<p><strong>ತುಮಕೂರು: </strong>ಜಮೀನಿಗೆ ಸಂಬಂಧಿಸಿದ ಎಲ್ಲ ದಾಖಲೆ ಹಾಗೂ ವ್ಯವಹಾರವನ್ನು ಪಾರದರ್ಶಕವಾಗಿ ನಿರ್ವಹಿಸಲು ಅನುವಾಗಿಸುವ `ಭೂಮಿ~ ಮತ್ತು `ಕಾವೇರಿ~ ತಂತ್ರಾಂಶ ಸಂಯೋಜನೆಗೆ ಕಂದಾಯ ಸಚಿವ ಜಿ.ಕರುಣಾಕರ ರೆಡ್ಡಿ ಶುಕ್ರವಾರ ಇಲ್ಲಿ ವಿಧ್ಯುಕ್ತ ಚಾಲನೆ ನೀಡಿದರು.<br /> <br /> ಈ ಸಂಯೋಜನೆಯಿಂದ ಭೂ ವ್ಯವಹಾರದಲ್ಲಿ ಆಗುತ್ತಿದ್ದ ಅಕ್ರಮಗಳಿಗೆ ತಡೆ ಬೀಳಲಿದೆ. ಮಾಲೀಕತ್ವ ಒಳಗೊಂಡಂತೆ ಜಮೀನಿಗೆ ಸಂಬಂಧಿಸಿದ ಎಲ್ಲ ವಿವರಗಳು `ಭೂಮಿ~ ದತ್ತಾಂಶದಲ್ಲಿ ಲಭ್ಯವಿದ್ದರೆ ಮಾತ್ರ ನೋಂದಣಿಗೆ ಅವಕಾಶ. ಒಂದೇ ಆಸ್ತಿಯನ್ನು ಹಲವರಿಗೆ ಮಾರುವ ದಂಧೆಗೆ ಪೂರ್ಣವಿರಾಮ ಬೀಳಲಿದೆ. ಪರಿಶಿಷ್ಟರಿಗೆ ಮಂಜೂರಾಗಿ ಪರಭಾರೆಗೆ ಅವಕಾಶವಿಲ್ಲದ ಮತ್ತು ಪರಾಭಾರೆ ನಿಷಿದ್ಧ ಜಮೀನನ್ನು ಮಾರಾಟ ಮಾಡಲಾಗದು.<br /> <br /> ಆಸ್ತಿ ಖರೀದಿಯ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಸ್ವಯಂಚಾಲಿತವಾಗಿ `ಮ್ಯುಟೇಷನ್~ ಪ್ರಕ್ರಿಯೆ ಆರಂಭವಾಗುವುದು. ಈ ಪ್ರಕ್ರಿಯೆಯ ಎಲ್ಲ ಹಂತಗಳ ಮಾಹಿತಿಯು ಎಸ್ಎಂಎಸ್ ಮೂಲಕ ಖರೀದಿದಾರರಿಗೆ ಲಭ್ಯವಾಗಲಿದೆ. ನೋಂದಣಿ ವೇಳೆ ಅಥವಾ ಮ್ಯುಟೇಷನ್ಗಾಗಿ ಅರ್ಜಿ ಸಲ್ಲಿಸುವಾಗ ಆಸಕ್ತರು ತಮ್ಮ ಮೊಬೈಲ್ ನಂಬರ್ ಒದಗಿಸಿದಲ್ಲಿ ಈ ಸೇವೆ ಲಭ್ಯ. ಇದರಿಂದಾಗಿ ಮೇಜಿನಿಂದ ಮೇಜಿಗೆ ಅಲೆಯುವ ತೊಂದರೆ ನಿವಾರಣೆಯಾಗಲಿದೆ. <br /> <br /> ಸಾರ್ವಜನಿಕರು ಕೋರಿಕೆ ಅರ್ಜಿ ಸಲ್ಲಿಸಿದಲ್ಲಿ ಅವರ ಜಮೀನಿಗೆ ಸಂಬಂಧಿಸಿದ ಯಾವುದೇ ವಹಿವಾಟು ನಡೆದಲ್ಲಿ ಎಸ್ಎಂಎಸ್ ಮೂಲಕ ಕೂಡಲೇ ಜಾಗೃತ ಸಂದೇಶ ರವಾನೆ ಆಗಲಿದೆ. ಮಾಲೀಕರ ಗಮನಕ್ಕೆ ಬಾರದೆ ಅಕ್ರಮವಾಗಿ ಜಮೀನು ಪರಭಾರೆ ಮಾಡುವ ಪ್ರಯತ್ನಗಳಿಗೆ ಇದರಿಂದ ಕಡಿವಾಣ ಬೀಳಲಿದೆ. ಈ ಎಸ್ಎಂಎಸ್ ಸಂದೇಶ ರವಾನೆ ವ್ಯವಸ್ಥೆ ಶುಕ್ರವಾರದಿಂದಲೇ ರಾಜ್ಯದಾದ್ಯಂತ ಜಾರಿಗೆ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಜಮೀನಿಗೆ ಸಂಬಂಧಿಸಿದ ಎಲ್ಲ ದಾಖಲೆ ಹಾಗೂ ವ್ಯವಹಾರವನ್ನು ಪಾರದರ್ಶಕವಾಗಿ ನಿರ್ವಹಿಸಲು ಅನುವಾಗಿಸುವ `ಭೂಮಿ~ ಮತ್ತು `ಕಾವೇರಿ~ ತಂತ್ರಾಂಶ ಸಂಯೋಜನೆಗೆ ಕಂದಾಯ ಸಚಿವ ಜಿ.