<p><strong>ಬೆಂಗಳೂರು: </strong>ಡೆಂಗೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದ ಕಾಡುಗೊಂಡನಹಳ್ಳಿಯಲ್ಲಿ ಶನಿವಾರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತ್ತು.<br /> <br /> ಗೃಹ ಸಚಿವ ಕೆ.ಜೆ.ಜಾರ್ಜ್ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮನೆ ಮನೆಗೆ ತೆರಳಿದ ಸಚಿವರು ಡೆಂಗೆ ಬಗ್ಗೆ ಹಾಗೂ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.<br /> <br /> ಬಿಬಿಎಂಪಿಯ ಪೂರ್ವ ವಲಯದ 44 ವಾರ್ಡ್ಗಳಲ್ಲಿ, ಪ್ರತಿ ವಾರ್ಡ್ಗೂ ಹಿರಿಯ ಆರೋಗ್ಯ ವೀಕ್ಷಕರ ಮೇಲ್ವಿಚಾರಣೆಯಲ್ಲಿ 5 ತಂಡಗಳಂತೆ ಒಟ್ಟು 220 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳ ಸದಸ್ಯರು ಮನೆ ಮನೆಗೂ ಭೇಟಿ ನೀಡಿ, ಡೆಂಗೆಯ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.<br /> <br /> ಸೊಳ್ಳೆ ಉತ್ಪತ್ತಿಯ ತಾಣಗಳನ್ನು ಗುರುತಿಸಿ ಸೊಳ್ಳೆ ನಿಯಂತ್ರಣ ಔಷಧಿ ಸಿಂಪಡಣೆ ಹಾಗೂ ಫಾಗಿಂಗ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಾಗೃತಿ ಕಾರ್ಯಕ್ರಮದಲ್ಲಿ ಸುಮಾರು 200 ಮಂದಿ ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಬಿಬಿಎಂಪಿಯ ಆರೋಗ್ಯ ವಿಭಾಗದ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಡೆಂಗೆಯ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದ ಕಾಡುಗೊಂಡನಹಳ್ಳಿಯಲ್ಲಿ ಶನಿವಾರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತ್ತು.<br /> <br /> ಗೃಹ ಸಚಿವ ಕೆ.ಜೆ.ಜಾರ್ಜ್ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮನೆ ಮನೆಗೆ ತೆರಳಿದ ಸಚಿವರು ಡೆಂಗೆ ಬಗ್ಗೆ ಹಾಗೂ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.<br /> <br /> ಬಿಬಿಎಂಪಿಯ ಪೂರ್ವ ವಲಯದ 44 ವಾರ್ಡ್ಗಳಲ್ಲಿ, ಪ್ರತಿ ವಾರ್ಡ್ಗೂ ಹಿರಿಯ ಆರೋಗ್ಯ ವೀಕ್ಷಕರ ಮೇಲ್ವಿಚಾರಣೆಯಲ್ಲಿ 5 ತಂಡಗಳಂತೆ ಒಟ್ಟು 220 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳ ಸದಸ್ಯರು ಮನೆ ಮನೆಗೂ ಭೇಟಿ ನೀಡಿ, ಡೆಂಗೆಯ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.<br /> <br /> ಸೊಳ್ಳೆ ಉತ್ಪತ್ತಿಯ ತಾಣಗಳನ್ನು ಗುರುತಿಸಿ ಸೊಳ್ಳೆ ನಿಯಂತ್ರಣ ಔಷಧಿ ಸಿಂಪಡಣೆ ಹಾಗೂ ಫಾಗಿಂಗ್ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಾಗೃತಿ ಕಾರ್ಯಕ್ರಮದಲ್ಲಿ ಸುಮಾರು 200 ಮಂದಿ ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಬಿಬಿಎಂಪಿಯ ಆರೋಗ್ಯ ವಿಭಾಗದ ಸಿಬ್ಬಂದಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>