<p><strong>ಹೊಸದುರ್ಗ:</strong> ತಾಲ್ಲೂಕಿನ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಆರೋಗ್ಯ ಪಾಲನೆ ಉದ್ದೇಶದಿಂದ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಿದಲ್ಲಿ ಮಾತ್ರ ಮಕ್ಕಳ ಆರೋಗ್ಯ ಕಾಪಾಡಲು ಸಾಧ್ಯ ಎಂದು ತಹಶೀಲ್ದಾರ್ ಕೆ. ಏಕೇಶ್ಬಾಬು ತಿಳಿಸಿದರು.<br /> <br /> ಸೋಮವಾರ ಪಟ್ಟಣದ ಶಾದಿ ಮಹಲ್ನಲ್ಲಿ ತಾಲ್ಲೂಕಿನ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಡೆಂಗೆ ಜ್ವರ ನಿವಾರಣೆಯ ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಆರೋಗ್ಯ ಜಾಗೃತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> ತಾಲ್ಲೂಕಿನಲ್ಲಿ ಈಗಾಗಲೇ ಡೆಂಗೆ ಜ್ವರಕ್ಕೆ ಸಂಬಂಧಿಸಿಂದಂತೆ 5 ಪ್ರಕರಣ ದಾಖಲಾಗಿದ್ದು, ಜನತೆಯಲ್ಲಿ ಭಯ ಉಂಟಾಗಿದೆ. ಇಂತಹ ಅಪಾಯಕಾರಿ ರೋಗದ ನಿವಾರಣೆಗೆ ತಾಲ್ಲೂಕಿನ ಎಲ್ಲಾ ಕಾರ್ಯಕರ್ತೆಯರು, ಶಿಕ್ಷಕರು, ಪಂಚಾಯ್ತಿ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿ ವರ್ಗದವರು ತಮ್ಮ ಗ್ರಾಮಗಳ ಪರಿಸರದ ಸ್ವಚ್ಛತೆಯ ದೃಷ್ಟಿಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.<br /> <br /> `ಮಕ್ಕಳು ಈ ದೇಶದ ಆಸ್ತಿ ಆಗಿರುವುದರಿಂದ ಅವರ ಆರೋಗ್ಯ ವೃದ್ಧಿಗೆ ಪೂರಕ ಪರಿಸರ ನಿರ್ಮಿಸುವುದು ನಮ್ಮೆಲ್ಲರ ಹೊಣೆ. ಡೆಂಗೆ ಜ್ವರ ಚಿಕ್ಕಮಕ್ಕಳಿನಿಂದ ವೃದ್ಧರವರೆಗೆ ಬರುವ ಕಾಯಿಲೆಯಾಗಿದೆ ಈ ರೋಗ ನಿವಾರಿಸಲು ಜನಸ್ಪಂದನ ಕಾರ್ಯಕ್ರಮ ಹಾಗೂ ಮಾಹಿತಿ ಒದಗಿಸಲು ಕಾರ್ಯಾಗಾರ ಏರ್ಪಡಿಸಲಾಗುವುದು' ಎಂದು ವಿವರಿಸಿದರು.<br /> <br /> ಕಾರ್ಯಾಗಾರದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಕಾಶಿ, ತಾ.ಪಂ. ಸಹಾಯಕ ಸಹ ನಿರ್ದೇಶಕ ತಿಪ್ಪೇಸ್ವಾಮಿ, ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.<br /> <br /> <strong>ಮೊಳಕಾಲ್ಮುರು ವರದಿ</strong><br /> ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಹೊಂದಬೇಕು ಎಂದು ಸಹಾಯಕ ಆರೋಗ್ಯ ನಿರೀಕ್ಷಕ ಆರ್. ಲೋಕೇಶ್ವರಪ್ಪ ಹೇಳಿದರು.<br /> ತಾಲ್ಲೂಕಿನ ಬಿ.ಜಿ.ಕೆರೆಯಲ್ಲಿ ಈಚೆಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿ, ಸ್ವಚ್ಛತೆ ಕಾಪಾಡುವ ಮೂಲಕ ಮಾತ್ರ ಮುಖ್ಯವಾಗಿ ಡೆಂಗೆ, ಚಿಕುನ್ಗುನ್ಯಾ ಮೊದಲಾದ ರೋಗ ಪರಿಣಾಮಕಾರಿಯಾಗಿ ನಿಯಂತ್ರಣ ಮಾಡಲು ಸಾಧ್ಯವಿದೆ.<br /> <br /> ಇದಕ್ಕೆ ಸಮುದಾಯದ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರು ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕು ಎಂದರು.