ಕರುಣಾಕರ ರೆಡ್ಡಿ ಶುಕ್ರವಾರ ಇಲ್ಲಿ ವಿಧ್ಯುಕ್ತ ಚಾಲನೆ ನೀಡಿದರು.<br /> <br /> ಈ ಸಂಯೋಜನೆಯಿಂದ ಭೂ ವ್ಯವಹಾರದಲ್ಲಿ ಆಗುತ್ತಿದ್ದ ಅಕ್ರಮಗಳಿಗೆ ತಡೆ ಬೀಳಲಿದೆ. ಮಾಲೀಕತ್ವ ಒಳಗೊಂಡಂತೆ ಜಮೀನಿಗೆ ಸಂಬಂಧಿಸಿದ ಎಲ್ಲ ವಿವರಗಳು `ಭೂಮಿ~ ದತ್ತಾಂಶದಲ್ಲಿ ಲಭ್ಯವಿದ್ದರೆ ಮಾತ್ರ ನೋಂದಣಿಗೆ ಅವಕಾಶ. ಒಂದೇ ಆಸ್ತಿಯನ್ನು ಹಲವರಿಗೆ ಮಾರುವ ದಂಧೆಗೆ ಪೂರ್ಣವಿರಾಮ ಬೀಳಲಿದೆ. ಪರಿಶಿಷ್ಟರಿಗೆ ಮಂಜೂರಾಗಿ ಪರಭಾರೆಗೆ ಅವಕಾಶವಿಲ್ಲದ ಮತ್ತು ಪರಾಭಾರೆ ನಿಷಿದ್ಧ ಜಮೀನನ್ನು ಮಾರಾಟ ಮಾಡಲಾಗದು.<br /> <br /> ಆಸ್ತಿ ಖರೀದಿಯ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಸ್ವಯಂಚಾಲಿತವಾಗಿ `ಮ್ಯುಟೇಷನ್~ ಪ್ರಕ್ರಿಯೆ ಆರಂಭವಾಗುವುದು. ಈ ಪ್ರಕ್ರಿಯೆಯ ಎಲ್ಲ ಹಂತಗಳ ಮಾಹಿತಿಯು ಎಸ್ಎಂಎಸ್ ಮೂಲಕ ಖರೀದಿದಾರರಿಗೆ ಲಭ್ಯವಾಗಲಿದೆ. ನೋಂದಣಿ ವೇಳೆ ಅಥವಾ ಮ್ಯುಟೇಷನ್ಗಾಗಿ ಅರ್ಜಿ ಸಲ್ಲಿಸುವಾಗ ಆಸಕ್ತರು ತಮ್ಮ ಮೊಬೈಲ್ ನಂಬರ್ ಒದಗಿಸಿದಲ್ಲಿ ಈ ಸೇವೆ ಲಭ್ಯ. ಇದರಿಂದಾಗಿ ಮೇಜಿನಿಂದ ಮೇಜಿಗೆ ಅಲೆಯುವ ತೊಂದರೆ ನಿವಾರಣೆಯಾಗಲಿದೆ. <br /> <br /> ಸಾರ್ವಜನಿಕರು ಕೋರಿಕೆ ಅರ್ಜಿ ಸಲ್ಲಿಸಿದಲ್ಲಿ ಅವರ ಜಮೀನಿಗೆ ಸಂಬಂಧಿಸಿದ ಯಾವುದೇ ವಹಿವಾಟು ನಡೆದಲ್ಲಿ ಎಸ್ಎಂಎಸ್ ಮೂಲಕ ಕೂಡಲೇ ಜಾಗೃತ ಸಂದೇಶ ರವಾನೆ ಆಗಲಿದೆ. ಮಾಲೀಕರ ಗಮನಕ್ಕೆ ಬಾರದೆ ಅಕ್ರಮವಾಗಿ ಜಮೀನು ಪರಭಾರೆ ಮಾಡುವ ಪ್ರಯತ್ನಗಳಿಗೆ ಇದರಿಂದ ಕಡಿವಾಣ ಬೀಳಲಿದೆ. ಈ ಎಸ್ಎಂಎಸ್ ಸಂದೇಶ ರವಾನೆ ವ್ಯವಸ್ಥೆ ಶುಕ್ರವಾರದಿಂದಲೇ ರಾಜ್ಯದಾದ್ಯಂತ ಜಾರಿಗೆ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>