<p>ಬಂಟ್ವಾಳ: ತಾಲ್ಲೂಕಿನಾದ್ಯಂತ ಈಗಾಗಲೇ ಮುಂಗಾರು ಮಳೆ ಆರಂಭಗೊಂಡಿದ್ದು, ಮಲೇರಿಯಾ -ಡೆಂಗೆ ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾ.ಪಂ.ಅಧ್ಯಕ್ಷೆ ಲಲಿತಾ ನಾಯ್ಕ ಅವರು ಸೂಚಿಸಿದ್ದಾರೆ.<br /> <br /> ತಾಲೂಕಿನ ಬಿ.ಸಿ.ರೋಡ್ ತಾಲ್ಲೂಕು ಪಂಚಾಯಿತಿಯಲ್ಲಿ ಬುಧವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.<br /> ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ ಅವರಿಂದ ಈ ಬಗ್ಗೆ ಮಾಹಿತಿ ಕೇಳಿದ ಅವರು ಎಲ್ಲೆಲ್ಲಿ ಡೆಂಗೆ, ಮಲೇರಿಯಾ, ಇಲಿಜ್ವರ ಮತ್ತಿತರ ರೋಗಗಳು ಪತ್ತೆಯಾಗಿವೆ ಎಂಬ ಬಗ್ಗೆ ವಿವರ ಮತ್ತು ಇವುಗಳ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸುವಂತೆ ಸೂಚಿಸಿದರು.<br /> <br /> ಇದೇ ವೇಳೆ ಪುಂಜಾಲಕಟ್ಟೆ ಮತ್ತು ಸಿದ್ಧಕಟ್ಟೆ ಮೆಸ್ಕಾಂ ಶಾಖೆ ವ್ಯಾಪ್ತಿಯ ವಿದ್ಯುತ್ ಸಮಸ್ಯೆಗಳ ಬಗ್ಗೆ ಸಭೆಯಲ್ಲಿದ್ದ ಮೆಸ್ಕಾಂ ಎಂಜಿನಿಯರ್ಗಳೊಂದಿಗೆ ಮಾತುಕತೆ ನಡೆಸಿದರು. ತಾ.ಪಂ.ಉಪಾಧ್ಯಕ್ಷ ಆನಂದ ಶಂಭೂರು, ಸ್ಥಾಯಿ ಸಮಿತಿ ಅಧ್ಯಕ್ಷ ಸಂಪತ್ಕುಮಾರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಪೂಜಾರಿ, ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಟ್ವಾಳ: ತಾಲ್ಲೂಕಿನಾದ್ಯಂತ ಈಗಾಗಲೇ ಮುಂಗಾರು ಮಳೆ ಆರಂಭಗೊಂಡಿದ್ದು, ಮಲೇರಿಯಾ -ಡೆಂಗೆ ಮತ್ತಿತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಾ.ಪಂ.ಅಧ್ಯಕ್ಷೆ ಲಲಿತಾ ನಾಯ್ಕ ಅವರು ಸೂಚಿಸಿದ್ದಾರೆ.<br /> <br /> ತಾಲೂಕಿನ ಬಿ.ಸಿ.ರೋಡ್ ತಾಲ್ಲೂಕು ಪಂಚಾಯಿತಿಯಲ್ಲಿ ಬುಧವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.<br /> ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುನಾಥ ಅವರಿಂದ ಈ ಬಗ್ಗೆ ಮಾಹಿತಿ ಕೇಳಿದ ಅವರು ಎಲ್ಲೆಲ್ಲಿ ಡೆಂಗೆ, ಮಲೇರಿಯಾ, ಇಲಿಜ್ವರ ಮತ್ತಿತರ ರೋಗಗಳು ಪತ್ತೆಯಾಗಿವೆ ಎಂಬ ಬಗ್ಗೆ ವಿವರ ಮತ್ತು ಇವುಗಳ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಒದಗಿಸುವಂತೆ ಸೂಚಿಸಿದರು.<br /> <br /> ಇದೇ ವೇಳೆ ಪುಂಜಾಲಕಟ್ಟೆ ಮತ್ತು ಸಿದ್ಧಕಟ್ಟೆ ಮೆಸ್ಕಾಂ ಶಾಖೆ ವ್ಯಾಪ್ತಿಯ ವಿದ್ಯುತ್ ಸಮಸ್ಯೆಗಳ ಬಗ್ಗೆ ಸಭೆಯಲ್ಲಿದ್ದ ಮೆಸ್ಕಾಂ ಎಂಜಿನಿಯರ್ಗಳೊಂದಿಗೆ ಮಾತುಕತೆ ನಡೆಸಿದರು. ತಾ.ಪಂ.ಉಪಾಧ್ಯಕ್ಷ ಆನಂದ ಶಂಭೂರು, ಸ್ಥಾಯಿ ಸಮಿತಿ ಅಧ್ಯಕ್ಷ ಸಂಪತ್ಕುಮಾರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ವಿಶ್ವನಾಥ ಪೂಜಾರಿ, ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>