<p>ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಭಾನುವಾರ ನಗರಕ್ಕೆ ಬರುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲಿಗ ಸಚಿವರು ಮತ್ತು ಶಾಸಕರು ಪ್ರಧಾನ್ ಅವರನ್ನು ಭೇಟಿ ಮಾಡಿ ಸರ್ಕಾರದ ನಾಯಕತ್ವ ಬದಲಾವಣೆಗೆ ಒತ್ತಡ ಹೇರುವ ಸಾಧ್ಯತೆ ಇದೆ.<br /> <br /> ಪಕ್ಷದ ಹೈಕಮಾಂಡ್ ಪರವಾಗಿ ಪ್ರಧಾನ್ ಅವರು ನಗರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಬರಪೀಡಿತ ಪ್ರದೇಶಗಳ ಪ್ರವಾಸ ಮೊಟಕುಗೊಳಿಸಿ ಶನಿವಾರ ಸಂಜೆಯೇ ಬೆಂಗಳೂರಿಗೆ ದೌಡಾಯಿಸಿದ್ದಾರೆ. <br /> <br /> ಆದರೆ, ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಭಾನುವಾರ ನಗರದಲ್ಲಿ ಇರುವುದಿಲ್ಲ. ಇಬ್ಬರೂ ಪ್ರಧಾನ್ ಭೇಟಿಯಿಂದ ದೂರ ಉಳಿಯಲಿದ್ದಾರೆ.<br /> <br /> ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿ ಆಧಾರದಲ್ಲಿ ತಮ್ಮ ವಿರುದ್ಧ ದಾಖಲಿಸಿದ್ದ `ಪ್ರಥಮ ಮಾಹಿತಿ ವರದಿ~ಯನ್ನು ರದ್ದು ಮಾಡಿ ಹೈಕೋರ್ಟ್ ತೀರ್ಪು ನೀಡಿದ ದಿನದಿಂದಲೂ ಯಡಿಯೂರಪ್ಪ ಅವರು ನಾಯಕತ್ವ ಬದಲಾವಣೆಗೆ ಪಟ್ಟುಹಿಡಿದಿದ್ದಾರೆ.<br /> <br /> ಬಜೆಟ್ ಅಧಿವೇಶನದ ಸಮಯದಲ್ಲಿ ಶಾಸಕರನ್ನು ರೆಸಾರ್ಟ್ಗೆ ಕರೆದೊಯ್ಯುವ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಿದ್ದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರ ಜೊತೆ ಚರ್ಚಿಸಲು ಪ್ರಧಾನ್ ಬರುತ್ತಿದ್ದಾರೆ ಎನ್ನಲಾಗಿದೆ. ಆದರೆ, ತಮ್ಮ ಭೇಟಿಯ ಸ್ಪಷ್ಟ ಉದ್ದೇಶವನ್ನು ಈವರೆಗೂ ಅವರು ಬಹಿರಂಗಪಡಿಸಿಲ್ಲ.<br /> <br /> ಪ್ರಧಾನ್ `ಪ್ರಜಾವಾಣಿ~ ಜತೆ ಮಾತನಾಡಿ `ತಮ್ಮ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ತಾವು ಪಕ್ಷದ ಉಸ್ತುವಾರಿಯಾದ ಕಾರಣ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಆ ಸಂದರ್ಭದಲ್ಲಿ ಪಕ್ಷದ ಪ್ರಮುಖರ ಜತೆಗೂ ಮಾತುಕತೆ ನಡೆಸಲಾಗುವುದು~ ಎಂದು ಹೇಳಿದರು. ಭೇಟಿ ನಂತರ ವರಿಷ್ಠರಿಗೆ ವರದಿ ನೀಡುತ್ತೀರಾ ಎಂದು ಕೇಳಿದ್ದಕ್ಕೆ `ಅದು ಪಕ್ಷದ ಆಂತರಿಕ ವಿಷಯ. ಎಲ್ಲವನ್ನೂ ಮಾಧ್ಯಮಗಳಿಗೆ ಹೇಳಲು ಆಗುವುದಿಲ್ಲ~ ಎಂದು ನುಣುಚಿಕೊಂಡರು.<br /> <br /> ಯಡಿಯೂರಪ್ಪ ಅವರು ಪ್ರತ್ಯೇಕವಾಗಿ ಪ್ರಧಾನ್ ಅವರನ್ನು ಭೇಟಿ ಮಾಡಿ, ತಮ್ಮನ್ನು ಮತ್ತೆ ಮುಖ್ಯಮಂತ್ರಿ ಮಾಡುವಂತೆ ಮನವಿ ಮಾಡಲು ಮುಂದಾಗಿದ್ದಾರೆ. ಬಳಿಕ ಅವರ ಬೆಂಬಲಿಗ ಸಚಿವರು ಮತ್ತು ಶಾಸಕರು ಭೇಟಿ ಮಾಡಿ, ತಮ್ಮ ನಾಯಕನ ಪರ ಒತ್ತಡ ಹೇರಲು ಸಿದ್ಧತೆ ನಡೆಸಿದ್ದಾರೆ. <br /> <br /> ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ವಿ.