<p>ಶಿವಮೊಗ್ಗ: ಗ್ರಾಮ ಪಂಚಾಯ್ತಿ ನೀಡುವ ಡಿಮ್ಯಾಂಡ್ ರಿಜಿಸ್ಟ್ರಾರ್ ಆಧಾರದ ಮೇಲೆ ಇಂದಿರಾ ಆವಾಸ್ ಯೋಜನಾ ಫಲಾನುಭವಿಗಳಿಗೆ ಮನೆ ನಿರ್ಮಿಸಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು, ಅಪರ ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.<br /> <br /> ಜಿಲ್ಲಾ ವ್ಯಾಪ್ತಿಯ ಗ್ರಾಮಾಂತರ, ತೀರ್ಥಹಳ್ಳಿ, ಭದ್ರಾವತಿ, ಸಾಗರ, ಸೊರಬ ಹಾಗೂ ಶಿಕಾರಿಪುರಗಳಲ್ಲಿ ಕೇಂದ್ರ ಸರ್ಕಾರದ ಇಂದಿರಾ ಆವಾಸ್ ಯೋಜನೆ ಅಡಿ ಪ್ರತಿ ತಾಲ್ಲೂಕಿಗೆ 2 ಸಾವಿರದಂತೆ ಒಟ್ಟು 12 ಸಾವಿರ ಮನೆ ನಿರ್ಮಾಣಕ್ಕೆ ಕಾರ್ಯಾದೇಶವನ್ನು ಸಂಬಂಧಪಟ್ಟ ಗ್ರಾಮ ಪಂಚಾಯ್ತಿ ವತಿಯಿಂದ ನೀಡಿದ್ದು, ಈ ಕಾರ್ಯಾದೇಶದಲ್ಲಿ ಹಕ್ಕುಪತ್ರ ಕಡ್ಡಾಯವಾಗಿ ಹೊಂದಿರಬೇಕೆಂಬ ಷರತ್ತು ವಿಧಿಸಿದ್ದರಿಂದ ಆಯ್ಕೆಯಾದ ಶೇ.75 ಫಲಾನುಭವಿಗಳು ಹಕ್ಕುಪತ್ರ ಹೊಂದಿರದೇ ಯೋಜನೆ ವಂಚಿತರಾಗುತ್ತಿದ್ದಾರೆ ಎಂದು ದೂರಿದರು.<br /> <br /> ಅಲ್ಲದೇ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾತ್ರ ಹಕ್ಕುಪತ್ರಕ್ಕೆ ಬದಲಾಗಿ ಕೇವಲ ಗ್ರಾಮ ಪಂಚಾಯ್ತಿ ಡಿಮ್ಯಾಂಡ್ ರಿಜಿಸ್ಟ್ರಾರ್ ಆಧಾರದ ಮೇಲೆ ಇಂದಿರಾ ಆವಾಸ್ ಯೋಜನೆ ಅಡಿ ಮನೆ ನಿರ್ಮಿಸಲಾಗುತ್ತಿದೆ. <br /> <br /> ಈ ಕಾರಣದಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲೂ `ಡಿಮ್ಯಾಂಡ್ ರಿಜಿಸ್ಟ್ರಾರ್~ ಆಧಾರದ ಮೇಲೆ ಇಂದಿರಾ ಆವಾಸ್ ಯೋಜನೆ ಅಡಿ ಮನೆ ನಿರ್ಮಿಸಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದ ಮುಖಂಡರು, ಈ ತಾರತಮ್ಯ ನೀತಿ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.