<p>ಕೋಲಾರ: ತಂಬಾಕು ಮಾರಾಟ ನಿಷೇಧ ಕಾಯ್ದೆ ಜಾರಿಗೊಳಿಸುತ್ತಿರುವ ಸರ್ಕಾರವೇ ತಂಬಾಕು ಬೆಳೆಯಲು ಉತ್ತೇಜನ ನೀಡುತ್ತದೆ. ಇಂಥ ದ್ವಂದ್ವ ನೀತಿ ಕಾರಣಕ್ಕೆ ಕಾಯ್ದೆಗಳು ಸರಿಯಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಆರ್.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.<br /> <br /> ನಗರದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಂಬಾಕು ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸಲು ವಿವಿಧ ಇಲಾಖೆ ಅಧಿಕಾರಿಗಳಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ಯಾವುದೇ ವಸ್ತುವಿನ ಬಳಕೆಯನ್ನು ನಿಷೇಧಿಸುವ ಮುನ್ನ ಅದರ ಉತ್ಪಾದನೆಯನ್ನು ನಿಲ್ಲಿಸಬೇಕು. ಆದರೆ ಸರ್ಕಾರ ಆ ಕೆಲಸವನ್ನು ಮಾಡದೇ ನಿಷೇಧ ಕಾಯ್ದೆಗಳನ್ನು ಜಾರಿಗೊಳಿಸಿ ಎನ್ನುವುದು ವಿಪರ್ಯಾಸ ಎಂದರು.<br /> <br /> ಮದ್ಯಪಾನವನ್ನು ಯಾರೂ ಮಾಡಬಾರದು ಎಂದೂ ಸರ್ಕಾರ ಹೇಳುತ್ತದೆ. ಆದರೆ ಅಭಿವೃದ್ಧಿ ಕಾರ್ಯಗಳಿಗೆ ಬಳಸಲು ಮದ್ಯ ಮಾರಾಟದಿಂದ ದೊರಕುವ ಅಪಾರ ತೆರಿಗೆಗಳನ್ನೇ ನೆಚ್ಚಿಕೊಂಡಿದೆ ಎಂದು ವ್ಯಂಗ್ಯವಾಡಿದರು.<br /> <br /> ಶಾಲೆಯ ಅಕ್ಕ ಪಕ್ಕದಲ್ಲೇ ತಂಬಾಕು ಮಾರಾಟ ನಡೆಯುತ್ತಿದೆ. ಮಕ್ಕಳ ಎದುರಿನಲ್ಲೇ ದೊಡ್ಡವರು ಬೀಡಿ, ಸಿಗರೇಟು ಸೇದುತ್ತಾರೆ. ಗುಟಕಾ, ಪಾನ್ ಪರಾಗ್ ಮತ್ತಿತರೆ ತಂಬಾಕು ಉತ್ಪನ್ನಗಳನ್ನು ಜಗಿದು ಉಗಿಯುತ್ತಾರೆ. ಇಂಥ ಸನ್ನಿವೇಶ ಬದಲಿಸಲು ಹೊಸ ಬಗೆಯಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದರು.<br /> <br /> ಕಾರ್ಯಾಗಾರಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಡಿ.ಕೆ.ರವಿ, ತಂಬಾಕು ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಪೊಲೀಸರೂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಜವಾಬ್ದಾರಿಯನ್ನು ಮತ್ತೊಂದು ಇಲಾಖೆ ಮೇಲೆ ಹೊರೆಸಿ ನೆಪ ಹೇಳುವ ಪ್ರವೃತ್ತಿಅಧಿಕಾರಿಗಳು ಬಿಡಬೇಕು ಎಂದರು.<br /> <br /> ಜಿಲ್ಲಾ ಪಂಚಾಯತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಸಿಮೋಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಐ.ಜಮೀಲ್, ಪ್ರಭಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಮೀರ್ ಪಾಷಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರಮೇಶಬಾಬು ಮಾತನಾಡಿದರು.<br /> <br /> ನಂತರ, ದೇವರಾಜ ಅರಸ್ ವೈದ್ಯಕೀಯ ಕಾಲೇಜಿನ ಕಾಲೇಜಿನ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ಮುನಿನಾರಾಯಣ, ಡಾ.ಅನಿಲ್ ಮತ್ತು ಡಾ.