<p><strong>ವಿಶ್ವಸಂಸ್ಥೆ (ಪಿಟಿಐ):`</strong>ನಾಗರಿಕರ ಹತ್ಯೆ ನಿಲ್ಲಿಸಬೇಕು. ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಅಂತರ ರಾಷ್ಟ್ರೀಯ ತನಿಖೆಗೆ ಒಪ್ಪಿಕೊಳ್ಳಬೇಕು~ ಎಂದು ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಬಾನ್ ಕಿ ಮೂನ್ ಅವರು ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸದ್ ಅವರಿಗೆ ಸೂಚಿಸಿದ್ದಾರೆ.<br /> <br /> `ಮೂರು ಸಾವಿರಕ್ಕಿಂತ ಹೆಚ್ಚು ನಾಗರಿಕರ ಹತ್ಯೆಯನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಾಗುವುದಿಲ್ಲ. ಕೂಡಲೇ ಇದು ಕೊನೆಗಾಣಬೇಕು. ಅಂತರರಾಷ್ಟ್ರೀಯ ತನಿಖೆಗೆ ಒಪ್ಪಿಕೊಂಡು ಮಾತುಕತೆಗೆ ಮುಂದಾಗಬೇಕು~ ಎಂದು ಅವರು ಸಲಹೆ ಮಾಡಿದ್ದಾರೆ.</p>.<p>ದೇಶದಲ್ಲಿ ತಲೆದೋರಿರುವ ಪರಿಸ್ಥಿತಿಯನ್ನು ಶಮನಗೊಳಿಸಲು ಕೂಡಲೇ ರಾಜಕೀಯ ಸುಧಾರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಮಂಡಳಿಯ ಆಯೋಗದ ತನಿಖೆಗೆ ಸಮ್ಮತಿ ಸೂಚಿಸಬೇಕು ಎಂದು ಅವರು ಹೇಳಿದ್ದಾರೆ.<br /> <br /> `ಸಿರಿಯಾದಲ್ಲಿ ಸೇನೆಯನ್ನು ಬಳಸಿ ನಾಗರಿಕರ ಹತ್ಯೆ ಮಾಡುತ್ತಿರುವುದನ್ನು ತಡೆಗಟ್ಟಲು ಅಂತರರಾಷ್ಟ್ರೀಯ ಸಮುದಾಯ ಕ್ರಮಕ್ಕೆ ಮುಂದಾಗಬೇಕು~ ಎಂದು ಕಳೆದ ವಾರವಷ್ಟೇ ಮಾನವ ಹಕ್ಕುಗಳಿಗೆ ಸಂಬಂಧಿಸಿದ ವಿಶ್ವಸಂಸ್ಥೆಯಲ್ಲಿರುವ ರಾಜತಾಂತ್ರಿಕ ನವಿ ಪಿಳ್ಳೈ ಆಗ್ರಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶ್ವಸಂಸ್ಥೆ (ಪಿಟಿಐ):`</strong>ನಾಗರಿಕರ ಹತ್ಯೆ ನಿಲ್ಲಿಸಬೇಕು. ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಅಂತರ ರಾಷ್ಟ್ರೀಯ ತನಿಖೆಗೆ ಒಪ್ಪಿಕೊಳ್ಳಬೇಕು~ ಎಂದು ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಬಾನ್ ಕಿ ಮೂನ್ ಅವರು ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸದ್ ಅವರಿಗೆ ಸೂಚಿಸಿದ್ದಾರೆ.<br /> <br /> `ಮೂರು ಸಾವಿರಕ್ಕಿಂತ ಹೆಚ್ಚು ನಾಗರಿಕರ ಹತ್ಯೆಯನ್ನು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಾಗುವುದಿಲ್ಲ. ಕೂಡಲೇ ಇದು ಕೊನೆಗಾಣಬೇಕು. ಅಂತರರಾಷ್ಟ್ರೀಯ ತನಿಖೆಗೆ ಒಪ್ಪಿಕೊಂಡು ಮಾತುಕತೆಗೆ ಮುಂದಾಗಬೇಕು~ ಎಂದು ಅವರು ಸಲಹೆ ಮಾಡಿದ್ದಾರೆ.</p>.<p>ದೇಶದಲ್ಲಿ ತಲೆದೋರಿರುವ ಪರಿಸ್ಥಿತಿಯನ್ನು ಶಮನಗೊಳಿಸಲು ಕೂಡಲೇ ರಾಜಕೀಯ ಸುಧಾರಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಮಂಡಳಿಯ ಆಯೋಗದ ತನಿಖೆಗೆ ಸಮ್ಮತಿ ಸೂಚಿಸಬೇಕು ಎಂದು ಅವರು ಹೇಳಿದ್ದಾರೆ.<br /> <br /> `ಸಿರಿಯಾದಲ್ಲಿ ಸೇನೆಯನ್ನು ಬಳಸಿ ನಾಗರಿಕರ ಹತ್ಯೆ ಮಾಡುತ್ತಿರುವುದನ್ನು ತಡೆಗಟ್ಟಲು ಅಂತರರಾಷ್ಟ್ರೀಯ ಸಮುದಾಯ ಕ್ರಮಕ್ಕೆ ಮುಂದಾಗಬೇಕು~ ಎಂದು ಕಳೆದ ವಾರವಷ್ಟೇ ಮಾನವ ಹಕ್ಕುಗಳಿಗೆ ಸಂಬಂಧಿಸಿದ ವಿಶ್ವಸಂಸ್ಥೆಯಲ್ಲಿರುವ ರಾಜತಾಂತ್ರಿಕ ನವಿ ಪಿಳ್ಳೈ ಆಗ್ರಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>