<p><strong>ಬೆಂಗಳೂರು</strong>: ಡಿನೋಟಿಫೈ ಪ್ರಕರಣದಲ್ಲಿ ಮೊದಲ ಬಾರಿಗೆ ಗೃಹ ಸಚಿವ ಆರ್. ಅಶೋಕ ಅವರ ವಿರುದ್ಧ ಲೋಕಾಯುಕ್ತ ವಿಶೇಷ ಕೋರ್ಟ್ನಲ್ಲಿ ಖಾಸಗಿ ದೂರು ದಾಖಲಾಗಿದೆ.<br /> <br /> ವಿಜಯನಗರದ ನಿವಾಸಿ ಎಂ.ಮಂಜುನಾಥ ಎನ್ನುವವರು ಬುಧವಾರ ದೂರು ದಾಖಲಿಸಿದ್ದು, ಇದರ ವಿಚಾರಣೆಯನ್ನು ಕೋರ್ಟ್ ಗುರುವಾರ ಕೈಗೆತ್ತಿಕೊಳ್ಳಲಿದೆ.<br /> <br /> ದೂರು ಏನು?: ನಗರದ ಆರ್ಎಂವಿ ಬಡಾವಣೆಯ ಡಿನೋಟಿಫಿಕೇಷನ್ ವಿವಾದ ಇದು. ಇಲ್ಲಿಯ 23 ಗುಂಟೆ ಜಾಗವನ್ನು 1978 ಬಿಡಿಎ ಸ್ವಾಧೀನ ಪಡಿಸಿಕೊಂಡಿತ್ತು. ಆದರೆ ಈ ಜಾಗದ ಪೈಕಿ 14 ಗುಂಟೆಯನ್ನು 2003ರಲ್ಲಿ ಹಾಗೂ ಉಳಿದ 9 ಗುಂಟೆ ಜಾಗವನ್ನು 2007ರಲ್ಲಿ ಅಶೋಕ ಹಾಗೂ ಇತರ 12 ಮಂದಿ ಮೂಲ ಮಾಲೀಕರಿಂದ ಪಡೆದುಕೊಂಡಿದ್ದಾರೆ. ಒಮ್ಮೆ ಸ್ವಾಧೀನ ಪಡಿಸಿಕೊಳ್ಳಲಾದ ಜಮೀನನ್ನು ಪುನಃ ಖರೀದಿ ಮಾಡುವ ಮೂಲಕ ಇವರು ಎಲ್ಲ ಕಾಯ್ದೆ ಕಾನೂನುಗಳನ್ನು ಗಾಳಿಗೆ ತೂರಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.<br /> <br /> ಇಷ್ಟೇ ಅಲ್ಲದೇ, ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಮೇಲೆ 2009ರಲ್ಲಿ ಸಾರಿಗೆ ಸಚಿವರಾಗಿದ್ದ ಅಶೋಕ್ ಅವರು ಈ ಜಮೀನಿನ ಮೂಲ ಮಾಲೀಕರಿಂದ ಅರ್ಜಿ ಕೊಡಿಸಿ ಸಂಪೂರ್ಣ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಿಸಿಕೊಳ್ಳುವಲ್ಲಿ (ಡಿನೋಟಿಫೈ) ಯಶಸ್ವಿಯಾಗಿದ್ದಾರೆ. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ್ದಾರೆ ಎಂದು ತಿಳಿಸಲಾಗಿದೆ.<br /> <br /> ಈ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆಯ 420 (ವಂಚನೆ), 406 ನಂಬಿಕೆ ದ್ರೋಹ ಸೇರಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ವಿವಿಧ ಕಲಮುಗಳ ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.<br /> <br /> ಇನ್ನೊಂದು ಪ್ರಕರಣದಲ್ಲಿ, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ವಿರುದ್ಧವೂ ಖಾಸಗಿ ದೂರು ಬುಧವಾರ ದಾಖಲಾಗಿದೆ. ಇವರು ಭೂಕಬಳಿಕೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಇದರ ವಿಚಾರಣೆಯನ್ನು ಕೋರ್ಟ್ ಇದೇ 14ರಂದು ನಡೆಸಲಿದೆ.<br /> <br /> ಹೇಳಿಕೆ ದಾಖಲು: ಈ ಮಧ್ಯೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕುಟುಂಬದ ಸದಸ್ಯರ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿರುವ ವಿನೋದ್ ಕುಮಾರ್ ಅವರ ಸಾಕ್ಷ್ಯವನ್ನು ಬುಧವಾರ ನ್ಯಾಯಾಲಯ ದಾಖಲು ಮಾಡಿಕೊಂಡಿದೆ.<br /> <br /> ‘ಕುಮಾರಸ್ವಾಮಿ ಅವರು, ಸ್ವ ಹಿತಾಸಕ್ತಿಗೆ ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ನ ತೀರ್ಪುಗಳನ್ನು ಉಲ್ಲಂಘಿಸಿ ಸುಮಾರು 300 ಕೋಟಿ ರೂಪಾಯಿ ಬೆಲೆ ಬಾಳುವ ಗುಂಪು ನಿವೇಶನ ಮಂಜೂರು ಮಾಡಿದ್ದಾರೆ’ ಎಂದು ವಿನೋದ್ ತಿಳಿಸಿದರು. ಇದರ ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಡಿನೋಟಿಫೈ ಪ್ರಕರಣದಲ್ಲಿ ಮೊದಲ ಬಾರಿಗೆ ಗೃಹ ಸಚಿವ ಆರ್. ಅಶೋಕ ಅವರ ವಿರುದ್ಧ ಲೋಕಾಯುಕ್ತ ವಿಶೇಷ ಕೋರ್ಟ್ನಲ್ಲಿ ಖಾಸಗಿ ದೂರು ದಾಖಲಾಗಿದೆ.