<p><strong>ದಾವಣಗೆರೆ:</strong> ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ (ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್) ವತಿಯಿಂದ ನ. 17ರಂದು ಬೆಂಗಳೂರಿನ ಆನಂದರಾವ್ ವೃತ್ತ ಬಳಿಯ ಕೆಇಬಿ ಎಂಜಿನಿಯರ್ಗಳ ಸಂಘದ ಸಭಾಭವನದಲ್ಲಿ `ಕಾರ್ಮಿಕ ಸಂಘಟನೆಗಳ ಜಂಟಿ ಸಮಾವೇಶ~ ಹಮ್ಮಿಕೊಳ್ಳಲಾಗಿದೆ.<br /> <br /> ಸಮಾವೇಶದಲ್ಲಿ ಒಂದು ಸಾವಿರ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ನಂತರ ಪ್ರತಿ ಜಿಲ್ಲೆಯಲ್ಲಿಯೂ ಸಮಾವೇಶ ನಡೆಸಲಾಗುವುದು ಎಂದು ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಎಚ್.ವಿ. ಅನಂತ ಸುಬ್ಬರಾವ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಬೇಕು, ಮಾಸಿಕ ಕನಿಷ್ಠ ವೇತನ ರೂ 10 ಸಾವಿರ ನೀಡಬೇಕು ಎಂದು ಆಗ್ರಹಿಸಿ ಮತ್ತು ಸಾರ್ವಜನಿಕ ಕ್ಷೇತ್ರದ ಉದ್ದಿಮೆಗಳ ಖಾಸಗೀಕರಣ ಮೊದಲಾದ ಜನವಿರೋಧಿ ನೀತಿಗಳ ವಿರುದ್ಧ 2013ರ ಫೆ. 20 ಮತ್ತು 21ರಂದು `ದೇಶವ್ಯಾಪಿ ಕಾರ್ಮಿಕರ ಐಕ್ಯ ಮುಷ್ಕರ~ ಹಮ್ಮಿಕೊಳ್ಳಲಾಗಿದೆ. ಅದಕ್ಕೆ ಪೂರ್ವಭಾವಿಯಾಗಿ ಹಲವು ಹೋರಾಟ ನಡೆಸಲಾಗುತ್ತಿದೆ ಎಂದರು.<br /> <br /> ಡಿ. 19ರಂದು `ಜೈಲ್ ಭರೋ~ ಚಳವಳಿ ಹಮ್ಮಿಕೊಂಡಿದ್ದು, ರಾಜ್ಯದಲ್ಲಿ ಕನಿಷ್ಠ 25 ಸಾವಿರ ಮಂದಿ ಬಂಧಿತರಾಗಬೇಕು ಎಂಬ ಗುರಿ ಇದೆ. ಫೆ. 20 ಮತ್ತು 21ರಂದು ಕೈಗಾರಿಕೆಗಳು, ಎಲ್ಲ ಬ್ಯಾಂಕ್, ಸಾರಿಗೆ, ವಿಮಾ ಕಂಪೆನಿಗಳು ಬಂದ್ ಆಗಲಿವೆ. ಈ ಬಗ್ಗೆ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.<br /> ಕೆಎಸ್ಆರ್ಟಿಸಿ ನೌಕರರ 41 ಬೇಡಿಕೆ ಈಡೇರಿಕೆ ಬಗ್ಗೆ ಈಗಾಗಲೇ ಚರ್ಚೆ ನಡೆದಿದೆ. ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ. 16ರಂದು ಸರ್ಕಾರ ಚರ್ಚೆಗೆ ಆಹ್ವಾನಿಸಿದೆ. ಸಮಾಧಾನಕರ ನಿರ್ಧಾರ ಹೊರಬೀಳದಿದ್ದಲ್ಲಿ ಹೋರಾಟ ಆರಂಭಿಸಲಾಗುವುದು ಎಂದು ಹೇಳಿದರು.<br /> <br /> `ಸಿಐಟಿಯು ಹಾಗೂ ಬಿಎಂಎಸ್ ಸಂಘಟನೆಗಳು, ಕೆಎಸ್ಆರ್ಟಿಸಿ ನೌಕರರಲ್ಲಿ ಗೊಂದಲ ಮೂಡಿಸುವಂತಹ ಹೇಳಿಕೆ ನೀಡುತ್ತಿರುವುದು ಖಂಡನೀಯ. ಸಿಐಟಿಯು ಮುಖಂಡ ವಿ.