ಸತೀಶ್ ಮತ್ತು ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಉಪಸ್ಥಿತರಿರುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಭಾನುವಾರ ನಗರಕ್ಕೆ ಬರುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲಿಗ ಸಚಿವರು ಮತ್ತು ಶಾಸಕರು ಪ್ರಧಾನ್ ಅವರನ್ನು ಭೇಟಿ ಮಾಡಿ ಸರ್ಕಾರದ ನಾಯಕತ್ವ ಬದಲಾವಣೆಗೆ ಒತ್ತಡ ಹೇರುವ ಸಾಧ್ಯತೆ ಇದೆ.<br /> <br /> ಪಕ್ಷದ ಹೈಕಮಾಂಡ್ ಪರವಾಗಿ ಪ್ರಧಾನ್ ಅವರು ನಗರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಬರಪೀಡಿತ ಪ್ರದೇಶಗಳ ಪ್ರವಾಸ ಮೊಟಕುಗೊಳಿಸಿ ಶನಿವಾರ ಸಂಜೆಯೇ ಬೆಂಗಳೂರಿಗೆ ದೌಡಾಯಿಸಿದ್ದಾರೆ. <br /> <br /> ಆದರೆ, ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಭಾನುವಾರ ನಗರದಲ್ಲಿ ಇರುವುದಿಲ್ಲ. ಇಬ್ಬರೂ ಪ್ರಧಾನ್ ಭೇಟಿಯಿಂದ ದೂರ ಉಳಿಯಲಿದ್ದಾರೆ.<br /> <br /> ಅಕ್ರಮ ಗಣಿಗಾರಿಕೆ ಕುರಿತ ಲೋಕಾಯುಕ್ತ ವರದಿ ಆಧಾರದಲ್ಲಿ ತಮ್ಮ ವಿರುದ್ಧ ದಾಖಲಿಸಿದ್ದ `ಪ್ರಥಮ ಮಾಹಿತಿ ವರದಿ~ಯನ್ನು ರದ್ದು ಮಾಡಿ ಹೈಕೋರ್ಟ್ ತೀರ್ಪು ನೀಡಿದ ದಿನದಿಂದಲೂ ಯಡಿಯೂರಪ್ಪ ಅವರು ನಾಯಕತ್ವ ಬದಲಾವಣೆಗೆ ಪಟ್ಟುಹಿಡಿದಿದ್ದಾರೆ.<br /> <br /> ಬಜೆಟ್ ಅಧಿವೇಶನದ ಸಮಯದಲ್ಲಿ ಶಾಸಕರನ್ನು ರೆಸಾರ್ಟ್ಗೆ ಕರೆದೊಯ್ಯುವ ಮೂಲಕ ಹೈಕಮಾಂಡ್ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡಿದ್ದರು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರ ಜೊತೆ ಚರ್ಚಿಸಲು ಪ್ರಧಾನ್ ಬರುತ್ತಿದ್ದಾರೆ ಎನ್ನಲಾಗಿದೆ. ಆದರೆ, ತಮ್ಮ ಭೇಟಿಯ ಸ್ಪಷ್ಟ ಉದ್ದೇಶವನ್ನು ಈವರೆಗೂ ಅವರು ಬಹಿರಂಗಪಡಿಸಿಲ್ಲ.<br /> <br /> ಪ್ರಧಾನ್ `ಪ್ರಜಾವಾಣಿ~ ಜತೆ ಮಾತನಾಡಿ `ತಮ್ಮ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ತಾವು ಪಕ್ಷದ ಉಸ್ತುವಾರಿಯಾದ ಕಾರಣ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಆ ಸಂದರ್ಭದಲ್ಲಿ ಪಕ್ಷದ ಪ್ರಮುಖರ ಜತೆಗೂ ಮಾತುಕತೆ ನಡೆಸಲಾಗುವುದು~ ಎಂದು ಹೇಳಿದರು. ಭೇಟಿ ನಂತರ ವರಿಷ್ಠರಿಗೆ ವರದಿ ನೀಡುತ್ತೀರಾ ಎಂದು ಕೇಳಿದ್ದಕ್ಕೆ `ಅದು ಪಕ್ಷದ ಆಂತರಿಕ ವಿಷಯ. ಎಲ್ಲವನ್ನೂ ಮಾಧ್ಯಮಗಳಿಗೆ ಹೇಳಲು ಆಗುವುದಿಲ್ಲ~ ಎಂದು ನುಣುಚಿಕೊಂಡರು.<br /> <br /> ಯಡಿಯೂರಪ್ಪ ಅವರು ಪ್ರತ್ಯೇಕವಾಗಿ ಪ್ರಧಾನ್ ಅವರನ್ನು ಭೇಟಿ ಮಾಡಿ, ತಮ್ಮನ್ನು ಮತ್ತೆ ಮುಖ್ಯಮಂತ್ರಿ ಮಾಡುವಂತೆ ಮನವಿ ಮಾಡಲು ಮುಂದಾಗಿದ್ದಾರೆ. ಬಳಿಕ ಅವರ ಬೆಂಬಲಿಗ ಸಚಿವರು ಮತ್ತು ಶಾಸಕರು ಭೇಟಿ ಮಾಡಿ, ತಮ್ಮ ನಾಯಕನ ಪರ ಒತ್ತಡ ಹೇರಲು ಸಿದ್ಧತೆ ನಡೆಸಿದ್ದಾರೆ. <br /> <br /> ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ವಿ.ಸತೀಶ್ ಮತ್ತು ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್ ಉಪಸ್ಥಿತರಿರುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>