<p><strong>ಕಂಪ್ಲಿ</strong>: ಕಂಪ್ಲಿ ಕೋಟೆ ಚೆಕ್ ಪೋಸ್ಟ್ ಬಳಿ ರಾಜ್ಯ ಹೆದ್ದಾರಿ-29ರಲ್ಲಿ ಸಾರಿಗೆ ಸಂಸ್ಥೆ ಬಸ್ ಮಂಗಳವಾರ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗಿಡಕ್ಕೆ ಆಸರೆಯಾಗಿ ನಿಂತಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.<br /> <br /> ಹೊಸಪೇಟೆಯಿಂದ ರಾಯಚೂರಿಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಎದುರಿಗೆ ಬರುವ ಟಾಟಾ ಟಂ ಟಂ ಗಾಡಿಗೆ ಸೈಡ್ ಕೊಡುವ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡಿದೆ. ಈ ಸಂದರ್ಭದಲ್ಲಿ ಬಸ್ ರಸ್ತೆ ಪಕ್ಕದ ಮಡಿ ಕಾಲುವೆಯತ್ತ ನುಸುಳಿ ಪಕ್ಕದಲ್ಲಿದ್ದ ನೇರಳೆ ಮರಕ್ಕೆ ಆಸರೆಯಾಗಿ ನಿಂತಿದೆ. ಇದರಿಂದ ಬಸ್ನಲ್ಲಿದ್ದ 21 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.<br /> <br /> ಕೋಟೆ ಚೆಕ್ ಪೋಸ್ಟ್ ಬಳಿಯ ಮೂನ್ಲೈಟ್ ಗಾರ್ಡನ್ ರೆಸ್ಟೋ ರೆಂಟ್ ಎದುರಿನ ರಾಜ್ಯ ಹೆದ್ದಾರಿ ಯನ್ನು ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿಗಾಗಿ ಹಲವಾರು ದಿನ ಗಳ ಹಿಂದೆ ಅಗೆಯಲಾಗಿದೆ. ಇದನ್ನು ದುರಸ್ತಿ ಮಾಡಲು ಕೈಗೆತ್ತಿಕೊಂಡ ಪುರಸಭೆ ವಿನಾಕಾರಣ ವಿಳಂಬ ಮಾಡುತ್ತಿರುವುದರಿಂದ ಈ ರೀತಿಯ ಅವಘಡಗಳು ಸಂಭವಿಸುತ್ತಿರುವ ಬಗ್ಗೆ ಕೋಟೆ ನಿವಾಸಿ ಬಾಗಲಿ ಮಂಜುನಾಥ ಆಕ್ರೋಶ ವ್ಯಕ್ತಪಡಿಸಿದರು.<br /> <br /> ಕೂಡಲೇ ಹೆದ್ದಾರಿಯಲ್ಲಿ ಪೈಪ್ಲೈನ್ ದುರಸ್ತಿಗಾಗಿ ಅಗೆದಿರುವ ಕಂದಕ ವನ್ನು ಸರಿಪಡಿಸದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ</strong>: ಕಂಪ್ಲಿ ಕೋಟೆ ಚೆಕ್ ಪೋಸ್ಟ್ ಬಳಿ ರಾಜ್ಯ ಹೆದ್ದಾರಿ-29ರಲ್ಲಿ ಸಾರಿಗೆ ಸಂಸ್ಥೆ ಬಸ್ ಮಂಗಳವಾರ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗಿಡಕ್ಕೆ ಆಸರೆಯಾಗಿ ನಿಂತಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.<br /> <br /> ಹೊಸಪೇಟೆಯಿಂದ ರಾಯಚೂರಿಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಎದುರಿಗೆ ಬರುವ ಟಾಟಾ ಟಂ ಟಂ ಗಾಡಿಗೆ ಸೈಡ್ ಕೊಡುವ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡಿದೆ. ಈ ಸಂದರ್ಭದಲ್ಲಿ ಬಸ್ ರಸ್ತೆ ಪಕ್ಕದ ಮಡಿ ಕಾಲುವೆಯತ್ತ ನುಸುಳಿ ಪಕ್ಕದಲ್ಲಿದ್ದ ನೇರಳೆ ಮರಕ್ಕೆ ಆಸರೆಯಾಗಿ ನಿಂತಿದೆ. ಇದರಿಂದ ಬಸ್ನಲ್ಲಿದ್ದ 21 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.<br /> <br /> ಕೋಟೆ ಚೆಕ್ ಪೋಸ್ಟ್ ಬಳಿಯ ಮೂನ್ಲೈಟ್ ಗಾರ್ಡನ್ ರೆಸ್ಟೋ ರೆಂಟ್ ಎದುರಿನ ರಾಜ್ಯ ಹೆದ್ದಾರಿ ಯನ್ನು ಕುಡಿಯುವ ನೀರಿನ ಪೈಪ್ ಲೈನ್ ದುರಸ್ತಿಗಾಗಿ ಹಲವಾರು ದಿನ ಗಳ ಹಿಂದೆ ಅಗೆಯಲಾಗಿದೆ. ಇದನ್ನು ದುರಸ್ತಿ ಮಾಡಲು ಕೈಗೆತ್ತಿಕೊಂಡ ಪುರಸಭೆ ವಿನಾಕಾರಣ ವಿಳಂಬ ಮಾಡುತ್ತಿರುವುದರಿಂದ ಈ ರೀತಿಯ ಅವಘಡಗಳು ಸಂಭವಿಸುತ್ತಿರುವ ಬಗ್ಗೆ ಕೋಟೆ ನಿವಾಸಿ ಬಾಗಲಿ ಮಂಜುನಾಥ ಆಕ್ರೋಶ ವ್ಯಕ್ತಪಡಿಸಿದರು.<br /> <br /> ಕೂಡಲೇ ಹೆದ್ದಾರಿಯಲ್ಲಿ ಪೈಪ್ಲೈನ್ ದುರಸ್ತಿಗಾಗಿ ಅಗೆದಿರುವ ಕಂದಕ ವನ್ನು ಸರಿಪಡಿಸದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>