ಜೆ.ಕೆ. ನಾಯರ್ ಜವಾಬ್ದಾರಿ ಅರಿಯಲಿ~ ಎಂದು ಹೇಳಿದರು.<br /> <br /> `ಬೆಂಗಳೂರಿನಲ್ಲಿ ನ. 3ರಂದು ನಡೆದ ಪ್ರತಿಭಟನೆ ವೇಳೆ ಕಾರ್ಮಿಕ ಮುಖಂಡ ಕೇಶವನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಬಗ್ಗೆ ಅಲ್ಲಿದ್ದವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣದ ಹಿಂದೆ ಎಐಟಿಯುಸಿ ಮುಖಂಡರಾಗಲೀ, ನಾನಾಗಲೀ ಇಲ್ಲ~ ಎಂದು ಸ್ಪಷ್ಟನೆ ನೀಡಿದರು.<br /> <br /> ಕಾರ್ಯಾಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ ಮಾತನಾಡಿ, ನ. 27ರಿಂದ 30ರವರೆಗೆ ಮುಂಬೈನಲ್ಲಿ ಎಐಟಿಯುಸಿ- ಅಖಿಲ ಭಾರತ ಸಮ್ಮೇಳನ ನಡೆಯಲಿದ್ದು, ರಾಜ್ಯದಿಂದ 188 ಪ್ರತಿನಿಧಿಗಳು ಸೇರಿ, ಒಟ್ಟು 3 ಸಾವಿರ ಮಂದಿ ಭಾಗವಹಿಸುವರು ಎಂದು ತಿಳಿಸಿದರು.<br /> <br /> ಕೆಜೆಪಿ ಸಂಯುಕ್ತರಂಗ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜತೆ ಸಿಪಿಐ ಎಂದಿಗೂ ಕೈಜೋಡಿಸುವುದಿಲ್ಲ ಎಂದು ಅನಂತಸುಬ್ಬರಾವ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಬೆಲೆ ಏರಿಕೆ ನಿಯಂತ್ರಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ (ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್) ವತಿಯಿಂದ ನ. 17ರಂದು ಬೆಂಗಳೂರಿನ ಆನಂದರಾವ್ ವೃತ್ತ ಬಳಿಯ ಕೆಇಬಿ ಎಂಜಿನಿಯರ್ಗಳ ಸಂಘದ ಸಭಾಭವನದಲ್ಲಿ `ಕಾರ್ಮಿಕ ಸಂಘಟನೆಗಳ ಜಂಟಿ ಸಮಾವೇಶ~ ಹಮ್ಮಿಕೊಳ್ಳಲಾಗಿದೆ.<br /> <br /> ಸಮಾವೇಶದಲ್ಲಿ ಒಂದು ಸಾವಿರ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ನಂತರ ಪ್ರತಿ ಜಿಲ್ಲೆಯಲ್ಲಿಯೂ ಸಮಾವೇಶ ನಡೆಸಲಾಗುವುದು ಎಂದು ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಎಚ್.ವಿ. ಅನಂತ ಸುಬ್ಬರಾವ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಬೇಕು, ಮಾಸಿಕ ಕನಿಷ್ಠ ವೇತನ ರೂ 10 ಸಾವಿರ ನೀಡಬೇಕು ಎಂದು ಆಗ್ರಹಿಸಿ ಮತ್ತು ಸಾರ್ವಜನಿಕ ಕ್ಷೇತ್ರದ ಉದ್ದಿಮೆಗಳ ಖಾಸಗೀಕರಣ ಮೊದಲಾದ ಜನವಿರೋಧಿ ನೀತಿಗಳ ವಿರುದ್ಧ 2013ರ ಫೆ. 