ ಕೊಳವೆ ಬಾವಿಗಳಿಗೆ ಈ ವರ್ಷದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಹೇಳಿದರು.<br /> <br /> ಪದೇ ಪದೇ ಟ್ರಾನ್ಸ್ಫಾರ್ಮರ್ಗಳು ಕೈಕೊಡುವುದರಿಂದ ಕೃಷಿಗೆ ಮಾತ್ರವಲ್ಲದೆ, ಕುಡಿಯುವ ನೀರು ಸರಬರಾಜಿಗೂ ತೊಂದರೆಯಾಗಿದೆ. ಇದನ್ನು ಸರಿ ಮಾಡುವ ಸಲುವಾಗಿ ತಾಲ್ಲೂಕು ಮಟ್ಟದಲ್ಲಿ `ಟಿ.ಸಿ. ಬ್ಯಾಂಕ್' ಸ್ಥಾಪಿಸಲಾಗುವುದು. ದುರಸ್ತಿಗೆ ಬಂದ ತಕ್ಷಣ ಅವುಗಳನ್ನು ಬದಲಿಸಲು ಈ ಬ್ಯಾಂಕ್ ಸಹಕಾರಿಯಾಗಲಿದೆ ಎಂದರು.<br /> <br /> ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ಕಂಪೆನಿಯಿಂದ ಟಿ.ಸಿ.ಗಳನ್ನು ಖರೀದಿಸುವುದಕ್ಕೆ ಪಾರದರ್ಶಕ ಕಾಯ್ದೆಯಡಿ ವಿನಾಯಿತಿ ನೀಡಲಾಗಿದೆ. ಅಗತ್ಯ ಬಿದ್ದಾಗ ವಿದ್ಯುತ್ ಸರಬರಾಜು ಕಂಪೆನಿಗಳೇ ಟಿ.ಸಿ.ಗಳನ್ನು ನೇರವಾಗಿ ಖರೀದಿಸಬಹುದು ಎಂದು ಅವರು ಹೇಳಿದರು.<br /> <br /> ರಾಜ್ಯದಲ್ಲಿ 72 ಟಿ.ಸಿ. ರಿಪೇರಿ ಕೇಂದ್ರಗಳಿದ್ದು, ಅವುಗಳನ್ನು ನೂರಕ್ಕೆ ಹೆಚ್ಚಿಸಲಾಗುವುದು. ಮುಂದಿನ ದಿನಗಳಲ್ಲಿ ಅವುಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸುವ ಉದ್ದೇಶ ಇದೆ. ಹೆಚ್ಚು ಸಮಸ್ಯೆ ಇರುವ ಕಡೆ ಈ ರಿಪೇರಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ವಿವರಿಸಿದರು.<br /> <br /> <strong>ನೀರಾವರಿಗೆ ಆದ್ಯತೆ</strong>: ಎತ್ತಿನಹೊಳೆ, ಕಾವೇರಿ ಮತ್ತು ಕೃಷ್ಣಾ ಕೊಳ್ಳ ಸೇರಿದಂತೆ ಬಾಕಿ ಇರುವ ಎಲ್ಲ ನೀರಾವರಿ ಯೋಜನೆಗಳನ್ನು ಐದು ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಈ ಸಲುವಾಗಿ ಪ್ರತಿ ವರ್ಷ ಕನಿಷ್ಠ 10 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗುವುದು ಎಂದು ಹೇಳಿದರು.<br /> <br /> <strong>ಕುಡಿಯುವ ನೀರು</strong>: ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಕೊಳವೆ ಬಾವಿ ಕೊರೆಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಬಳಿ 38 ಕೋಟಿ ರೂಪಾಯಿ ಅನುದಾನ ಇದೆ. ಇನ್ನೂ ಹೆಚ್ಚಿನ ಅನುದಾನ ಬೇಕಿದ್ದರೆ ತಕ್ಷಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ.<br /> <br /> ಶಾಸಕರ ಅಧ್ಯಕ್ಷತೆಯ ಕಾರ್ಯಪಡೆಗಳು ಸಭೆ ಸೇರಿ, ಕೊಳವೆ ಬಾವಿ ಕೊರೆಸುವ ಸಂಬಂಧ ತೀರ್ಮಾನ ತೆಗೆದುಕೊಳ್ಳಬೇಕು ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>