<p>ಯಾದಗಿರಿ: ರಾಜ್ಯದಾದ್ಯಂತ ಹರಡುತ್ತಿರುವ ಡೆಂಗೆ ಜ್ವರದ ಬಗ್ಗೆ ಎಚ್ಚರ ವಹಿಸಬೇಕು. ಈ ರೋಗಕ್ಕೆ ಕಾರಣವಾಗಿರುವ ಸೊಳ್ಳೆಯ ನಿಯಂತ್ರಣಕ್ಕಾಗಿ ನೀರಿನ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ತಿಳಿಸಿದರು. ಸೋಮವಾರ ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಡೆಂಗೆ ಜ್ವರ ಮುನ್ನೆಚ್ಚರಿಕೆ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> ಡೆಂಗೆ ಜ್ವರವು ವೈರಸ್ನಿಂದ ಉಂಟಾಗುವ ಕಾಯಿಲೆ. ಸೋಂಕು ಹೊಂದಿದ ಈಡಿಸ್ ಇಜಿಪ್ಟೈ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸಾಮಾನ್ಯವಾಗಿ ಈ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಸಂತನಾಭಿವೃದ್ಧಿ ಮಾಡುವ ಹಿನ್ನೆಲೆಯಲ್ಲಿ, ಎಲ್ಲರೂ ನೀರಿನ ಸ್ವಚ್ಛತೆ ಬಗ್ಗೆ ಜಾಗೃತಿ ವಹಿಸುವಂತೆ ತಿಳಿಸಿದರು.<br /> <br /> ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಜಾಗೃತಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು.<br /> ಡೆಂಗೆ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲವಾದ್ದರಿಂದ ಈ ರೋಗದ ಲಕ್ಷಣ ಕಂಡು ಬಂದ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು. ಈ ರೋಗದ ಹತೋಟಿಗೆ ನೀರು ಶೇಖರಿಸುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್, ಬ್ಯಾರಲ್, ಮಣ್ಣಿನ ಮಡಿಕೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿಬೇಕು. ಸಾರ್ವಜನಿಕರು ಮತ್ತು ಅಧಿಕಾರಿಗಳು ಈ ಕುರಿತು ಎಚ್ಚರ ವಹಿಸಲು ಸಲಹೆ ನೀಡಿದರು.<br /> <br /> ಡೆಂಗೆ ಜ್ವರದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಲ್ಲಿಕಾರ್ಜನ ಮುಕ್ಕಾ, ಡೆಂಗೆ ಜ್ವರ ನಿಯಂತ್ರಣಕ್ಕೆ ನೀರು ಶೇಖರಣಾ ತೊಟ್ಟಿಗಳನ್ನು ಭದ್ರವಾಗಿ ಮುಚ್ಚಬೇಕು. ಜಿಲ್ಲೆಯಲ್ಲಿ ಕಳೆದ ವರ್ಷ 15 ಪ್ರಕರಣಗಳು ಪತ್ತೆಯಾಗಿದ್ದವು.<br /> ಈ ವರ್ಷ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಈ ರೋಗ ನಿಯಂತ್ರಣಕ್ಕೆ ಎಲ್ಲರೂ ನೀರಿನ ಸ್ವಚ್ಛತೆ ಮತ್ತು ಪರಿಸರ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡುವಂತೆ ಸಲಹೆ ನೀಡಿದರು.<br /> <br /> ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಎ. ಜಿಲಾನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕಷ್ಣ, ಆರೋಗ್ಯ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ರಾಜ್ಯದಾದ್ಯಂತ ಹರಡುತ್ತಿರುವ ಡೆಂಗೆ ಜ್ವರದ ಬಗ್ಗೆ ಎಚ್ಚರ ವಹಿಸಬೇಕು. ಈ ರೋಗಕ್ಕೆ ಕಾರಣವಾಗಿರುವ ಸೊಳ್ಳೆಯ ನಿಯಂತ್ರಣಕ್ಕಾಗಿ ನೀರಿನ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ ತಿಳಿಸಿದರು. ಸೋಮವಾರ ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಡೆಂಗೆ ಜ್ವರ ಮುನ್ನೆಚ್ಚರಿಕೆ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> ಡೆಂಗೆ ಜ್ವರವು ವೈರಸ್ನಿಂದ ಉಂಟಾಗುವ ಕಾಯಿಲೆ. ಸೋಂಕು ಹೊಂದಿದ ಈಡಿಸ್ ಇಜಿಪ್ಟೈ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸಾಮಾನ್ಯವಾಗಿ ಈ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಸಂತನಾಭಿವೃದ್ಧಿ ಮಾಡುವ ಹಿನ್ನೆಲೆಯಲ್ಲಿ, ಎಲ್ಲರೂ ನೀರಿನ ಸ್ವಚ್ಛತೆ ಬಗ್ಗೆ ಜಾಗೃತಿ ವಹಿಸುವಂತೆ ತಿಳಿಸಿದರು.<br /> <br /> ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಜಾಗೃತಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು.<br /> ಡೆಂಗೆ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲವಾದ್ದರಿಂದ ಈ ರೋಗದ ಲಕ್ಷಣ ಕಂಡು ಬಂದ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು. ಈ ರೋಗದ ಹತೋಟಿಗೆ ನೀರು ಶೇಖರಿಸುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್, ಬ್ಯಾರಲ್, ಮಣ್ಣಿನ ಮಡಿಕೆಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿಬೇಕು. ಸಾರ್ವಜನಿಕರು ಮತ್ತು ಅಧಿಕಾರಿಗಳು ಈ ಕುರಿತು ಎಚ್ಚರ ವಹಿಸಲು ಸಲಹೆ ನೀಡಿದರು.<br /> <br /> ಡೆಂಗೆ ಜ್ವರದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಲ್ಲಿಕಾರ್ಜನ ಮುಕ್ಕಾ, ಡೆಂಗೆ ಜ್ವರ ನಿಯಂತ್ರಣಕ್ಕೆ ನೀರು ಶೇಖರಣಾ ತೊಟ್ಟಿಗಳನ್ನು ಭದ್ರವಾಗಿ ಮುಚ್ಚಬೇಕು. ಜಿಲ್ಲೆಯಲ್ಲಿ ಕಳೆದ ವರ್ಷ 15 ಪ್ರಕರಣಗಳು ಪತ್ತೆಯಾಗಿದ್ದವು.<br /> ಈ ವರ್ಷ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಈ ರೋಗ ನಿಯಂತ್ರಣಕ್ಕೆ ಎಲ್ಲರೂ ನೀರಿನ ಸ್ವಚ್ಛತೆ ಮತ್ತು ಪರಿಸರ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡುವಂತೆ ಸಲಹೆ ನೀಡಿದರು.<br /> <br /> ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಎ. ಜಿಲಾನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕಷ್ಣ, ಆರೋಗ್ಯ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>