20 ಮತ್ತು 21ರಂದು `ದೇಶವ್ಯಾಪಿ ಕಾರ್ಮಿಕರ ಐಕ್ಯ ಮುಷ್ಕರ~ ಹಮ್ಮಿಕೊಳ್ಳಲಾಗಿದೆ. ಅದಕ್ಕೆ ಪೂರ್ವಭಾವಿಯಾಗಿ ಹಲವು ಹೋರಾಟ ನಡೆಸಲಾಗುತ್ತಿದೆ ಎಂದರು.<br /> <br /> ಡಿ. 19ರಂದು `ಜೈಲ್ ಭರೋ~ ಚಳವಳಿ ಹಮ್ಮಿಕೊಂಡಿದ್ದು, ರಾಜ್ಯದಲ್ಲಿ ಕನಿಷ್ಠ 25 ಸಾವಿರ ಮಂದಿ ಬಂಧಿತರಾಗಬೇಕು ಎಂಬ ಗುರಿ ಇದೆ. ಫೆ. 20 ಮತ್ತು 21ರಂದು ಕೈಗಾರಿಕೆಗಳು, ಎಲ್ಲ ಬ್ಯಾಂಕ್, ಸಾರಿಗೆ, ವಿಮಾ ಕಂಪೆನಿಗಳು ಬಂದ್ ಆಗಲಿವೆ. ಈ ಬಗ್ಗೆ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.<br /> ಕೆಎಸ್ಆರ್ಟಿಸಿ ನೌಕರರ 41 ಬೇಡಿಕೆ ಈಡೇರಿಕೆ ಬಗ್ಗೆ ಈಗಾಗಲೇ ಚರ್ಚೆ ನಡೆದಿದೆ. ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ. 16ರಂದು ಸರ್ಕಾರ ಚರ್ಚೆಗೆ ಆಹ್ವಾನಿಸಿದೆ. ಸಮಾಧಾನಕರ ನಿರ್ಧಾರ ಹೊರಬೀಳದಿದ್ದಲ್ಲಿ ಹೋರಾಟ ಆರಂಭಿಸಲಾಗುವುದು ಎಂದು ಹೇಳಿದರು.<br /> <br /> `ಸಿಐಟಿಯು ಹಾಗೂ ಬಿಎಂಎಸ್ ಸಂಘಟನೆಗಳು, ಕೆಎಸ್ಆರ್ಟಿಸಿ ನೌಕರರಲ್ಲಿ ಗೊಂದಲ ಮೂಡಿಸುವಂತಹ ಹೇಳಿಕೆ ನೀಡುತ್ತಿರುವುದು ಖಂಡನೀಯ. ಸಿಐಟಿಯು ಮುಖಂಡ ವಿ.ಜೆ.ಕೆ. ನಾಯರ್ ಜವಾಬ್ದಾರಿ ಅರಿಯಲಿ~ ಎಂದು ಹೇಳಿದರು.<br /> <br /> `ಬೆಂಗಳೂರಿನಲ್ಲಿ ನ. 3ರಂದು ನಡೆದ ಪ್ರತಿಭಟನೆ ವೇಳೆ ಕಾರ್ಮಿಕ ಮುಖಂಡ ಕೇಶವನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಬಗ್ಗೆ ಅಲ್ಲಿದ್ದವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣದ ಹಿಂದೆ ಎಐಟಿಯುಸಿ ಮುಖಂಡರಾಗಲೀ, ನಾನಾಗಲೀ ಇಲ್ಲ~ ಎಂದು ಸ್ಪಷ್ಟನೆ ನೀಡಿದರು.<br /> <br /> ಕಾರ್ಯಾಧ್ಯಕ್ಷ ಎಚ್.ಕೆ. ರಾಮಚಂದ್ರಪ್ಪ ಮಾತನಾಡಿ, ನ. 27ರಿಂದ 30ರವರೆಗೆ ಮುಂಬೈನಲ್ಲಿ ಎಐಟಿಯುಸಿ- ಅಖಿಲ ಭಾರತ ಸಮ್ಮೇಳನ ನಡೆಯಲಿದ್ದು, ರಾಜ್ಯದಿಂದ 188 ಪ್ರತಿನಿಧಿಗಳು ಸೇರಿ, ಒಟ್ಟು 3 ಸಾವಿರ ಮಂದಿ ಭಾಗವಹಿಸುವರು ಎಂದು ತಿಳಿಸಿದರು.<br /> <br /> ಕೆಜೆಪಿ ಸಂಯುಕ್ತರಂಗ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜತೆ ಸಿಪಿಐ ಎಂದಿಗೂ ಕೈಜೋಡಿಸುವುದಿಲ್ಲ ಎಂದು ಅನಂತಸುಬ್ಬರಾವ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>