<br /> <br /> ಜಿಲ್ಲಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಎ. ರಮೇಶ್ ಹೆಗ್ಡೆ, ಮುಖಂಡರಾದ ಪಿ. ರುದ್ರೇಶ್, ಕೆ. ದೇವೆಂದ್ರಪ್ಪ, ಮೋಹನ್ ಮತ್ತಿತರರು ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಗ್ರಾಮ ಪಂಚಾಯ್ತಿ ನೀಡುವ ಡಿಮ್ಯಾಂಡ್ ರಿಜಿಸ್ಟ್ರಾರ್ ಆಧಾರದ ಮೇಲೆ ಇಂದಿರಾ ಆವಾಸ್ ಯೋಜನಾ ಫಲಾನುಭವಿಗಳಿಗೆ ಮನೆ ನಿರ್ಮಿಸಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು, ಅಪರ ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.<br /> <br /> ಜಿಲ್ಲಾ ವ್ಯಾಪ್ತಿಯ ಗ್ರಾಮಾಂತರ, ತೀರ್ಥಹಳ್ಳಿ, ಭದ್ರಾವತಿ, ಸಾಗರ, ಸೊರಬ ಹಾಗೂ ಶಿಕಾರಿಪುರಗಳಲ್ಲಿ ಕೇಂದ್ರ ಸರ್ಕಾರದ ಇಂದಿರಾ ಆವಾಸ್ ಯೋಜನೆ ಅಡಿ ಪ್ರತಿ ತಾಲ್ಲೂಕಿಗೆ 2 ಸಾವಿರದಂತೆ ಒಟ್ಟು 12 ಸಾವಿರ ಮನೆ ನಿರ್ಮಾಣಕ್ಕೆ ಕಾರ್ಯಾದೇಶವನ್ನು ಸಂಬಂಧಪಟ್ಟ ಗ್ರಾಮ ಪಂಚಾಯ್ತಿ ವತಿಯಿಂದ ನೀಡಿದ್ದು, ಈ ಕಾರ್ಯಾದೇಶದಲ್ಲಿ ಹಕ್ಕುಪತ್ರ ಕಡ್ಡಾಯವಾಗಿ ಹೊಂದಿರಬೇಕೆಂಬ ಷರತ್ತು ವಿಧಿಸಿದ್ದರಿಂದ ಆಯ್ಕೆಯಾದ ಶೇ.75 ಫಲಾನುಭವಿಗಳು ಹಕ್ಕುಪತ್ರ ಹೊಂದಿರದೇ ಯೋಜನೆ ವಂಚಿತರಾಗುತ್ತಿದ್ದಾರೆ ಎಂದು ದೂರಿದರು.<br /> <br /> ಅಲ್ಲದೇ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಾತ್ರ ಹಕ್ಕುಪತ್ರಕ್ಕೆ ಬದಲಾಗಿ ಕೇವಲ ಗ್ರಾಮ ಪಂಚಾಯ್ತಿ ಡಿಮ್ಯಾಂಡ್ ರಿಜಿಸ್ಟ್ರಾರ್ ಆಧಾರದ ಮೇಲೆ ಇಂದಿರಾ ಆವಾಸ್ ಯೋಜನೆ ಅಡಿ ಮನೆ ನಿರ್ಮಿಸಲಾಗುತ್ತಿದೆ. <br /> <br /> ಈ ಕಾರಣದಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲೂ `ಡಿಮ್ಯಾಂಡ್ ರಿಜಿಸ್ಟ್ರಾರ್~ ಆಧಾರದ ಮೇಲೆ ಇಂದಿರಾ ಆವಾಸ್ ಯೋಜನೆ ಅಡಿ ಮನೆ ನಿರ್ಮಿಸಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದ ಮುಖಂಡರು, ಈ ತಾರತಮ್ಯ ನೀತಿ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.<br /> <br /> ಜಿಲ್ಲಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಎ. ರಮೇಶ್ ಹೆಗ್ಡೆ, ಮುಖಂಡರಾದ ಪಿ. ರುದ್ರೇಶ್, ಕೆ. ದೇವೆಂದ್ರಪ್ಪ, ಮೋಹನ್ ಮತ್ತಿತರರು ಮನವಿ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>