<p>ಹಾಸನ: ಅರಸೀಕೆರೆ ತಾಲ್ಲೂಕು ಜಾವಗಲ್ ಹೋಬಳಿ ಕುಂದೂರು ಗ್ರಾಮದಲ್ಲಿ ಕೆರೆಯ ಹೂಳೆತ್ತುವುದರಲ್ಲಿ ಅವ್ಯವಹಾರ ನಡೆದಿದ್ದು, ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬುಧವಾರ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.<br /> <br /> `ಕೆರೆ ಹೂಳೆತ್ತುವ ಕಾಮಗಾರಿ ಪೂರ್ಣವಾಗಿಲ್ಲ. ಗ್ರಾಮದಲ್ಲಿ ನೀರಿನ ಸಮಸ್ಯೆ ಇದ್ದು, ಕಾಮಗಾರಿಯ ಬಗ್ಗೆ ಕೇಳಲು ಹೋದರೆ ಗುತ್ತಿಗೆದಾರ ಅವಾಚ್ಯಚಾಗಿ ನಿಂದಿಸುತ್ತಾರೆ. ಮಾಡಿರುವ ಕಾಮಗಾರಿಯೂ ಸರಿಯಾಗಿಲ್ಲ. ಹಿಂದೆ ತೆಗೆದಿದ್ದ ಗುಂಡಿಗಳನ್ನು ಮುಚ್ಚಿ ಅದನ್ನೇ ಕಾಮಗಾರಿ ಎಂದು ತೋರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.<br /> <br /> ಒಟ್ಟಾರೆ 22 ಲಕ್ಷ ರೂಪಾಯಿಯ ಕಾಮಗಾರಿಯಲ್ಲಿ ಐದು ಲಕ್ಷ ರೂಪಾಯಿಯ ಕಾಮಗಾರಿ ಮಾತ್ರ ನಡೆದಿದೆ. ಯಾವುದೇ ಕಾರಣಕ್ಕೂ ಕಾಮಗಾರಿ ಪೂರ್ಣವಾಗದೆ ಬಿಲ್ ನೀಡಬಾರದು ಎಂದು ಅವರು ಒತ್ತಾಯಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಅರಸೀಕೆರೆ ತಾಲ್ಲೂಕು ಜಾವಗಲ್ ಹೋಬಳಿ ಕುಂದೂರು ಗ್ರಾಮದಲ್ಲಿ ಕೆರೆಯ ಹೂಳೆತ್ತುವುದರಲ್ಲಿ ಅವ್ಯವಹಾರ ನಡೆದಿದ್ದು, ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬುಧವಾರ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.<br /> <br /> `ಕೆರೆ ಹೂಳೆತ್ತುವ ಕಾಮಗಾರಿ ಪೂರ್ಣವಾಗಿಲ್ಲ. ಗ್ರಾಮದಲ್ಲಿ ನೀರಿನ ಸಮಸ್ಯೆ ಇದ್ದು, ಕಾಮಗಾರಿಯ ಬಗ್ಗೆ ಕೇಳಲು ಹೋದರೆ ಗುತ್ತಿಗೆದಾರ ಅವಾಚ್ಯಚಾಗಿ ನಿಂದಿಸುತ್ತಾರೆ. ಮಾಡಿರುವ ಕಾಮಗಾರಿಯೂ ಸರಿಯಾಗಿಲ್ಲ. ಹಿಂದೆ ತೆಗೆದಿದ್ದ ಗುಂಡಿಗಳನ್ನು ಮುಚ್ಚಿ ಅದನ್ನೇ ಕಾಮಗಾರಿ ಎಂದು ತೋರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.<br /> <br /> ಒಟ್ಟಾರೆ 22 ಲಕ್ಷ ರೂಪಾಯಿಯ ಕಾಮಗಾರಿಯಲ್ಲಿ ಐದು ಲಕ್ಷ ರೂಪಾಯಿಯ ಕಾಮಗಾರಿ ಮಾತ್ರ ನಡೆದಿದೆ. ಯಾವುದೇ ಕಾರಣಕ್ಕೂ ಕಾಮಗಾರಿ ಪೂರ್ಣವಾಗದೆ ಬಿಲ್ ನೀಡಬಾರದು ಎಂದು ಅವರು ಒತ್ತಾಯಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>