<p><strong>ಬೆಂಗಳೂ</strong>ರು: ತಂಪುಪಾನೀಯವೆಂದು ಕ್ರಿಮಿನಾಶಕ ಕುಡಿದ ಯುವತಿ ಅಸ್ವಸ್ಥಳಾಗಿ ಸಾವನ್ನಪ್ಪಿರುವ ದಾರುಣ ಘಟನೆ ಬಾಣಸವಾಡಿ ಬಳಿಯ ರಾಮಸ್ವಾಮಿಪಾಳ್ಯದಲ್ಲಿ ಸೋಮವಾರ ನಡೆದಿದೆ.<br /> <br /> ರಾಮಸ್ವಾಮಿಪಾಳ್ಯದ ದೇವಸ್ಥಾನ ರಸ್ತೆ ನಿವಾಸಿ ರಾಜು ಎಂಬುವರ ಪುತ್ರಿ ಸುಕನ್ಯಾ (20) ಮೃತಪಟ್ಟವರು. ಬಿ.ಕಾಂ ಪದವೀಧರೆಯಾಗಿದ್ದ ಅವರು ನೃತ್ಯ ತರಬೇತಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು.<br /> <br /> ಸುಕನ್ಯಾ ಕುಟುಂಬ ಸದಸ್ಯರು ತಂಪುಪಾನೀಯದ ಖಾಲಿ ಬಾಟಲಿಯಲ್ಲಿ ಕ್ರಿಮಿನಾಶಕ ತುಂಬಿಸಿ ಮೇಜಿನ ಮೇಲೆ ಇಟ್ಟಿದ್ದರು. ಕೆಲಸ ಮುಗಿಸಿಕೊಂಡು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಮನೆಗೆ ಬಂದ ಸುಕನ್ಯಾ ಅವರು, ಬಾಟಲಿಯಲ್ಲಿದ್ದ ಕ್ರಿಮಿನಾಶಕವನ್ನು ತಂಪುಪಾನೀಯವೆಂದು ಭಾವಿಸಿ ಕುಡಿದು ಅಸ್ವಸ್ಥರಾದರು. <br /> <br /> ಕುಟುಂಬ ಸದಸ್ಯರು ಅವರನ್ನು ಕೂಡಲೇ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ಸಂಜೆ ಐದು ಗಂಟೆ ವೇಳೆಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು ಎಂದು ಪೊಲೀಸರು ಹೇಳಿದ್ದಾರೆ. ಬಾಣಸವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂ</strong>ರು: ತಂಪುಪಾನೀಯವೆಂದು ಕ್ರಿಮಿನಾಶಕ ಕುಡಿದ ಯುವತಿ ಅಸ್ವಸ್ಥಳಾಗಿ ಸಾವನ್ನಪ್ಪಿರುವ ದಾರುಣ ಘಟನೆ ಬಾಣಸವಾಡಿ ಬಳಿಯ ರಾಮಸ್ವಾಮಿಪಾಳ್ಯದಲ್ಲಿ ಸೋಮವಾರ ನಡೆದಿದೆ.<br /> <br /> ರಾಮಸ್ವಾಮಿಪಾಳ್ಯದ ದೇವಸ್ಥಾನ ರಸ್ತೆ ನಿವಾಸಿ ರಾಜು ಎಂಬುವರ ಪುತ್ರಿ ಸುಕನ್ಯಾ (20) ಮೃತಪಟ್ಟವರು. ಬಿ.ಕಾಂ ಪದವೀಧರೆಯಾಗಿದ್ದ ಅವರು ನೃತ್ಯ ತರಬೇತಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು.<br /> <br /> ಸುಕನ್ಯಾ ಕುಟುಂಬ ಸದಸ್ಯರು ತಂಪುಪಾನೀಯದ ಖಾಲಿ ಬಾಟಲಿಯಲ್ಲಿ ಕ್ರಿಮಿನಾಶಕ ತುಂಬಿಸಿ ಮೇಜಿನ ಮೇಲೆ ಇಟ್ಟಿದ್ದರು. ಕೆಲಸ ಮುಗಿಸಿಕೊಂಡು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಮನೆಗೆ ಬಂದ ಸುಕನ್ಯಾ ಅವರು, ಬಾಟಲಿಯಲ್ಲಿದ್ದ ಕ್ರಿಮಿನಾಶಕವನ್ನು ತಂಪುಪಾನೀಯವೆಂದು ಭಾವಿಸಿ ಕುಡಿದು ಅಸ್ವಸ್ಥರಾದರು. <br /> <br /> ಕುಟುಂಬ ಸದಸ್ಯರು ಅವರನ್ನು ಕೂಡಲೇ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ಸಂಜೆ ಐದು ಗಂಟೆ ವೇಳೆಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು ಎಂದು ಪೊಲೀಸರು ಹೇಳಿದ್ದಾರೆ. ಬಾಣಸವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>