<br /> ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರಾಧಾ ಕಾರ್ಯಾಗಾರ ಉದ್ಘಾಟಿಸಿದರು. ಉಪಾಧ್ಯಕ್ಷ ತಿಪ್ಪೇಸ್ವಾಮಿ, ಶಿಕ್ಷಕಿ ಭಾಗ್ಯಮ್ಮ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ:</strong> ತಾಲ್ಲೂಕಿನ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಆರೋಗ್ಯ ಪಾಲನೆ ಉದ್ದೇಶದಿಂದ ಶ್ರದ್ಧೆಯಿಂದ ಕಾರ್ಯ ನಿರ್ವಹಿಸಿದಲ್ಲಿ ಮಾತ್ರ ಮಕ್ಕಳ ಆರೋಗ್ಯ ಕಾಪಾಡಲು ಸಾಧ್ಯ ಎಂದು ತಹಶೀಲ್ದಾರ್ ಕೆ. ಏಕೇಶ್ಬಾಬು ತಿಳಿಸಿದರು.<br /> <br /> ಸೋಮವಾರ ಪಟ್ಟಣದ ಶಾದಿ ಮಹಲ್ನಲ್ಲಿ ತಾಲ್ಲೂಕಿನ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಡೆಂಗೆ ಜ್ವರ ನಿವಾರಣೆಯ ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಆರೋಗ್ಯ ಜಾಗೃತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.<br /> <br /> ತಾಲ್ಲೂಕಿನಲ್ಲಿ ಈಗಾಗಲೇ ಡೆಂಗೆ ಜ್ವರಕ್ಕೆ ಸಂಬಂಧಿಸಿಂದಂತೆ 5 ಪ್ರಕರಣ ದಾಖಲಾಗಿದ್ದು, ಜನತೆಯಲ್ಲಿ ಭಯ ಉಂಟಾಗಿದೆ. ಇಂತಹ ಅಪಾಯಕಾರಿ ರೋಗದ ನಿವಾರಣೆಗೆ ತಾಲ್ಲೂಕಿನ ಎಲ್ಲಾ ಕಾರ್ಯಕರ್ತೆಯರು, ಶಿಕ್ಷಕರು, ಪಂಚಾಯ್ತಿ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿ ವರ್ಗದವರು ತಮ್ಮ ಗ್ರಾಮಗಳ ಪರಿಸರದ ಸ್ವಚ್ಛತೆಯ ದೃಷ್ಟಿಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.<br /> <br /> `ಮಕ್ಕಳು ಈ ದೇಶದ ಆಸ್ತಿ ಆಗಿರುವುದರಿಂದ ಅವರ ಆರೋಗ್ಯ ವೃದ್ಧಿಗೆ ಪೂರಕ ಪರಿಸರ ನಿರ್ಮಿಸುವುದು ನಮ್ಮೆಲ್ಲರ ಹೊಣೆ. ಡೆಂಗೆ ಜ್ವರ ಚಿಕ್ಕಮಕ್ಕಳಿನಿಂದ ವೃದ್ಧರವರೆಗೆ ಬರುವ ಕಾಯಿಲೆಯಾಗಿದೆ ಈ ರೋಗ ನಿವಾರಿಸಲು ಜನಸ್ಪಂದನ ಕಾರ್ಯಕ್ರಮ ಹಾಗೂ ಮಾಹಿತಿ ಒದಗಿಸಲು ಕಾರ್ಯಾಗಾರ ಏರ್ಪಡಿಸಲಾಗುವುದು' ಎಂದು ವಿವರಿಸಿದರು.<br /> <br /> ಕಾರ್ಯಾಗಾರದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಕಾಶಿ, ತಾ.ಪಂ. ಸಹಾಯಕ ಸಹ ನಿರ್ದೇಶಕ ತಿಪ್ಪೇಸ್ವಾಮಿ, ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.<br /> <br /> <strong>ಮೊಳಕಾಲ್ಮುರು ವರದಿ</strong><br /> ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಹೊಂದಬೇಕು ಎಂದು ಸಹಾಯಕ ಆರೋಗ್ಯ ನಿರೀಕ್ಷಕ ಆರ್. ಲೋಕೇಶ್ವರಪ್ಪ ಹೇಳಿದರು.<br /> ತಾಲ್ಲೂಕಿನ ಬಿ.ಜಿ.ಕೆರೆಯಲ್ಲಿ ಈಚೆಗೆ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿ, ಸ್ವಚ್ಛತೆ ಕಾಪಾಡುವ ಮೂಲಕ ಮಾತ್ರ ಮುಖ್ಯವಾಗಿ ಡೆಂಗೆ, ಚಿಕುನ್ಗುನ್ಯಾ ಮೊದಲಾದ ರೋಗ ಪರಿಣಾಮಕಾರಿಯಾಗಿ ನಿಯಂತ್ರಣ ಮಾಡಲು ಸಾಧ್ಯವಿದೆ.<br /> <br /> ಇದಕ್ಕೆ ಸಮುದಾಯದ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರು ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕು ಎಂದರು.<br /> ಗ್ರಾಮ ಪಂಚಾಯ್ತಿ ಅಧ್ಯಕ್ಷೆ ರಾಧಾ ಕಾರ್ಯಾಗಾರ ಉದ್ಘಾಟಿಸಿದರು. ಉಪಾಧ್ಯಕ್ಷ ತಿಪ್ಪೇಸ್ವಾಮಿ, ಶಿಕ್ಷಕಿ ಭಾಗ್ಯಮ್ಮ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>