<br /> <br /> ವಿಜಯನಗರದ ನಿವಾಸಿ ಎಂ.ಮಂಜುನಾಥ ಎನ್ನುವವರು ಬುಧವಾರ ದೂರು ದಾಖಲಿಸಿದ್ದು, ಇದರ ವಿಚಾರಣೆಯನ್ನು ಕೋರ್ಟ್ ಗುರುವಾರ ಕೈಗೆತ್ತಿಕೊಳ್ಳಲಿದೆ.<br /> <br /> ದೂರು ಏನು?: ನಗರದ ಆರ್ಎಂವಿ ಬಡಾವಣೆಯ ಡಿನೋಟಿಫಿಕೇಷನ್ ವಿವಾದ ಇದು. ಇಲ್ಲಿಯ 23 ಗುಂಟೆ ಜಾಗವನ್ನು 1978 ಬಿಡಿಎ ಸ್ವಾಧೀನ ಪಡಿಸಿಕೊಂಡಿತ್ತು. ಆದರೆ ಈ ಜಾಗದ ಪೈಕಿ 14 ಗುಂಟೆಯನ್ನು 2003ರಲ್ಲಿ ಹಾಗೂ ಉಳಿದ 9 ಗುಂಟೆ ಜಾಗವನ್ನು 2007ರಲ್ಲಿ ಅಶೋಕ ಹಾಗೂ ಇತರ 12 ಮಂದಿ ಮೂಲ ಮಾಲೀಕರಿಂದ ಪಡೆದುಕೊಂಡಿದ್ದಾರೆ. ಒಮ್ಮೆ ಸ್ವಾಧೀನ ಪಡಿಸಿಕೊಳ್ಳಲಾದ ಜಮೀನನ್ನು ಪುನಃ ಖರೀದಿ ಮಾಡುವ ಮೂಲಕ ಇವರು ಎಲ್ಲ ಕಾಯ್ದೆ ಕಾನೂನುಗಳನ್ನು ಗಾಳಿಗೆ ತೂರಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.<br /> <br /> ಇಷ್ಟೇ ಅಲ್ಲದೇ, ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದ ಮೇಲೆ 2009ರಲ್ಲಿ ಸಾರಿಗೆ ಸಚಿವರಾಗಿದ್ದ ಅಶೋಕ್ ಅವರು ಈ ಜಮೀನಿನ ಮೂಲ ಮಾಲೀಕರಿಂದ ಅರ್ಜಿ ಕೊಡಿಸಿ ಸಂಪೂರ್ಣ ಜಮೀನನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಿಸಿಕೊಳ್ಳುವಲ್ಲಿ (ಡಿನೋಟಿಫೈ) ಯಶಸ್ವಿಯಾಗಿದ್ದಾರೆ. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ್ದಾರೆ ಎಂದು ತಿಳಿಸಲಾಗಿದೆ.<br /> <br /> ಈ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆಯ 420 (ವಂಚನೆ), 406 ನಂಬಿಕೆ ದ್ರೋಹ ಸೇರಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ವಿವಿಧ ಕಲಮುಗಳ ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.<br /> <br /> ಇನ್ನೊಂದು ಪ್ರಕರಣದಲ್ಲಿ, ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ವಿರುದ್ಧವೂ ಖಾಸಗಿ ದೂರು ಬುಧವಾರ ದಾಖಲಾಗಿದೆ. ಇವರು ಭೂಕಬಳಿಕೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಇದರ ವಿಚಾರಣೆಯನ್ನು ಕೋರ್ಟ್ ಇದೇ 14ರಂದು ನಡೆಸಲಿದೆ.<br /> <br /> ಹೇಳಿಕೆ ದಾಖಲು: ಈ ಮಧ್ಯೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕುಟುಂಬದ ಸದಸ್ಯರ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿರುವ ವಿನೋದ್ ಕುಮಾರ್ ಅವರ ಸಾಕ್ಷ್ಯವನ್ನು ಬುಧವಾರ ನ್ಯಾಯಾಲಯ ದಾಖಲು ಮಾಡಿಕೊಂಡಿದೆ.<br /> <br /> ‘ಕುಮಾರಸ್ವಾಮಿ ಅವರು, ಸ್ವ ಹಿತಾಸಕ್ತಿಗೆ ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ನ ತೀರ್ಪುಗಳನ್ನು ಉಲ್ಲಂಘಿಸಿ ಸುಮಾರು 300 ಕೋಟಿ ರೂಪಾಯಿ ಬೆಲೆ ಬಾಳುವ ಗುಂಪು ನಿವೇಶನ ಮಂಜೂರು ಮಾಡಿದ್ದಾರೆ’ ಎಂದು ವಿನೋದ್ ತಿಳಿಸಿದರು. ಇದರ ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>