<p><strong>ಬೆಂಗಳೂರು:</strong> ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಇದೇ 14ರಂದು ಕೆಪಿಸಿಸಿ ಚುನಾವಣಾ ಸಮಿತಿ ಹಾಗೂ ಪ್ರದೇಶ ಕಾಂಗ್ರೆಸ್ ಸಮನ್ವಯ ಸಮಿತಿಯ ಸಭೆ ನಡೆಯಲಿದೆ.<br /> <br /> ಈ ಮೊದಲು ಡಿಸೆಂಬರ್ 15ಕ್ಕೆ ಎರಡೂ ಸಭೆಗಳನ್ನು ನಿಗದಿ ಮಾಡಲಾಗಿತ್ತು. ಆದರೆ, ಒಂದು ದಿನ ಮುಂಚಿತವಾಗಿ (ಡಿ.14) ದಿಗ್ವಿಜಯ್ ಸಿಂಗ್ ಅವರು ಬೆಂಗಳೂರಿಗೆ ಬರಲಿದ್ದು, ಎರಡೂ ಸಭೆಗಳು ಅದೇ ದಿನ ನಡೆಯಲಿವೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.<br /> ಲೋಕಸಭಾ ಚುನಾವಣೆ ತಯಾರಿ ಕುರಿತು ಚುನಾವಣಾ ಸಮಿತಿಯ ಸಭೆಯಲ್ಲಿ ಚರ್ಚೆ ನಡೆಯಲಿದೆ.<br /> <br /> ಕೆಪಿಸಿಸಿ ನಿಯೋಜಿಸಿದ್ದ ವೀಕ್ಷಕರು ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಭೇಟಿನೀಡಿ ಸಂಭವನೀಯ ಅಭ್ಯರ್ಥಿಗಳ ಕುರಿತು ನೀಡಿರುವ ವರದಿ, ಕೆಪಿಸಿಸಿ ಪದಾಧಿಕಾರಿಗಳು ನೀಡಿರುವ ಪಟ್ಟಿ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಕಳುಹಿಸಿರುವ ವರದಿಗಳ ಕುರಿತು ಚರ್ಚೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.<br /> <br /> ಚುನಾವಣಾ ಸಮಿತಿ ಸಭೆ ಬಳಿಕ ಸಮನ್ವಯ ಸಮಿತಿ ಸಭೆ ನಡೆಯಲಿದೆ. ದಿಗ್ವಿಜಯ್ ಸಿಂಗ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಗೃಹ ಸಚಿವ ಕೆ.ಜೆ.ಜಾರ್ಜ್, ಶಾಸಕ ಡಿ.ಕೆ.ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ ಶಾಂತಾರಾಂ ನಾಯ್ಕ್ ಮತ್ತು ಚೆಲ್ಲಕುಮಾರ್ ಸಭೆಯಲ್ಲಿ ಭಾಗವಹಿಸುವರು.<br /> <br /> ನಿಗಮ, ಮಂಡಳಿಗಳಿಗೆ ನೇಮಕಾತಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ಇದೇ 14ರಂದು ಕೆಪಿಸಿಸಿ ಚುನಾವಣಾ ಸಮಿತಿ ಹಾಗೂ ಪ್ರದೇಶ ಕಾಂಗ್ರೆಸ್ ಸಮನ್ವಯ ಸಮಿತಿಯ ಸಭೆ ನಡೆಯಲಿದೆ.<br /> <br /> ಈ ಮೊದಲು ಡಿಸೆಂಬರ್ 15ಕ್ಕೆ ಎರಡೂ ಸಭೆಗಳನ್ನು ನಿಗದಿ ಮಾಡಲಾಗಿತ್ತು. ಆದರೆ, ಒಂದು ದಿನ ಮುಂಚಿತವಾಗಿ (ಡಿ.14) ದಿಗ್ವಿಜಯ್ ಸಿಂಗ್ ಅವರು ಬೆಂಗಳೂರಿಗೆ ಬರಲಿದ್ದು, ಎರಡೂ ಸಭೆಗಳು ಅದೇ ದಿನ ನಡೆಯಲಿವೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.<br /> ಲೋಕಸಭಾ ಚುನಾವಣೆ ತಯಾರಿ ಕುರಿತು ಚುನಾವಣಾ ಸಮಿತಿಯ ಸಭೆಯಲ್ಲಿ ಚರ್ಚೆ ನಡೆಯಲಿದೆ.<br /> <br /> ಕೆಪಿಸಿಸಿ ನಿಯೋಜಿಸಿದ್ದ ವೀಕ್ಷಕರು ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಭೇಟಿನೀಡಿ ಸಂಭವನೀಯ ಅಭ್ಯರ್ಥಿಗಳ ಕುರಿತು ನೀಡಿರುವ ವರದಿ, ಕೆಪಿಸಿಸಿ ಪದಾಧಿಕಾರಿಗಳು ನೀಡಿರುವ ಪಟ್ಟಿ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಕಳುಹಿಸಿರುವ ವರದಿಗಳ ಕುರಿತು ಚರ್ಚೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.<br /> <br /> ಚುನಾವಣಾ ಸಮಿತಿ ಸಭೆ ಬಳಿಕ ಸಮನ್ವಯ ಸಮಿತಿ ಸಭೆ ನಡೆಯಲಿದೆ. ದಿಗ್ವಿಜಯ್ ಸಿಂಗ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಗೃಹ ಸಚಿವ ಕೆ.ಜೆ.ಜಾರ್ಜ್, ಶಾಸಕ ಡಿ.ಕೆ.ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ ಶಾಂತಾರಾಂ ನಾಯ್ಕ್ ಮತ್ತು ಚೆಲ್ಲಕುಮಾರ್ ಸಭೆಯಲ್ಲಿ ಭಾಗವಹಿಸುವರು.<br /> <br /> ನಿಗಮ, ಮಂಡಳಿಗಳಿಗೆ ನೇಮಕಾತಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>