<p><strong>ಗುಲ್ಬರ್ಗ: </strong>ಅನುಕಂಪದ ಆಧಾರದ ಮೇಲೆ ನೌಕರಿ ಆದೇಶ ನೀಡುವಾಗ ನಿಯಮ ಉಲ್ಲಂಘಿಸಿದ್ದನ್ನು ಪರಿಗಣಿಸಿ ಗುಲ್ಬರ್ಗ ಹೈಕೋರ್ಟ್ ಸಂಚಾರಿ ಪೀಠವು ಈ ಹಿಂದೆ ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ, ಈಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಕಾರ್ಯದರ್ಶಿಯಾಗಿರುವ ಡಾ. ಶಾಲಿನಿ ರಜನೀಶ್ ಸೇರಿ ಇಬ್ಬರು ಅಧಿಕಾರಿಗಳಿಗೆ ರೂ. 10 ಸಾವಿರ ದಂಡ ವಿಧಿಸಿದೆ.<br /> <br /> `ನಿಯಮಗಳನ್ನು ಗಮನಿಸದೆ ತಮಗೆ ಸರಿ ಕಂಡಿದ್ದನ್ನು ಅನುಷ್ಠಾನಗೊಳಿಸಲು ಮುಂದಾಗುವುದು ಸರ್ಕಾರಿ ನೌಕರನ ಕಾರ್ಯವಲ್ಲ. ಇಬ್ಬರು ಅಧಿಕಾರಿಗಳು ಈ ರೀತಿ ಮಾಡಿರುವುದನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ~ ಎಂದು ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಡಿ.ವಿ.ಶೈಲೇಂದ್ರಕುಮಾರ, ಎಚ್.ಎಸ್. ಕೆಂಪಣ್ಣ ಆದೇಶದಲ್ಲಿ ಹೇಳಿದ್ದಾರೆ.<br /> <br /> ಉದ್ಯೋಗಕ್ಕಾಗಿ ಆರ್ಜಿ ಸಲ್ಲಿಸಿದ್ದ ಅಭ್ಯರ್ಥಿಯು ತಂದೆ ಮೃತಪಟ್ಟ ಒಂದು ವರ್ಷದೊಳಗೆ ಪ್ರಾಪ್ತ ವಯಸ್ಸು ಆಗಿರಲಿಲ್ಲ ಎನ್ನುವುದನ್ನು ಆಧಾರವಾಗಿ ಇಟ್ಟುಕೊಂಡು ಸಂಚಾರಿ ಪೀಠವು ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇದೇ ವೇಳೆ ಕೈ ಬಿಟ್ಟಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಲ್ಬರ್ಗ: </strong>ಅನುಕಂಪದ ಆಧಾರದ ಮೇಲೆ ನೌಕರಿ ಆದೇಶ ನೀಡುವಾಗ ನಿಯಮ ಉಲ್ಲಂಘಿಸಿದ್ದನ್ನು ಪರಿಗಣಿಸಿ ಗುಲ್ಬರ್ಗ ಹೈಕೋರ್ಟ್ ಸಂಚಾರಿ ಪೀಠವು ಈ ಹಿಂದೆ ಬೆಳಗಾವಿ ಜಿಲ್ಲಾಧಿಕಾರಿಯಾಗಿದ್ದ, ಈಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಕಾರ್ಯದರ್ಶಿಯಾಗಿರುವ ಡಾ. ಶಾಲಿನಿ ರಜನೀಶ್ ಸೇರಿ ಇಬ್ಬರು ಅಧಿಕಾರಿಗಳಿಗೆ ರೂ. 10 ಸಾವಿರ ದಂಡ ವಿಧಿಸಿದೆ.<br /> <br /> `ನಿಯಮಗಳನ್ನು ಗಮನಿಸದೆ ತಮಗೆ ಸರಿ ಕಂಡಿದ್ದನ್ನು ಅನುಷ್ಠಾನಗೊಳಿಸಲು ಮುಂದಾಗುವುದು ಸರ್ಕಾರಿ ನೌಕರನ ಕಾರ್ಯವಲ್ಲ. ಇಬ್ಬರು ಅಧಿಕಾರಿಗಳು ಈ ರೀತಿ ಮಾಡಿರುವುದನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ~ ಎಂದು ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಡಿ.ವಿ.ಶೈಲೇಂದ್ರಕುಮಾರ, ಎಚ್.ಎಸ್. ಕೆಂಪಣ್ಣ ಆದೇಶದಲ್ಲಿ ಹೇಳಿದ್ದಾರೆ.<br /> <br /> ಉದ್ಯೋಗಕ್ಕಾಗಿ ಆರ್ಜಿ ಸಲ್ಲಿಸಿದ್ದ ಅಭ್ಯರ್ಥಿಯು ತಂದೆ ಮೃತಪಟ್ಟ ಒಂದು ವರ್ಷದೊಳಗೆ ಪ್ರಾಪ್ತ ವಯಸ್ಸು ಆಗಿರಲಿಲ್ಲ ಎನ್ನುವುದನ್ನು ಆಧಾರವಾಗಿ ಇಟ್ಟುಕೊಂಡು ಸಂಚಾರಿ ಪೀಠವು ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇದೇ ವೇಳೆ ಕೈ ಬಿಟ್ಟಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>