<p><strong>ಸೊರಬ: </strong>ರಾಜ್ಯದಲ್ಲಿ ಡೆಂಗೆ ಜ್ವರ ಹೆಚ್ಚಾಗುತ್ತಿದ್ದು, ಜ್ವರ ಪೀಡಿತರು ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯದೇ ಹೋದರೆ ಮಾರಕ ಕಾಯಿಲೆಗೆ ತುತ್ತಾಗಬೇಕಾಗುತ್ತದೆ. ಇದೊಂದು ಸಂಕ್ರಾಮಿಕ ರೋಗ ವಾಗಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವ ಮೂಲಕ ಡೆಂಗೆಯಿಂದ ದೂರವಿರಲು ಸಾಧ್ಯವಿದೆ ಎಂದು ತಹಶೀಲ್ದಾರ್ ತೇಜಸ್ ಕುಮಾರ್ ಹೇಳಿದರು.<br /> <br /> ಇಲ್ಲಿನ ಪಟ್ಟಣ ಪಂಚಾಯ್ತಿ ಕಾರ್ಯಾಲಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಡೆಂಗೆ ಜ್ವರ ಕುರಿತು ಏರ್ಪಡಿಸಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು.<br /> <br /> ಡೆಂಗೆ ಬಾರದಂತೆ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀಶಕ್ತಿ ಸಂಘಟನೆಗಳು ಮಾಡಬೇಕಾಗಿದೆ ಎಂದರು.<br /> <br /> ಆರೋಗ್ಯ ಇಲಾಖೆಯ ಅಧಿಕಾರಿ ರಮಾಕಾಂತ್ ಮಾತ ನಾಡಿದರು. ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ವೀರೇಶ್ ಕುಮಾರ್, ಶಿಕ್ಷಣ ಸಂಯೋಜಕ ಬಿ,ವಿ.ಜಾವೂರ್, ರಮೇಶ್, ಪಟ್ಟಣ ಪಂಚಾಯ್ತಿ ಸದಸ್ಯ ಪ್ರಶಾಂತ್ ಮೇಸ್ತ್ರಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊರಬ: </strong>ರಾಜ್ಯದಲ್ಲಿ ಡೆಂಗೆ ಜ್ವರ ಹೆಚ್ಚಾಗುತ್ತಿದ್ದು, ಜ್ವರ ಪೀಡಿತರು ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯದೇ ಹೋದರೆ ಮಾರಕ ಕಾಯಿಲೆಗೆ ತುತ್ತಾಗಬೇಕಾಗುತ್ತದೆ. ಇದೊಂದು ಸಂಕ್ರಾಮಿಕ ರೋಗ ವಾಗಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವ ಮೂಲಕ ಡೆಂಗೆಯಿಂದ ದೂರವಿರಲು ಸಾಧ್ಯವಿದೆ ಎಂದು ತಹಶೀಲ್ದಾರ್ ತೇಜಸ್ ಕುಮಾರ್ ಹೇಳಿದರು.<br /> <br /> ಇಲ್ಲಿನ ಪಟ್ಟಣ ಪಂಚಾಯ್ತಿ ಕಾರ್ಯಾಲಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಡೆಂಗೆ ಜ್ವರ ಕುರಿತು ಏರ್ಪಡಿಸಿದ್ದ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು.<br /> <br /> ಡೆಂಗೆ ಬಾರದಂತೆ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀಶಕ್ತಿ ಸಂಘಟನೆಗಳು ಮಾಡಬೇಕಾಗಿದೆ ಎಂದರು.<br /> <br /> ಆರೋಗ್ಯ ಇಲಾಖೆಯ ಅಧಿಕಾರಿ ರಮಾಕಾಂತ್ ಮಾತ ನಾಡಿದರು. ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ವೀರೇಶ್ ಕುಮಾರ್, ಶಿಕ್ಷಣ ಸಂಯೋಜಕ ಬಿ,ವಿ.ಜಾವೂರ್, ರಮೇಶ್, ಪಟ್ಟಣ ಪಂಚಾಯ್ತಿ ಸದಸ್ಯ ಪ್ರಶಾಂತ್ ಮೇಸ್ತ್ರಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>