<p><strong>ಹಾನಗಲ್ಲ: </strong>`ಪ್ರಸ್ತುತ ದೇಶದಾದ್ಯಂತ ಸುಮಾರು 85 ಕೋಟಿ ಮೋಬೈಲ್ ಪೋನ್ಗಳು ಬಳಕೆಯಲ್ಲಿದ್ದು, 3ಜಿ, 4ಜಿ ಸೇರಿದಂತೆ ಮುಂಬರುವ ದಿನಗಳಲ್ಲಿನ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಯುವಕರು ಸದ್ಬಳಕೆ ಮಾಡಿಕೊಂಡು ತಾವಿದ್ದ ಸ್ಥಳದಿಂದಲೇ ಅಗತ್ಯವಾದ ಶಿಕ್ಷಣವನ್ನು ಪಡೆಯಬಹುದಾಗಿದೆ~ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.<br /> <br /> ತಾಲ್ಲೂಕಿನ ಕೂಸನೂರಿನಲ್ಲಿ ಸೋಮ ವಾರ ಸರಕಾರಿ ಪಿಯು ಕಾಲೇಜ್ ಕಟ್ಟಡದ ಮೊದಲ ಮಹಡಿ ಉದ್ಘಾಟನೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.<br /> <br /> ಕಟ್ಟಡದ ಮಹಡಿ ಉದ್ಘಾಟಿಸಿ ಮಾತನಾಡಿದ ಲೋಕೋಪಯೋಗಿ ಸಚಿವ ಸಿ..ಎಂ.ಉದಾಸಿ, ಸ್ವಾತಂತ್ರ್ಯಾ ನಂತರದ ಸರಕಾರಗಳು ಶಿಕ್ಷಣಕ್ಕೆ ಆದ್ಯತೆ ನೀಡಿದ್ದರೆ. ಇಂದು ಭಾರತ ಜಗತ್ತಿನ ಮುಂದುವರೆದ ರಾಷ್ಟ್ರಗಳಲ್ಲಿ ಪ್ರಥಮ ಪಂಕ್ತಿಯಲ್ಲಿರುತ್ತಿತ್ತು ಎಂದರು. ಸದ್ಯದಲ್ಲಿ ತಾಲ್ಲೂಕಿನ ತಿಳವಳ್ಳಿಯಲ್ಲಿ ಪ್ರಥಮ ದರ್ಜೆ ಕಾಲೇಜ್ ಪ್ರಾರಂಭಿ ಸಲಾಗುವುದು ಎಂದರು.<br /> <br /> ಜಿ.ಪಂ ಸದಸ್ಯ ಬಸವರಾಜ ಹಾದಿ ಮನಿ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಕೂಸನೂರ ಗ್ರಾಪಂ ಅಧ್ಯಕ್ಷೆ ಮಲ್ಲಮ್ಮ ಕುರುಬರ ಅಧ್ಯಕ್ಷತೆ ವಹಿಸಿದ್ದರು. <br /> <br /> ತಾ.ಪಂ ಅಧ್ಯಕ್ಷೆ ಲಲಿತಾ ಹಿರೇ ಮಠ, ಉಪಾಧ್ಯಕ್ಷ ನಿಂಗಪ್ಪ ಗೊಬ್ಬೇರ, ಸದಸ್ಯೆ ಕಲ್ಪನಾ ಬ್ಯಾತನಾಳ, ಗ್ರಾ.ಪಂ ಉಪಾ ಧ್ಯಕ್ಷೆ ರೂಪಾ ಬಂಕೊಳ್ಳಿ, ಎಂಜನಿಯರ್ ಕೆ.ಶಿವಣ್ಣ, ಕಾಲೇಜು ಪ್ರಾಚಾರ್ಯ ಎಸ್.ಓ. ಬಾಸುತ್ಕರ್ ವೇದಿಕೆ ಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್ಲ: </strong>`ಪ್ರಸ್ತುತ ದೇಶದಾದ್ಯಂತ ಸುಮಾರು 85 ಕೋಟಿ ಮೋಬೈಲ್ ಪೋನ್ಗಳು ಬಳಕೆಯಲ್ಲಿದ್ದು, 3ಜಿ, 4ಜಿ ಸೇರಿದಂತೆ ಮುಂಬರುವ ದಿನಗಳಲ್ಲಿನ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಯುವಕರು ಸದ್ಬಳಕೆ ಮಾಡಿಕೊಂಡು ತಾವಿದ್ದ ಸ್ಥಳದಿಂದಲೇ ಅಗತ್ಯವಾದ ಶಿಕ್ಷಣವನ್ನು ಪಡೆಯಬಹುದಾಗಿದೆ~ ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.<br /> <br /> ತಾಲ್ಲೂಕಿನ ಕೂಸನೂರಿನಲ್ಲಿ ಸೋಮ ವಾರ ಸರಕಾರಿ ಪಿಯು ಕಾಲೇಜ್ ಕಟ್ಟಡದ ಮೊದಲ ಮಹಡಿ ಉದ್ಘಾಟನೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.<br /> <br /> ಕಟ್ಟಡದ ಮಹಡಿ ಉದ್ಘಾಟಿಸಿ ಮಾತನಾಡಿದ ಲೋಕೋಪಯೋಗಿ ಸಚಿವ ಸಿ..ಎಂ.ಉದಾಸಿ, ಸ್ವಾತಂತ್ರ್ಯಾ ನಂತರದ ಸರಕಾರಗಳು ಶಿಕ್ಷಣಕ್ಕೆ ಆದ್ಯತೆ ನೀಡಿದ್ದರೆ. ಇಂದು ಭಾರತ ಜಗತ್ತಿನ ಮುಂದುವರೆದ ರಾಷ್ಟ್ರಗಳಲ್ಲಿ ಪ್ರಥಮ ಪಂಕ್ತಿಯಲ್ಲಿರುತ್ತಿತ್ತು ಎಂದರು. ಸದ್ಯದಲ್ಲಿ ತಾಲ್ಲೂಕಿನ ತಿಳವಳ್ಳಿಯಲ್ಲಿ ಪ್ರಥಮ ದರ್ಜೆ ಕಾಲೇಜ್ ಪ್ರಾರಂಭಿ ಸಲಾಗುವುದು ಎಂದರು.<br /> <br /> ಜಿ.ಪಂ ಸದಸ್ಯ ಬಸವರಾಜ ಹಾದಿ ಮನಿ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಕೂಸನೂರ ಗ್ರಾಪಂ ಅಧ್ಯಕ್ಷೆ ಮಲ್ಲಮ್ಮ ಕುರುಬರ ಅಧ್ಯಕ್ಷತೆ ವಹಿಸಿದ್ದರು. <br /> <br /> ತಾ.ಪಂ ಅಧ್ಯಕ್ಷೆ ಲಲಿತಾ ಹಿರೇ ಮಠ, ಉಪಾಧ್ಯಕ್ಷ ನಿಂಗಪ್ಪ ಗೊಬ್ಬೇರ, ಸದಸ್ಯೆ ಕಲ್ಪನಾ ಬ್ಯಾತನಾಳ, ಗ್ರಾ.ಪಂ ಉಪಾ ಧ್ಯಕ್ಷೆ ರೂಪಾ ಬಂಕೊಳ್ಳಿ, ಎಂಜನಿಯರ್ ಕೆ.ಶಿವಣ್ಣ, ಕಾಲೇಜು ಪ್ರಾಚಾರ್ಯ ಎಸ್.ಓ. ಬಾಸುತ್ಕರ್ ವೇದಿಕೆ ಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>