<p><strong>ಮೈಸೂರು: </strong>ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯಿಂದ ರೂ.25 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದ ಸೋಮವಾರಪೇಟೆ ಉಪ ವಿಭಾಗದ ಕುಶಾಲನಗರ ಡಿವೈಎಸ್ಪಿ ಎಂ.ನಾರಾಯಣ್ ಭಾನುವಾರ ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಬಿದ್ದಿದ್ದಾರೆ.<br /> <br /> ನಗರದ ಕೆಫೆ ಅರಮನೆ ಹೋಟೆಲ್ನಲ್ಲಿ ನಾರಾಯಣ್ ಅವರು ಆರ್. ಮೋಹನ್ ಅವರಿಂದ ಬೆಳಿಗ್ಗೆ 10 ಗಂಟೆ ಸುಮಾರಿನಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದರು. <br /> <br /> ಕುಶಾಲನಗರದ ಕಾರುಣ್ಯ ಚಾರಿಟಬಲ್ ಟ್ರಸ್ಟ್ನವರು ದಾನಿಗಳಿಂದ ಹಣ ವಸೂಲಿ ಮಾಡಿ ವಂಚಿಸಿದೆ ಎಂದು ಆರೋಪಿಸಿ ಎರಡೂವರೆ ತಿಂಗಳ ಹಿಂದೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಸ್ಟ್ನ ಪ್ರಮುಖರಾದ ಡಾ.ಸುರೇಶ್ಕುಮಾರ್, ಪ್ರಭು ಎಂಬುವರನ್ನು ಬಂಧಿಸಲಾಗಿತ್ತು.<br /> <br /> ಟ್ರಸ್ಟ್ನ ಸದಸ್ಯರಲ್ಲಿ ಒಬ್ಬರಾದ ಪದ್ಮಾವತಿ ಅವರನ್ನು ಸಹ ಪೊಲೀಸರು ಬಂಧಿಸಬಹುದೆಂಬ ಶಂಕೆ ಇತ್ತು. ಹೀಗಾಗಿ ಪದ್ಮಾವತಿ ವಿರುದ್ಧ ಯಾವುದೇ ಕ್ರಮ ಜರುಗಿಸದಂತೆ ಅವರ ಅಳಿಯ ಮೋಹನ್ ಈ ಹಿಂದೆ ಎರಡು ಕಂತುಗಳಲ್ಲಿ ರೂ.4 ಲಕ್ಷ ಹಣವನ್ನು ನಾರಾಯಣ್ ಅವರಿಗೆ ನೀಡಿದ್ದರು. ನಾರಾಯಣ್ ಮತ್ತೆ ರೂ.50 ಸಾವಿರ ನೀಡುವಂತೆ ಒತ್ತಾಯಿಸಿದರು ಎನ್ನಲಾಗಿದೆ. ಹಾಗಾಗಿ ಮೋಹನ್ ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದರು<br /> .<br /> ಒಂದು ವರ್ಷದ ಹಿಂದೆ ಕುಶಾಲನಗರದಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ನಾರಾಯಣ್ ಮೈಸೂರಿಗೆ ವರ್ಗವಾಗಿದ್ದರು. ಎರಡು ತಿಂಗಳ ಹಿಂದೆಯಷ್ಟೆ ಮತ್ತೆ ಕುಶಾಲನಗರಕ್ಕೆ ವರ್ಗವಾಗಿದ್ದರು. <br /> <br /> ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್ಪಿ ಎಸ್.ಇ.ಡಿಸೋಜಾ ಮಾರ್ಗದರ್ಶನದಲ್ಲಿ ಡಿಎಸ್ಪಿ ಸಿ.ಬಿ.