<p>ಚಡಚಣ: ತಂಬಾಕು ಸೇವನೆಯೆಂದರೆ ಮೃತ್ಯುವಿಗೆ ಆಹ್ವಾನ ನೀಡಿದಂತೆ. ಕ್ಯಾನ್ಸರ್ಗೆ ಕಾರಣವಾಗುವ ತಂಬಾಕು ಸೇವನೆಯಿಂದ ಸೇವನೆ ಮಾಡುವ ವ್ಯಕ್ತಿಗಳಿಗಲ್ಲದೆ, ಸುತ್ತಲಿನ ಅಮಾಯಕ ಜನರಿಗೂ ಮಾರಕವಾಗಿ ಪರಿಣಮಿಸು ವುದು ಎಂದು ಎನ್ಸಿಸಿ ಅಧಿಕಾರಿ ಮೇಜರ್ ಡಾ. ಎಸ್.ಎಸ್. ಚೋರಗಿ ಹೇಳಿದರು.<br /> <br /> ಸ್ಥಳೀಯ ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಶ್ರೀ ಸಂಗಮೇಶ್ವರ ಮಾಧ್ಯಮಿಕ ಶಾಲೆಗಳ ಎನ್ಸಿಸಿ ಘಟಕಗಳ ಆಶ್ರಯ ದಲ್ಲಿ ಮಂಗಳವಾರ ಆಯೋಜಿಸಲಾದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ಭಾರತ ಒಂದರಲ್ಲಿಯೇ ಪ್ರತಿ ವರ್ಷ 9 ಲಕ್ಷ ಜನ ಸಾವನ್ನಪ್ಪುತ್ತಾರೆ. ಜಗತ್ತಿನಲ್ಲಿ ಪ್ರತಿ ವರ್ಷ ಆರು ದಶಲಕ್ಷ ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲಿ ಮಹಿಳೆಯರ ಪಾಲು ಶೇ 5ರಷ್ಟು ಎಂದರು.<br /> <br /> ಮೂರು ತಿಂಗಳಿನ ತಂಬಾಕು ಸೇವನೆ 6 ವರ್ಷಗಳ ಆಯುಷ್ಯವನ್ನು ಕುಂದಿಸು ತ್ತದೆ ಎಂದ ಅವರು ವಿದ್ಯಾರ್ಥಿಗಳು ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ಸಾರ್ವಜನಿಕರಿಗೆ ತಿಳಿ ಹೇಳುವಂತೆ ಮನವಿ ಮಾಡಿದರು.<br /> <br /> ಜೆಡಿ.ಎನ್ಸಿಸಿ ಅಧಿಕಾರಿ ಎಂ.ಐ. ಅಮರಖೇಡ, ಎನ್ಸಿಸಿ ಕೆಡೆಟ್ಗಳಿಗೆ ತಂಬಾಕು ಸೇವಿಸದಿರಲು ಪ್ರಮಾಣ ವಚನ ಬೋಧಿಸಿದರು.<br /> <br /> ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಎನ್ಸಿಸಿ ಕೆಡೆಟ್ಗಳು ಜಾಗೃತಿ ಜಾಥಾ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಡಚಣ: ತಂಬಾಕು ಸೇವನೆಯೆಂದರೆ ಮೃತ್ಯುವಿಗೆ ಆಹ್ವಾನ ನೀಡಿದಂತೆ. ಕ್ಯಾನ್ಸರ್ಗೆ ಕಾರಣವಾಗುವ ತಂಬಾಕು ಸೇವನೆಯಿಂದ ಸೇವನೆ ಮಾಡುವ ವ್ಯಕ್ತಿಗಳಿಗಲ್ಲದೆ, ಸುತ್ತಲಿನ ಅಮಾಯಕ ಜನರಿಗೂ ಮಾರಕವಾಗಿ ಪರಿಣಮಿಸು ವುದು ಎಂದು ಎನ್ಸಿಸಿ ಅಧಿಕಾರಿ ಮೇಜರ್ ಡಾ. ಎಸ್.ಎಸ್. ಚೋರಗಿ ಹೇಳಿದರು.<br /> <br /> ಸ್ಥಳೀಯ ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಶ್ರೀ ಸಂಗಮೇಶ್ವರ ಮಾಧ್ಯಮಿಕ ಶಾಲೆಗಳ ಎನ್ಸಿಸಿ ಘಟಕಗಳ ಆಶ್ರಯ ದಲ್ಲಿ ಮಂಗಳವಾರ ಆಯೋಜಿಸಲಾದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ಭಾರತ ಒಂದರಲ್ಲಿಯೇ ಪ್ರತಿ ವರ್ಷ 9 ಲಕ್ಷ ಜನ ಸಾವನ್ನಪ್ಪುತ್ತಾರೆ. ಜಗತ್ತಿನಲ್ಲಿ ಪ್ರತಿ ವರ್ಷ ಆರು ದಶಲಕ್ಷ ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಅದರಲ್ಲಿ ಮಹಿಳೆಯರ ಪಾಲು ಶೇ 5ರಷ್ಟು ಎಂದರು.<br /> <br /> ಮೂರು ತಿಂಗಳಿನ ತಂಬಾಕು ಸೇವನೆ 6 ವರ್ಷಗಳ ಆಯುಷ್ಯವನ್ನು ಕುಂದಿಸು ತ್ತದೆ ಎಂದ ಅವರು ವಿದ್ಯಾರ್ಥಿಗಳು ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ಸಾರ್ವಜನಿಕರಿಗೆ ತಿಳಿ ಹೇಳುವಂತೆ ಮನವಿ ಮಾಡಿದರು.<br /> <br /> ಜೆಡಿ.ಎನ್ಸಿಸಿ ಅಧಿಕಾರಿ ಎಂ.ಐ. ಅಮರಖೇಡ, ಎನ್ಸಿಸಿ ಕೆಡೆಟ್ಗಳಿಗೆ ತಂಬಾಕು ಸೇವಿಸದಿರಲು ಪ್ರಮಾಣ ವಚನ ಬೋಧಿಸಿದರು.<br /> <br /> ವಿಶ್ವ ತಂಬಾಕು ರಹಿತ ದಿನಾಚರಣೆ ನಿಮಿತ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಎನ್ಸಿಸಿ ಕೆಡೆಟ್ಗಳು ಜಾಗೃತಿ ಜಾಥಾ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>