<p><strong>ಸಿತೇರಿ, ತಮಿಳುನಾಡು (ಪಿಟಿಐ): </strong>ಅರಕ್ಕೋಣಂ ಜಂಕ್ಷನ್ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ರೈಲುಗಳ ಡಿಕ್ಕಿಗೆ ಸಂಬಂಧಿಸಿದಂತೆ ನಡೆಯುವ ತನಿಖೆಯಿಂದಷ್ಟೇ ಕಾರಣ ತಿಳಿದು ಬರಲಿದ್ದು, ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಸಾಧ್ಯವಾಗುತ್ತದೆ ಎಂದು ರೈಲ್ವೆ ಸಚಿವ ದಿನೇಶ್ ತ್ರಿವೇದಿ ಹೇಳಿದರು.<br /> <br /> ಯಾರನ್ನೇ ಆಗಲಿ ಘಟನೆಗೆ ಹೊಣೆ ಎಂದು ಈಗ ಹೇಳಲಾಗದು. ಬದಲಾಗಿ ಪೂರ್ಣ ತನಿಖೆಯ ನಂತರ ಈ ಬಗ್ಗೆ ನಿರ್ಣಯಕ್ಕೆ ಬರಹುದು ಎಂದರು.ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. <br /> <br /> ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯುತ್ ಚಾಲಿತ ರೈಲಿನ ಚಾಲಕ ಸಿಗ್ನಲ್ನಲ್ಲಿ ರೈಲು ನಿಲ್ಲಿಸಿದ್ದರೆ ಘಟನೆ ನಡೆಯುತ್ತಿರಲಿಲ್ಲ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ ಎಂದರು. ಮಂಗಳವಾರ ರಾತ್ರಿ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಚಾಲಕ 15 ಗಂಟೆಗಳ ವಿಶ್ರಾಂತಿ ಪಡೆದಿದ್ದ ಎಂದೂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> <strong>ರೈಲು ಸಂಚಾರದಲ್ಲಿ ವ್ಯತ್ಯಯ<br /> ಬೆಂಗಳೂರು/ಚೆನ್ನೈ (ಐಎಎನ್ಎಸ್):</strong> ಅರಕ್ಕೋಣಂ ಜಂಕ್ಷನ್ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ರೈಲುಗಳ ಡಿಕ್ಕಿಯಿಂದಾಗಿ, ತಮಿಳುನಾಡು ಹಾಗೂ ಕರ್ನಾಟಕದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.<br /> <br /> ಬೆಂಗಳೂರು- ಚೆನ್ನೈ ಹಗಲು ಎಕ್ಸ್ಪ್ರೆಸ್ ರೈಲು ಸಂಚಾರ ರದ್ದು ಪಡಿಸಲಾಗಿದೆ. ಚೆನ್ನೈಗೆ ತೆರಳಬೇಕಾಗಿದ್ದ ಲಾಲ್ಬಾಗ್ ಮತ್ತು ಬೃಂದಾವನ ಇಂಟರ್ಸಿಟಿ ಸೂಪರ್ಪಾಸ್ಟ್, ಚೆನ್ನೈ ಮೂಲಕ ವಾರಣಾಸಿಗೆ ತೆರಳಬೇಕಾಗಿದ್ದ ಸಂಘಮಿತ್ರ ಎಕ್ಸ್ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಬದಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿತೇರಿ, ತಮಿಳುನಾಡು (ಪಿಟಿಐ): </strong>ಅರಕ್ಕೋಣಂ ಜಂಕ್ಷನ್ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ರೈಲುಗಳ ಡಿಕ್ಕಿಗೆ ಸಂಬಂಧಿಸಿದಂತೆ ನಡೆಯುವ ತನಿಖೆಯಿಂದಷ್ಟೇ ಕಾರಣ ತಿಳಿದು ಬರಲಿದ್ದು, ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲು ಸಾಧ್ಯವಾಗುತ್ತದೆ ಎಂದು ರೈಲ್ವೆ ಸಚಿವ ದಿನೇಶ್ ತ್ರಿವೇದಿ ಹೇಳಿದರು.<br /> <br /> ಯಾರನ್ನೇ ಆಗಲಿ ಘಟನೆಗೆ ಹೊಣೆ ಎಂದು ಈಗ ಹೇಳಲಾಗದು. ಬದಲಾಗಿ ಪೂರ್ಣ ತನಿಖೆಯ ನಂತರ ಈ ಬಗ್ಗೆ ನಿರ್ಣಯಕ್ಕೆ ಬರಹುದು ಎಂದರು.ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. <br /> <br /> ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ವಿದ್ಯುತ್ ಚಾಲಿತ ರೈಲಿನ ಚಾಲಕ ಸಿಗ್ನಲ್ನಲ್ಲಿ ರೈಲು ನಿಲ್ಲಿಸಿದ್ದರೆ ಘಟನೆ ನಡೆಯುತ್ತಿರಲಿಲ್ಲ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ ಎಂದರು. ಮಂಗಳವಾರ ರಾತ್ರಿ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಚಾಲಕ 15 ಗಂಟೆಗಳ ವಿಶ್ರಾಂತಿ ಪಡೆದಿದ್ದ ಎಂದೂ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> <strong>ರೈಲು ಸಂಚಾರದಲ್ಲಿ ವ್ಯತ್ಯಯ<br /> ಬೆಂಗಳೂರು/ಚೆನ್ನೈ (ಐಎಎನ್ಎಸ್):</strong> ಅರಕ್ಕೋಣಂ ಜಂಕ್ಷನ್ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ರೈಲುಗಳ ಡಿಕ್ಕಿಯಿಂದಾಗಿ, ತಮಿಳುನಾಡು ಹಾಗೂ ಕರ್ನಾಟಕದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.<br /> <br /> ಬೆಂಗಳೂರು- ಚೆನ್ನೈ ಹಗಲು ಎಕ್ಸ್ಪ್ರೆಸ್ ರೈಲು ಸಂಚಾರ ರದ್ದು ಪಡಿಸಲಾಗಿದೆ. ಚೆನ್ನೈಗೆ ತೆರಳಬೇಕಾಗಿದ್ದ ಲಾಲ್ಬಾಗ್ ಮತ್ತು ಬೃಂದಾವನ ಇಂಟರ್ಸಿಟಿ ಸೂಪರ್ಪಾಸ್ಟ್, ಚೆನ್ನೈ ಮೂಲಕ ವಾರಣಾಸಿಗೆ ತೆರಳಬೇಕಾಗಿದ್ದ ಸಂಘಮಿತ್ರ ಎಕ್ಸ್ಪ್ರೆಸ್ ರೈಲಿನ ವೇಳಾಪಟ್ಟಿಯನ್ನು ಬದಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>