<p><strong>ಬೆಂಗಳೂರು: </strong>ತಂಬಾಕು ಉತ್ಪನ್ನಗಳ ಸೇವನೆಯಿಂದ ರಾಜ್ಯದಲ್ಲಿ ಪ್ರತಿನಿತ್ಯ 200 ಮಂದಿ ಸಾವಿಗೀಡಾಗುತ್ತಿದ್ದು, ಈ ಸಂಖ್ಯೆಯನ್ನು ಶೂನ್ಯಕ್ಕೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಗ್ಯ ಸಚಿವ ಕೆ.ಆರ್. ರಮೇಶ್ ಕುಮಾರ್ ಹೇಳಿದರು.<br /> <br /> ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ ವಿಕಾಸಸೌಧದಲ್ಲಿ ಗುರುವಾರ ಏರ್ಪಡಿಸಿದ್ದ ‘ತಂಬಾಕು ಬಳಕೆ ಮತ್ತು ಕರ್ನಾಟಕದಲ್ಲಿ ಮಕ್ಕಳ ಮೇಲೆ ತಂಬಾಕು ಬಳಕೆಯ ಪರಿಣಾಮಗಳು’ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.<br /> <br /> ‘ಕ್ಯಾನ್ಸರ್ ರೋಗಿಗಳ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಆರೋಗ್ಯ ಸಚಿವನಾಗಿ ಇದಕ್ಕಿಂತ ದೊಡ್ಡ ಗೌರವ ಬೇಕಾ?’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಶಾಲಾ– ಕಾಲೇಜುಗಳ ಸುತ್ತಮುತ್ತಲ ಅಂಗಡಿಗಳಲ್ಲಿ ಸಿಗರೇಟು, ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು ಉತ್ಪನ್ನಗಳು ಮಾರಾಟವಾಗುತ್ತಿದ್ದರೂ, ತಡೆಗಟ್ಟಲು ಸಾಧ್ಯವಾಗುತ್ತಿಲ್ಲ.</p>.<p>ಜಾತಿ, ಧರ್ಮದ ಭೇದವಿಲ್ಲದೆ ವಿದ್ಯಾರ್ಥಿಗಳು ಮಾದಕ ದ್ರವ್ಯ ಸೇವನೆ ಚಟಕ್ಕೆ ಬಲಿಯಾಗುತ್ತಿದ್ದಾರೆ ಎಂದು ವಿಷಾದಿಸಿದರು. ಮಾದಕ ದ್ರವ್ಯ ಸೇವನೆ ಚಟದಿಂದ ಮಕ್ಕಳು ಕ್ಯಾನ್ಸರ್ಗೆ ತುತ್ತಾದರೆ ಪೋಷಕರು ನೋವು ಅನುಭವಿಸುತ್ತಾರೆ. ಹಾಗಾಗಿ ಮಕ್ಕಳು ದುಶ್ಚಟಗಳಿಂದ ದೂರ ಇರಬೇಕು ಎಂದರು.</p>.<p>ಕ್ಯಾನ್ಸರ್ ರೋಗದಿಂದ ಉಂಟಾಗುತ್ತಿರುವ ಸಾವು ತಡೆಗಟ್ಟಲು ತಜ್ಞರು, ಸಾರ್ವಜನಿಕರ ಸಹಾಯ ಪಡೆಯಲಾಗುವುದು. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈ ನಿಟ್ಟಿನಲ್ಲಿ ಇನ್ನಷ್ಟು ಒಳ್ಳೆಯ ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ತಂಬಾಕು ಉತ್ಪನ್ನಗಳ ಸೇವನೆಯಿಂದ ರಾಜ್ಯದಲ್ಲಿ ಪ್ರತಿನಿತ್ಯ 200 ಮಂದಿ ಸಾವಿಗೀಡಾಗುತ್ತಿದ್ದು, ಈ ಸಂಖ್ಯೆಯನ್ನು ಶೂನ್ಯಕ್ಕೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಗ್ಯ ಸಚಿವ ಕೆ.ಆರ್. ರಮೇಶ್ ಕುಮಾರ್ ಹೇಳಿದರು.<br /> <br /> ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ವತಿಯಿಂದ ವಿಕಾಸಸೌಧದಲ್ಲಿ ಗುರುವಾರ ಏರ್ಪಡಿಸಿದ್ದ ‘ತಂಬಾಕು ಬಳಕೆ ಮತ್ತು ಕರ್ನಾಟಕದಲ್ಲಿ ಮಕ್ಕಳ ಮೇಲೆ ತಂಬಾಕು ಬಳಕೆಯ ಪರಿಣಾಮಗಳು’ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.<br /> <br /> ‘ಕ್ಯಾನ್ಸರ್ ರೋಗಿಗಳ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಆರೋಗ್ಯ ಸಚಿವನಾಗಿ ಇದಕ್ಕಿಂತ ದೊಡ್ಡ ಗೌರವ ಬೇಕಾ?’ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಶಾಲಾ– ಕಾಲೇಜುಗಳ ಸುತ್ತಮುತ್ತಲ ಅಂಗಡಿಗಳಲ್ಲಿ ಸಿಗರೇಟು, ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ತಂಬಾಕು ಉತ್ಪನ್ನಗಳು ಮಾರಾಟವಾಗುತ್ತಿದ್ದರೂ, ತಡೆಗಟ್ಟಲು ಸಾಧ್ಯವಾಗುತ್ತಿಲ್ಲ.</p>.<p>ಜಾತಿ, ಧರ್ಮದ ಭೇದವಿಲ್ಲದೆ ವಿದ್ಯಾರ್ಥಿಗಳು ಮಾದಕ ದ್ರವ್ಯ ಸೇವನೆ ಚಟಕ್ಕೆ ಬಲಿಯಾಗುತ್ತಿದ್ದಾರೆ ಎಂದು ವಿಷಾದಿಸಿದರು. ಮಾದಕ ದ್ರವ್ಯ ಸೇವನೆ ಚಟದಿಂದ ಮಕ್ಕಳು ಕ್ಯಾನ್ಸರ್ಗೆ ತುತ್ತಾದರೆ ಪೋಷಕರು ನೋವು ಅನುಭವಿಸುತ್ತಾರೆ. ಹಾಗಾಗಿ ಮಕ್ಕಳು ದುಶ್ಚಟಗಳಿಂದ ದೂರ ಇರಬೇಕು ಎಂದರು.</p>.<p>ಕ್ಯಾನ್ಸರ್ ರೋಗದಿಂದ ಉಂಟಾಗುತ್ತಿರುವ ಸಾವು ತಡೆಗಟ್ಟಲು ತಜ್ಞರು, ಸಾರ್ವಜನಿಕರ ಸಹಾಯ ಪಡೆಯಲಾಗುವುದು. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಈ ನಿಟ್ಟಿನಲ್ಲಿ ಇನ್ನಷ್ಟು ಒಳ್ಳೆಯ ಕೆಲಸ ಮಾಡಬೇಕು ಎಂದು ಅವರು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>