<p><strong>ಬೆಂಗಳೂರು: </strong>`ಆತ್ಮವಿಶ್ವಾಸ ಮತ್ತು ಪರಿಶ್ರಮದಿಂದಲೇ ಲೇಖಕಿಯಾಗಿ ಗುರುತಿಸಿಕೊಂಡ ಡಾ.ಅನುಪಮಾ ನಿರಂಜನ ಅವರು ಎಲ್ಲ ಯುವ ಲೇಖಕಿಯರಿಗೆ ಸ್ಫೂರ್ತಿ~ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವಸುಂಧರಾ ಭೂಪತಿ ಶ್ಲಾಘಿಸಿದರು.<br /> <br /> ಕನ್ನಡ ಸಂಘರ್ಷ ಸಮಿತಿಯು ನಗರದಲ್ಲಿ ಶನಿವಾರ ಆಯೋಜಿಸಿದ್ದ ಡಾ.ಅನುಪಮಾ ನಿರಂಜನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.`ಮಹಿಳೆಯರು ನಿರಂತರ ಕಲಿಕೆ ಮತ್ತು ಪ್ರಸ್ತುತ ವಿದ್ಯಮಾನಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು.<br /> <br /> ಆಧುನಿಕ ತಂತ್ರಜ್ಞಾನಗಳ ಬಗ್ಗೆ ಹೆಚ್ಚಿನ ಅರಿವು ಪಡೆದುಕೊಂಡಾಗ ಮಾತ್ರ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಸಾಧನೆಗೆ ಮುಂದಡಿ ಇಡಬಹುದು~ ಎಂದು ಹೇಳಿದರು. `ವಿಮರ್ಶಾ ಜಗತ್ತಿಗೆ ಅಂಜದೇ ಮಹಿಳೆಯರು ಆತ್ಮತೃಪ್ತಿಗಾಗಿ ಬರವಣಿಗೆಯನ್ನು ಆರಂಭಿಸಬೇಕು.ಆಗ ಮಾತ್ರ ಸೃಜನಶೀಲತೆಯೆಂಬುದು ಬರಹಗಳಲ್ಲಿ ಪಡಿಮೂಡುತ್ತದೆ~ ಎಂದು ಹೇಳಿದರು.<br /> <br /> ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಲೇಖಕಿ ಕುಲಶೇಖರಿ, ` ಅನುಪಮಾ ಅಂತಹ ಹಿರಿಯಕ್ಕ ಅವರ ಮಾರ್ಗದರ್ಶನದಲ್ಲಿ ಸಾಹಿತ್ಯ ಮತ್ತು ಭಾಷೆಯ ಬಗ್ಗೆ ಅಪಾರ ತಿಳಿದುಕೊಳ್ಳಲು ಸಾಧ್ಯವಾಯಿತು. ಅವರ ಹೆಸರಿನಲ್ಲಿ ಪ್ರಶಸ್ತಿ ಪಡೆಯುತ್ತಿರುವುದಕ್ಕೆ ಸಂತಸವಾಗಿದೆ~ ಎಂದು ಹೇಳಿದರು.<br /> ಲೇಖಕಿ ರಾಣಿ ಗೋವಿಂದರಾಜು, ಸಮಿತಿಯ ಸಂಚಾಲಕಿ ಗಾಯತ್ರಿ ರಾಮಣ್ಣ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಆತ್ಮವಿಶ್ವಾಸ ಮತ್ತು ಪರಿಶ್ರಮದಿಂದಲೇ ಲೇಖಕಿಯಾಗಿ ಗುರುತಿಸಿಕೊಂಡ ಡಾ.ಅನುಪಮಾ ನಿರಂಜನ ಅವರು ಎಲ್ಲ ಯುವ ಲೇಖಕಿಯರಿಗೆ ಸ್ಫೂರ್ತಿ~ ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ವಸುಂಧರಾ ಭೂಪತಿ ಶ್ಲಾಘಿಸಿದರು.<br /> <br /> ಕನ್ನಡ ಸಂಘರ್ಷ ಸಮಿತಿಯು ನಗರದಲ್ಲಿ ಶನಿವಾರ ಆಯೋಜಿಸಿದ್ದ ಡಾ.ಅನುಪಮಾ ನಿರಂಜನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.`ಮಹಿಳೆಯರು ನಿರಂತರ ಕಲಿಕೆ ಮತ್ತು ಪ್ರಸ್ತುತ ವಿದ್ಯಮಾನಗಳ ಕುರಿತು ಮಾಹಿತಿ ಪಡೆದುಕೊಳ್ಳಬೇಕು.<br /> <br /> ಆಧುನಿಕ ತಂತ್ರಜ್ಞಾನಗಳ ಬಗ್ಗೆ ಹೆಚ್ಚಿನ ಅರಿವು ಪಡೆದುಕೊಂಡಾಗ ಮಾತ್ರ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಸಾಧನೆಗೆ ಮುಂದಡಿ ಇಡಬಹುದು~ ಎಂದು ಹೇಳಿದರು. `ವಿಮರ್ಶಾ ಜಗತ್ತಿಗೆ ಅಂಜದೇ ಮಹಿಳೆಯರು ಆತ್ಮತೃಪ್ತಿಗಾಗಿ ಬರವಣಿಗೆಯನ್ನು ಆರಂಭಿಸಬೇಕು.ಆಗ ಮಾತ್ರ ಸೃಜನಶೀಲತೆಯೆಂಬುದು ಬರಹಗಳಲ್ಲಿ ಪಡಿಮೂಡುತ್ತದೆ~ ಎಂದು ಹೇಳಿದರು.<br /> <br /> ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಲೇಖಕಿ ಕುಲಶೇಖರಿ, ` ಅನುಪಮಾ ಅಂತಹ ಹಿರಿಯಕ್ಕ ಅವರ ಮಾರ್ಗದರ್ಶನದಲ್ಲಿ ಸಾಹಿತ್ಯ ಮತ್ತು ಭಾಷೆಯ ಬಗ್ಗೆ ಅಪಾರ ತಿಳಿದುಕೊಳ್ಳಲು ಸಾಧ್ಯವಾಯಿತು. ಅವರ ಹೆಸರಿನಲ್ಲಿ ಪ್ರಶಸ್ತಿ ಪಡೆಯುತ್ತಿರುವುದಕ್ಕೆ ಸಂತಸವಾಗಿದೆ~ ಎಂದು ಹೇಳಿದರು.<br /> ಲೇಖಕಿ ರಾಣಿ ಗೋವಿಂದರಾಜು, ಸಮಿತಿಯ ಸಂಚಾಲಕಿ ಗಾಯತ್ರಿ ರಾಮಣ್ಣ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>