<p>ಬೆಳಗಾವಿ: `ಬೈಲಹೊಂಗಲದಲ್ಲಿ ಬುಧವಾರ ಆಟೋರಿಕ್ಷಾ ಚಾಲಕರು ನನ್ನ ವಿರುದ್ಧ ಪ್ರತಿಭಟನೆ ನಡೆಸಿ, ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಈವರೆಗೂ ಡಿಎಸ್ಪಿ ಈ ಬಗ್ಗೆ ನನಗೆ ತಿಳಿಸಿಲ್ಲ. ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು~ ಎಂದು ಶಾಸಕ ಜಗದೀಶ ಮೆಟಗುಡ್ಡ ಪಟ್ಟು ಹಿಡಿದ ಪ್ರಸಂಗ ಗುರುವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆಯಿತು. <br /> <br /> ಬುಧವಾರ ಬೈಲಹೊಂಗಲದಲ್ಲಿ ಆಟೊರಿಕ್ಷಾ ಚಾಲಕರ ವಿರುದ್ಧ ಹರಿಹಾಯ್ದಿದ್ದ ಶಾಸಕ ಮೆಟಗುಡ್ಡ ವಿರುದ್ಧ ಪ್ರತಿಭಟನೆ ನಡೆದಿತ್ತು. ಶಾಸಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ಠಾಣೆಗೆ ಮನವಿ ಸಹ ಸಲ್ಲಿಕೆಯಾಗಿತ್ತು. <br /> <br /> ಈ ವಿಷಯ ಪತ್ರಿಕೆಗಳಲ್ಲಿ ಬಂದಿದ್ದರಿಂದ ತಮಗೆ ಅವಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಶಾಸಕರು, ಡಿಎಸ್ಪಿ ಹುದ್ದೆ ಖಾಲಿ ಇದ್ದರೂ ಪರವಾಗಿಲ್ಲ, ಕೂಡಲೇ ಅವರನ್ನು ವರ್ಗಾಯಿಸಬೇಕು ಎಂದು ಆಗ್ರಹಿಸಿದರು. <br /> <br /> ಬೈಲಹೊಂಗಲದ ಬಸ್ ನಿಲ್ದಾಣದೊಳಗೆ ಆಟೋರಿಕ್ಷಾ ನಿಲ್ದಾಣ ಮಾಡಲಾಗಿದೆ. ಮೊದಲು ಅದನ್ನು ಹೊರಗೆ ಹಾಕಬೇಕು. ಆಟೋ ಚಾಲಕರು ಬಸ್ ನಿಲ್ದಾಣದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.<br /> <br /> ಆಟೋರಿಕ್ಷಾ ಚಾಲಕರೊಂದಿಗೆ ಜಿಪಂ ಮಾಜಿ ಸದಸ್ಯರು ಹೋರಾಟ ನಡೆಸುತ್ತಿದ್ದಾರೆ. ಸರ್ಕಾರಿ ಅಭಿವೃದ್ಧಿ ಕೆಲಸಗಳಿಗೆ ಅಡ್ಡ ಪಡಿಸುವುದೊಂದೇ ಇವರ ಕೆಲಸ. ಇತ್ತೀಚೆಗೆ ಮುಖ್ಯಮಂತ್ರಿಗಳು ಬರುವ ದಿನದಂದೇ ಬೈಲಹೊಂಗಲ ಬಂದ್ಗೆ ಅವರಿಗೆ ಅನುಮತಿ ನೀಡಲಾಗಿತ್ತು. ಇಂಥವರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. <br /> <br /> `ಅಭಿವೃದ್ಧಿ ಕೆಲಸಕ್ಕೆ ಅಡ್ಡ ಪಡಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ~ ಎಂದು ಎಸ್ಪಿ ಸಂದೀಪ ಪಾಟೀಲ ಹೇಳಿದರು. <br /> <br /> ಬಸ್ ನಿಲ್ದಾಣದೊಳಿಗಿರುವ ಆಟೊ ರಿಕ್ಷಾ ನಿಲ್ದಾಣವನ್ನು ಸ್ಥಳಾಂತರಿಸಬೇಕು. ಆಟೊ ಚಾಲಕರೊಂದಿಗೆ ಮಾತುಕತೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಎಸ್ಪಿ, ಉಪವಿಭಾಗಾಧಿಕಾರಿ ಹಾಗೂ ಆರ್ಟಿಒ ಅಧಿಕಾರಿಗಳಿಗೆ ಸಚಿವ ಉಮೇಶ ಕತ್ತಿ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: `ಬೈಲಹೊಂಗಲದಲ್ಲಿ ಬುಧವಾರ ಆಟೋರಿಕ್ಷಾ ಚಾಲಕರು ನನ್ನ ವಿರುದ್ಧ ಪ್ರತಿಭಟನೆ ನಡೆಸಿ, ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಈವರೆಗೂ ಡಿಎಸ್ಪಿ ಈ ಬಗ್ಗೆ ನನಗೆ ತಿಳಿಸಿಲ್ಲ. ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು~ ಎಂದು ಶಾಸಕ ಜಗದೀಶ ಮೆಟಗುಡ್ಡ ಪಟ್ಟು ಹಿಡಿದ ಪ್ರಸಂಗ ಗುರುವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾಮಗಾರಿಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆಯಿತು. <br /> <br /> ಬುಧವಾರ ಬೈಲಹೊಂಗಲದಲ್ಲಿ ಆಟೊರಿಕ್ಷಾ ಚಾಲಕರ ವಿರುದ್ಧ ಹರಿಹಾಯ್ದಿದ್ದ ಶಾಸಕ ಮೆಟಗುಡ್ಡ ವಿರುದ್ಧ ಪ್ರತಿಭಟನೆ ನಡೆದಿತ್ತು. ಶಾಸಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ಠಾಣೆಗೆ ಮನವಿ ಸಹ ಸಲ್ಲಿಕೆಯಾಗಿತ್ತು. <br /> <br /> ಈ ವಿಷಯ ಪತ್ರಿಕೆಗಳಲ್ಲಿ ಬಂದಿದ್ದರಿಂದ ತಮಗೆ ಅವಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಶಾಸಕರು, ಡಿಎಸ್ಪಿ ಹುದ್ದೆ ಖಾಲಿ ಇದ್ದರೂ ಪರವಾಗಿಲ್ಲ, ಕೂಡಲೇ ಅವರನ್ನು ವರ್ಗಾಯಿಸಬೇಕು ಎಂದು ಆಗ್ರಹಿಸಿದರು. <br /> <br /> ಬೈಲಹೊಂಗಲದ ಬಸ್ ನಿಲ್ದಾಣದೊಳಗೆ ಆಟೋರಿಕ್ಷಾ ನಿಲ್ದಾಣ ಮಾಡಲಾಗಿದೆ. ಮೊದಲು ಅದನ್ನು ಹೊರಗೆ ಹಾಕಬೇಕು. ಆಟೋ ಚಾಲಕರು ಬಸ್ ನಿಲ್ದಾಣದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.<br /> <br /> ಆಟೋರಿಕ್ಷಾ ಚಾಲಕರೊಂದಿಗೆ ಜಿಪಂ ಮಾಜಿ ಸದಸ್ಯರು ಹೋರಾಟ ನಡೆಸುತ್ತಿದ್ದಾರೆ. ಸರ್ಕಾರಿ ಅಭಿವೃದ್ಧಿ ಕೆಲಸಗಳಿಗೆ ಅಡ್ಡ ಪಡಿಸುವುದೊಂದೇ ಇವರ ಕೆಲಸ. ಇತ್ತೀಚೆಗೆ ಮುಖ್ಯಮಂತ್ರಿಗಳು ಬರುವ ದಿನದಂದೇ ಬೈಲಹೊಂಗಲ ಬಂದ್ಗೆ ಅವರಿಗೆ ಅನುಮತಿ ನೀಡಲಾಗಿತ್ತು. ಇಂಥವರ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು. <br /> <br /> `ಅಭಿವೃದ್ಧಿ ಕೆಲಸಕ್ಕೆ ಅಡ್ಡ ಪಡಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ~ ಎಂದು ಎಸ್ಪಿ ಸಂದೀಪ ಪಾಟೀಲ ಹೇಳಿದರು. <br /> <br /> ಬಸ್ ನಿಲ್ದಾಣದೊಳಿಗಿರುವ ಆಟೊ ರಿಕ್ಷಾ ನಿಲ್ದಾಣವನ್ನು ಸ್ಥಳಾಂತರಿಸಬೇಕು. ಆಟೊ ಚಾಲಕರೊಂದಿಗೆ ಮಾತುಕತೆ ನಡೆಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಎಸ್ಪಿ, ಉಪವಿಭಾಗಾಧಿಕಾರಿ ಹಾಗೂ ಆರ್ಟಿಒ ಅಧಿಕಾರಿಗಳಿಗೆ ಸಚಿವ ಉಮೇಶ ಕತ್ತಿ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>