ಪಾಟೀಲ್, ಇನ್ಸ್ಪೆಕ್ಟರ್ಗಳಾದ ಜಯರಾಮ್, ಗೋಪಾಲಕೃಷ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯಿಂದ ರೂ.25 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದ ಸೋಮವಾರಪೇಟೆ ಉಪ ವಿಭಾಗದ ಕುಶಾಲನಗರ ಡಿವೈಎಸ್ಪಿ ಎಂ.ನಾರಾಯಣ್ ಭಾನುವಾರ ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಬಿದ್ದಿದ್ದಾರೆ.<br /> <br /> ನಗರದ ಕೆಫೆ ಅರಮನೆ ಹೋಟೆಲ್ನಲ್ಲಿ ನಾರಾಯಣ್ ಅವರು ಆರ್. ಮೋಹನ್ ಅವರಿಂದ ಬೆಳಿಗ್ಗೆ 10 ಗಂಟೆ ಸುಮಾರಿನಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದರು. <br /> <br /> ಕುಶಾಲನಗರದ ಕಾರುಣ್ಯ ಚಾರಿಟಬಲ್ ಟ್ರಸ್ಟ್ನವರು ದಾನಿಗಳಿಂದ ಹಣ ವಸೂಲಿ ಮಾಡಿ ವಂಚಿಸಿದೆ ಎಂದು ಆರೋಪಿಸಿ ಎರಡೂವರೆ ತಿಂಗಳ ಹಿಂದೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಸ್ಟ್ನ ಪ್ರಮುಖರಾದ ಡಾ.ಸುರೇಶ್ಕುಮಾರ್, ಪ್ರಭು ಎಂಬುವರನ್ನು ಬಂಧಿಸಲಾಗಿತ್ತು.<br /> <br /> ಟ್ರಸ್ಟ್ನ ಸದಸ್ಯರಲ್ಲಿ ಒಬ್ಬರಾದ ಪದ್ಮಾವತಿ ಅವರನ್ನು ಸಹ ಪೊಲೀಸರು ಬಂಧಿಸಬಹುದೆಂಬ ಶಂಕೆ ಇತ್ತು. ಹೀಗಾಗಿ ಪದ್ಮಾವತಿ ವಿರುದ್ಧ ಯಾವುದೇ ಕ್ರಮ ಜರುಗಿಸದಂತೆ ಅವರ ಅಳಿಯ ಮೋಹನ್ ಈ ಹಿಂದೆ ಎರಡು ಕಂತುಗಳಲ್ಲಿ ರೂ.4 ಲಕ್ಷ ಹಣವನ್ನು ನಾರಾಯಣ್ ಅವರಿಗೆ ನೀಡಿದ್ದರು. ನಾರಾಯಣ್ ಮತ್ತೆ ರೂ.50 ಸಾವಿರ ನೀಡುವಂತೆ ಒತ್ತಾಯಿಸಿದರು ಎನ್ನಲಾಗಿದೆ. ಹಾಗಾಗಿ ಮೋಹನ್ ಲೋಕಾಯುಕ್ತ ಪೊಲೀಸರ ಮೊರೆ ಹೋಗಿದ್ದರು<br /> .<br /> ಒಂದು ವರ್ಷದ ಹಿಂದೆ ಕುಶಾಲನಗರದಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ನಾರಾಯಣ್ ಮೈಸೂರಿಗೆ ವರ್ಗವಾಗಿದ್ದರು. ಎರಡು ತಿಂಗಳ ಹಿಂದೆಯಷ್ಟೆ ಮತ್ತೆ ಕುಶಾಲನಗರಕ್ಕೆ ವರ್ಗವಾಗಿದ್ದರು. <br /> <br /> ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್ಪಿ ಎಸ್.ಇ.ಡಿಸೋಜಾ ಮಾರ್ಗದರ್ಶನದಲ್ಲಿ ಡಿಎಸ್ಪಿ ಸಿ.ಬಿ.ಪಾಟೀಲ್, ಇನ್ಸ್ಪೆಕ್ಟರ್ಗಳಾದ ಜಯರಾಮ್, ಗೋಪಾಲಕೃಷ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>