<p><strong>ಧಾರವಾಡ:</strong> ನಗರದ ಸೂಪರ್ ಮಾರ್ಕೆಟ್ಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಜೆಡಿಎಸ್ ಶಹರ ಘಟಕದ ಕಾರ್ಯದರ್ಶಿ ಇಸ್ಮಾಯಿಲ್ ತಮಾಟಗಾರ ಸುಭಾಷ ರಸ್ತೆಯಲ್ಲಿ ಗುರುವಾರ ಉಪವಾಸ ಸತ್ಯಾಗ್ರಹ ಆರಂಭಿಸಿದರು.<br /> <br /> ಇದುವರೆಗೆ ಅನೇಕ ಬಾರಿ ಶಾಸಕರು, ಮೇಯರ್, ಪಾಲಿಕೆ ಆಯುಕ್ತರು, ಸದಸ್ಯರು ಹಾಗೂ ಅಧಿಕಾರಿಗಳು ಭೇಟಿ ನೀಡಿದರೂ ಸಹ ಯಾವುದೇ ಅಭಿವೃದ್ದಿ ಕಾರ್ಯ ಆಗಿಲ್ಲ. ಆಡಳಿತ ಪಕ್ಷ ಈ ವಿಷಯದಲ್ಲಿ ನಿರ್ಲಕ್ಷ್ಯ ತಾಳಿದೆ. ಅದನ್ನ್ನು ಖಂಡಿಸಿ ಈ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು ಜನತೆ ಈ ಸತ್ಯಾಗ್ರಹಕ್ಕೆ ಬೆಂಬಲ ನೀಡಬೇಕು ಎಂದು ಪಕ್ಷದ ಮುಖಂಡರು ಕೋರಿದರು.<br /> <br /> ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಸೂಪರ್ ಮಾರುಕಟ್ಟೆಯ ಅವಲೋಕನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹೊರಟ್ಟಿ, ಧಾರವಾಡದ ಸೂಪರ್ ಮಾರ್ಕೆಟ್ ಅನ್ನು ಇದುವರೆಗೆ ಅಭಿವೃದ್ಧಿ ಮಾಡದಿರುವುದು ನಾಚಿಕೆಗೇಡಿನ ಸಂಗತಿ. ರಾಜ್ಯ ಸರ್ಕಾರ ಮಾರುಕಟ್ಟೆ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ತಮಾಟಗಾರ ಕೈಗೊಂಡಿರುವ ಹೋರಾಟಕ್ಕೆ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದರು.</p>.<p><br /> ತರಕಾರಿ, ಮೀನು, ಮಟನ್ ಮಾರ್ಕೆಟ್ ಇರುವ ಈ ಪ್ರದೇಶದಲ್ಲಿ ರಸ್ತೆ, ಗಟಾರು, ನೀರು, ಶೌಚಾಲಯದ ಸೌಲಭ್ಯವಿಲ್ಲದ ಕಾರಣ ವ್ಯಾಪಾರಸ್ಥರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಕುರಿತು ಪಾಲಿಕೆಗೆ ಹಲವು ಬಾರಿ ಮನವಿ ಮಾಡಿಕೊಂಡರೂ ಪಾಲಿಕೆ ಈ ಕಡೆ ಗಮನ ಹರಿಸಿಲ್ಲ ಎಂದು ಆರೋಪಿಸಿದರು. <br /> <br /> ಎನ್.ಎಚ್. ಕೋನರೆಡ್ಡಿ, ಸುರೇಶ ಹಿರೇಮಠ, ಮೋಹನ ಅರ್ಕಸಾಲಿ, ಮುಜಾಹಿದ್ ಕಾಂಟ್ರ್ಯಾಕ್ಟರ್, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ವಿಜಯಲಕ್ಷ್ಮೀ ಲೂತಿಮಠ, ಸರೋಜಾ ಪಾಟೀಲ, ಖಾತೂನಬಿ ತಮಾಟಗಾರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ನಗರದ ಸೂಪರ್ ಮಾರ್ಕೆಟ್ಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಜೆಡಿಎಸ್ ಶಹರ ಘಟಕದ ಕಾರ್ಯದರ್ಶಿ ಇಸ್ಮಾಯಿಲ್ ತಮಾಟಗಾರ ಸುಭಾಷ ರಸ್ತೆಯಲ್ಲಿ ಗುರುವಾರ ಉಪವಾಸ ಸತ್ಯಾಗ್ರಹ ಆರಂಭಿಸಿದರು.