<p><strong>ಚಿಕ್ಕಮಗಳೂರು: </strong>ಡೆಂಗೆ ಜ್ವರದಿಂದ ಸಾವನ್ನಪ್ಪಿದ ಗುಣಸಾಗರದ ಯುವಕನ ಮನೆಗೆ ಆರೋಗ್ಯ ಸಚಿವ ಯ.ಟಿ ಖಾದರ್ ಮಂಗಳವಾರ ರಾತ್ರಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.<br /> <br /> ಕಡೂರು ತಾಲ್ಲೂಕಿನ ದೇವನೂರು ಸಮೀಪದ ಗುಣಸಾಗರ ನಿವಾಸಿ ಲಕ್ಷ್ಮಣ (27) ಎಂಬಾತ ಡೆಂಗೆಯಿಂದ ಸಾವನ್ನಪ್ಪಿದ್ದು, ಸಚಿವರು ಗ್ರಾಮದಲ್ಲಿ ಮೃತನ ಪತ್ನಿ, ತಾಯಿ ಮತ್ತು ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.<br /> <br /> ಮೃತನ ಕುಟುಂಬದವರಿಗೆ ಪರಿಹಾರ ನೀಡಲು ಅನುಕೂಲವಾಗುವಂತೆ ಕೂಡಲೇ ಸರ್ಕಾರಕ್ಕೆ ವರದಿ ಕಳುಹಿಸುವಂತೆ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.<br /> <br /> ಬಳಿಕ ಮಾತನಾಡಿದ ಯು.ಟಿ.ಖಾದರ್, ಯಾವುದೇ ಜ್ವರದ ಲಕ್ಷಣ ಕಂಡುಬಂದಲ್ಲಿ ರಕ್ತದ ಪರೀಕ್ಷೆ ನಡೆಸಬೇಕು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ವಿಳಂಬ ಮಾಡದೆ ಉನ್ನತ ಆಸ್ಪತ್ರೆಗಳಿಗೆ ಕಳುಹಿಸಬೇಕು. ಆಶಾ ಕಾರ್ಯಕರ್ತೆಯರನ್ನು ಮನೆಮನೆ ಸಮೀಕ್ಷೆ ಕಾರ್ಯ ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.<br /> <br /> ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಸಾಂಕ್ರಾಮಿಕ ರೋಗ ಪೀಡಿತರ ಮಾಹಿತಿ ಆರೋಗ್ಯ ಇಲಾಖೆಗೆ ತಕ್ಷಣವೇ ಸಿಗುವಂತೆ ಕ್ರಮ ವಹಿಸಬೇಕು. ರೋಗ ಪೀಡಿತರನ್ನು ಅನಗತ್ಯವಾಗಿ ಬೇರೆ ಜಿಲ್ಲೆಗಳಿಗೆ ಚಿಕಿತ್ಸೆಗೆ ಕಳುಹಿಸದಂತೆ ಸೂಚಿಸಿದರು.<br /> <br /> ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಮೃತನ ಪತ್ನಿಗೆ ಸೂಕ್ತ ಉದ್ಯೋಗ ದೊರಕಿಸಿಕೊಡಲು ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.<br /> <br /> ಬಳಿಕ ಗುಣಸಾಗರ ಗ್ರಾಮಸ್ಥರೊಂದಿಗೆ ಸಮಾಲೋಚಿಸಿದ ಸಚಿವರ ಖಾದರ್, ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವಂತೆ ಮನವಿ ಮಾಡಿದರು. ಯಾವುದೇ ಜ್ವರದ ಲಕ್ಷಣ ಕಂಡುಬಂದಲ್ಲಿ, ತಕ್ಷಣವೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಬೇಕು, ಕುಡಿಯುವ ನೀರನ್ನು ಶುದ್ಧೀಕರಿಸಿ ಕುಡಿಯಬೇಕು ಎಂದು ತಿಳಿಸಿದರು.<br /> <br /> ಜನತೆಯ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸರ್ಕಾರದ ವಿಳಂಬ ಸಹಿಸುವುದಿಲ್ಲ. ಯಾವುದೇ ರೀತಿ ರಾಜಿಯಾಗುವುದಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ಡೆಂಗೆ ಜ್ವರದಿಂದ ಸಾವನ್ನಪ್ಪಿದ ಗುಣಸಾಗರದ ಯುವಕನ ಮನೆಗೆ ಆರೋಗ್ಯ ಸಚಿವ ಯ.