<p><strong>ಚಿತ್ರದುರ್ಗ:</strong> ಖಾಸಗಿ ಶಾಲಾ ಕಾಲೇಜುಗಳಲ್ಲಿ ಪಡೆಯುತ್ತಿರುವ ಡೊನೇಷನ್ ಹಾವಳಿ ತಡೆಗಟ್ಟಬೇಕು ಹಾಗೂ ಮನೆಪಾಠ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುರುವಾರ ನ್ಯೂ ಜೈ ಭಾರತ್ ರಕ್ಷಣಾ ವೇದಿಕೆ ಜಿಲ್ಲಾ ವಿದ್ಯಾರ್ಥಿ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. <br /> ಜಿಲ್ಲೆಯಲ್ಲಿ ಖಾಸಗಿ ಶಾಲಾ ಕಾಲೇಜುಗಳು ಸರ್ಕಾರ ನಿಗದಿಸಿದ ಶುಲ್ಕಕ್ಕಿಂತ ಹೆಚ್ಚುವರಿ ಹಣ ಪಡೆಯುತ್ತಿದ್ದು, ಇದರಿಂದ ಪೋಷಕರು ಶುಲ್ಕ ಭರಿಸಲು ಪರಿತಪಿಸುವಂತಾಗಿದೆ. ಆದ್ದರಿಂದ, ಖಾಸಗಿ ಸಂಸ್ಥೆಗಳ ಸಂಸ್ಥಾಪಕ, ಕಾರ್ಯದರ್ಶಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು. <br /> <br /> ಮನೆಪಾಠ ಮಾಡುವವರ ವಿರುದ್ಧ ಹಲವಾರು ಸಂಘಟನೆಗಳು ಪ್ರತಿಭಟನೆ ನಡೆಸಿದ್ದರೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ. ಇದರಿಂದ ಗ್ರಾಮೀಣ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು. ನ್ಯೂ ಜೈ ಭಾರತ್ ರಕ್ಷಣಾ ವೇದಿಕೆ ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಭಿಷೇಕ್ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಖಾಸಗಿ ಶಾಲಾ ಕಾಲೇಜುಗಳಲ್ಲಿ ಪಡೆಯುತ್ತಿರುವ ಡೊನೇಷನ್ ಹಾವಳಿ ತಡೆಗಟ್ಟಬೇಕು ಹಾಗೂ ಮನೆಪಾಠ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುರುವಾರ ನ್ಯೂ ಜೈ ಭಾರತ್ ರಕ್ಷಣಾ ವೇದಿಕೆ ಜಿಲ್ಲಾ ವಿದ್ಯಾರ್ಥಿ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. <br /> ಜಿಲ್ಲೆಯಲ್ಲಿ ಖಾಸಗಿ ಶಾಲಾ ಕಾಲೇಜುಗಳು ಸರ್ಕಾರ ನಿಗದಿಸಿದ ಶುಲ್ಕಕ್ಕಿಂತ ಹೆಚ್ಚುವರಿ ಹಣ ಪಡೆಯುತ್ತಿದ್ದು, ಇದರಿಂದ ಪೋಷಕರು ಶುಲ್ಕ ಭರಿಸಲು ಪರಿತಪಿಸುವಂತಾಗಿದೆ. ಆದ್ದರಿಂದ, ಖಾಸಗಿ ಸಂಸ್ಥೆಗಳ ಸಂಸ್ಥಾಪಕ, ಕಾರ್ಯದರ್ಶಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು. <br /> <br /> ಮನೆಪಾಠ ಮಾಡುವವರ ವಿರುದ್ಧ ಹಲವಾರು ಸಂಘಟನೆಗಳು ಪ್ರತಿಭಟನೆ ನಡೆಸಿದ್ದರೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ. ಇದರಿಂದ ಗ್ರಾಮೀಣ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು. ನ್ಯೂ ಜೈ ಭಾರತ್ ರಕ್ಷಣಾ ವೇದಿಕೆ ಜಿಲ್ಲಾ ವಿದ್ಯಾರ್ಥಿ ಘಟಕದ ಅಧ್ಯಕ್ಷ ಅಭಿಷೇಕ್ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>