ಜಗನ್ನಾಥ್ ಉಪನ್ಯಾಸ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ತಂಬಾಕು ಮಾರಾಟ ನಿಷೇಧ ಕಾಯ್ದೆ ಜಾರಿಗೊಳಿಸುತ್ತಿರುವ ಸರ್ಕಾರವೇ ತಂಬಾಕು ಬೆಳೆಯಲು ಉತ್ತೇಜನ ನೀಡುತ್ತದೆ. ಇಂಥ ದ್ವಂದ್ವ ನೀತಿ ಕಾರಣಕ್ಕೆ ಕಾಯ್ದೆಗಳು ಸರಿಯಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಆರ್.ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.<br /> <br /> ನಗರದ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಂಬಾಕು ನಿಷೇಧ ಕಾಯ್ದೆ ಕುರಿತು ಅರಿವು ಮೂಡಿಸಲು ವಿವಿಧ ಇಲಾಖೆ ಅಧಿಕಾರಿಗಳಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿ, ಯಾವುದೇ ವಸ್ತುವಿನ ಬಳಕೆಯನ್ನು ನಿಷೇಧಿಸುವ ಮುನ್ನ ಅದರ ಉತ್ಪಾದನೆಯನ್ನು ನಿಲ್ಲಿಸಬೇಕು. ಆದರೆ ಸರ್ಕಾರ ಆ ಕೆಲಸವನ್ನು ಮಾಡದೇ ನಿಷೇಧ ಕಾಯ್ದೆಗಳನ್ನು ಜಾರಿಗೊಳಿಸಿ ಎನ್ನುವುದು ವಿಪರ್ಯಾಸ ಎಂದರು.<br /> <br /> ಮದ್ಯಪಾನವನ್ನು ಯಾರೂ ಮಾಡಬಾರದು ಎಂದೂ ಸರ್ಕಾರ ಹೇಳುತ್ತದೆ. ಆದರೆ ಅಭಿವೃದ್ಧಿ ಕಾರ್ಯಗಳಿಗೆ ಬಳಸಲು ಮದ್ಯ ಮಾರಾಟದಿಂದ ದೊರಕುವ ಅಪಾರ ತೆರಿಗೆಗಳನ್ನೇ ನೆಚ್ಚಿಕೊಂಡಿದೆ ಎಂದು ವ್ಯಂಗ್ಯವಾಡಿದರು.<br /> <br /> ಶಾಲೆಯ ಅಕ್ಕ ಪಕ್ಕದಲ್ಲೇ ತಂಬಾಕು ಮಾರಾಟ ನಡೆಯುತ್ತಿದೆ. ಮಕ್ಕಳ ಎದುರಿನಲ್ಲೇ ದೊಡ್ಡವರು ಬೀಡಿ, ಸಿಗರೇಟು ಸೇದುತ್ತಾರೆ. ಗುಟಕಾ, ಪಾನ್ ಪರಾಗ್ ಮತ್ತಿತರೆ ತಂಬಾಕು ಉತ್ಪನ್ನಗಳನ್ನು ಜಗಿದು ಉಗಿಯುತ್ತಾರೆ. ಇಂಥ ಸನ್ನಿವೇಶ ಬದಲಿಸಲು ಹೊಸ ಬಗೆಯಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದರು.<br /> <br /> ಕಾರ್ಯಾಗಾರಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಡಿ.ಕೆ.ರವಿ, ತಂಬಾಕು ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಪೊಲೀಸರೂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಜವಾಬ್ದಾರಿಯನ್ನು ಮತ್ತೊಂದು ಇಲಾಖೆ ಮೇಲೆ ಹೊರೆಸಿ ನೆಪ ಹೇಳುವ ಪ್ರವೃತ್ತಿಅಧಿಕಾರಿಗಳು ಬಿಡಬೇಕು ಎಂದರು.<br /> <br /> ಜಿಲ್ಲಾ ಪಂಚಾಯತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಸಿಮೋಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಐ.ಜಮೀಲ್, ಪ್ರಭಾರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಮೀರ್ ಪಾಷಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರಮೇಶಬಾಬು ಮಾತನಾಡಿದರು.<br /> <br /> ನಂತರ, ದೇವರಾಜ ಅರಸ್ ವೈದ್ಯಕೀಯ ಕಾಲೇಜಿನ ಕಾಲೇಜಿನ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ಮುನಿನಾರಾಯಣ, ಡಾ.ಅನಿಲ್ ಮತ್ತು ಡಾ.ಜಗನ್ನಾಥ್ ಉಪನ್ಯಾಸ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>