ಟಿ ಖಾದರ್ ಮಂಗಳವಾರ ರಾತ್ರಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.<br /> <br /> ಕಡೂರು ತಾಲ್ಲೂಕಿನ ದೇವನೂರು ಸಮೀಪದ ಗುಣಸಾಗರ ನಿವಾಸಿ ಲಕ್ಷ್ಮಣ (27) ಎಂಬಾತ ಡೆಂಗೆಯಿಂದ ಸಾವನ್ನಪ್ಪಿದ್ದು, ಸಚಿವರು ಗ್ರಾಮದಲ್ಲಿ ಮೃತನ ಪತ್ನಿ, ತಾಯಿ ಮತ್ತು ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.<br /> <br /> ಮೃತನ ಕುಟುಂಬದವರಿಗೆ ಪರಿಹಾರ ನೀಡಲು ಅನುಕೂಲವಾಗುವಂತೆ ಕೂಡಲೇ ಸರ್ಕಾರಕ್ಕೆ ವರದಿ ಕಳುಹಿಸುವಂತೆ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.<br /> <br /> ಬಳಿಕ ಮಾತನಾಡಿದ ಯು.ಟಿ.ಖಾದರ್, ಯಾವುದೇ ಜ್ವರದ ಲಕ್ಷಣ ಕಂಡುಬಂದಲ್ಲಿ ರಕ್ತದ ಪರೀಕ್ಷೆ ನಡೆಸಬೇಕು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ವಿಳಂಬ ಮಾಡದೆ ಉನ್ನತ ಆಸ್ಪತ್ರೆಗಳಿಗೆ ಕಳುಹಿಸಬೇಕು. ಆಶಾ ಕಾರ್ಯಕರ್ತೆಯರನ್ನು ಮನೆಮನೆ ಸಮೀಕ್ಷೆ ಕಾರ್ಯ ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.<br /> <br /> ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಸಾಂಕ್ರಾಮಿಕ ರೋಗ ಪೀಡಿತರ ಮಾಹಿತಿ ಆರೋಗ್ಯ ಇಲಾಖೆಗೆ ತಕ್ಷಣವೇ ಸಿಗುವಂತೆ ಕ್ರಮ ವಹಿಸಬೇಕು. ರೋಗ ಪೀಡಿತರನ್ನು ಅನಗತ್ಯವಾಗಿ ಬೇರೆ ಜಿಲ್ಲೆಗಳಿಗೆ ಚಿಕಿತ್ಸೆಗೆ ಕಳುಹಿಸದಂತೆ ಸೂಚಿಸಿದರು.<br /> <br /> ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಮೃತನ ಪತ್ನಿಗೆ ಸೂಕ್ತ ಉದ್ಯೋಗ ದೊರಕಿಸಿಕೊಡಲು ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.<br /> <br /> ಬಳಿಕ ಗುಣಸಾಗರ ಗ್ರಾಮಸ್ಥರೊಂದಿಗೆ ಸಮಾಲೋಚಿಸಿದ ಸಚಿವರ ಖಾದರ್, ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವಂತೆ ಮನವಿ ಮಾಡಿದರು. ಯಾವುದೇ ಜ್ವರದ ಲಕ್ಷಣ ಕಂಡುಬಂದಲ್ಲಿ, ತಕ್ಷಣವೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಬೇಕು, ಕುಡಿಯುವ ನೀರನ್ನು ಶುದ್ಧೀಕರಿಸಿ ಕುಡಿಯಬೇಕು ಎಂದು ತಿಳಿಸಿದರು.<br /> <br /> ಜನತೆಯ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಸರ್ಕಾರದ ವಿಳಂಬ ಸಹಿಸುವುದಿಲ್ಲ. ಯಾವುದೇ ರೀತಿ ರಾಜಿಯಾಗುವುದಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>