<br /> <br /> ಇದುವರೆಗೆ ಅನೇಕ ಬಾರಿ ಶಾಸಕರು, ಮೇಯರ್, ಪಾಲಿಕೆ ಆಯುಕ್ತರು, ಸದಸ್ಯರು ಹಾಗೂ ಅಧಿಕಾರಿಗಳು ಭೇಟಿ ನೀಡಿದರೂ ಸಹ ಯಾವುದೇ ಅಭಿವೃದ್ದಿ ಕಾರ್ಯ ಆಗಿಲ್ಲ. ಆಡಳಿತ ಪಕ್ಷ ಈ ವಿಷಯದಲ್ಲಿ ನಿರ್ಲಕ್ಷ್ಯ ತಾಳಿದೆ. ಅದನ್ನ್ನು ಖಂಡಿಸಿ ಈ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು ಜನತೆ ಈ ಸತ್ಯಾಗ್ರಹಕ್ಕೆ ಬೆಂಬಲ ನೀಡಬೇಕು ಎಂದು ಪಕ್ಷದ ಮುಖಂಡರು ಕೋರಿದರು.<br /> <br /> ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಸೂಪರ್ ಮಾರುಕಟ್ಟೆಯ ಅವಲೋಕನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹೊರಟ್ಟಿ, ಧಾರವಾಡದ ಸೂಪರ್ ಮಾರ್ಕೆಟ್ ಅನ್ನು ಇದುವರೆಗೆ ಅಭಿವೃದ್ಧಿ ಮಾಡದಿರುವುದು ನಾಚಿಕೆಗೇಡಿನ ಸಂಗತಿ. ರಾಜ್ಯ ಸರ್ಕಾರ ಮಾರುಕಟ್ಟೆ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ತಮಾಟಗಾರ ಕೈಗೊಂಡಿರುವ ಹೋರಾಟಕ್ಕೆ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದರು.</p>.<p><br /> ತರಕಾರಿ, ಮೀನು, ಮಟನ್ ಮಾರ್ಕೆಟ್ ಇರುವ ಈ ಪ್ರದೇಶದಲ್ಲಿ ರಸ್ತೆ, ಗಟಾರು, ನೀರು, ಶೌಚಾಲಯದ ಸೌಲಭ್ಯವಿಲ್ಲದ ಕಾರಣ ವ್ಯಾಪಾರಸ್ಥರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಕುರಿತು ಪಾಲಿಕೆಗೆ ಹಲವು ಬಾರಿ ಮನವಿ ಮಾಡಿಕೊಂಡರೂ ಪಾಲಿಕೆ ಈ ಕಡೆ ಗಮನ ಹರಿಸಿಲ್ಲ ಎಂದು ಆರೋಪಿಸಿದರು. <br /> <br /> ಎನ್.ಎಚ್. ಕೋನರೆಡ್ಡಿ, ಸುರೇಶ ಹಿರೇಮಠ, ಮೋಹನ ಅರ್ಕಸಾಲಿ, ಮುಜಾಹಿದ್ ಕಾಂಟ್ರ್ಯಾಕ್ಟರ್, ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ವಿಜಯಲಕ್ಷ್ಮೀ ಲೂತಿಮಠ, ಸರೋಜಾ ಪಾಟೀಲ, ಖಾತೂನಬಿ ತಮಾಟಗಾರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>