<p><strong>ನವದೆಹಲಿ/ ಚೆನ್ನೈ (ಪಿಟಿಐ)</strong>: ಜಲ್ಲಿಕಟ್ಟು ಸ್ಪರ್ಧೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಲು ಸುಪ್ರೀಂಕೋರ್ಟ್ ಬುಧವಾರ ನಿರಾಕರಿ ಸಿದ್ದರಿಂದ ಪೊಂಗಲ್ ಹಬ್ಬದಂದು ಸ್ಪರ್ಧೆ ನಡೆಸುವ ತಮಿಳುನಾಡು ಜನತೆಯ ಕೊನೆಯ ಪ್ರಯತ್ನವೂ ವಿಫಲಗೊಂಡಿದೆ. ಸುಪ್ರೀಂಕೋರ್ಟ್ ನಿಲುವಿನಿಂದ ಆಕ್ರೋಶಗೊಂಡಿರುವ ಜನರು ತಮಿಳು ನಾಡಿನಾದ್ಯಂತ ಪ್ರತಿಭಟನೆ ತೀವ್ರಗೊ ಳಿಸಿದ್ದಾರೆ.<br /> <br /> <strong>ಆತ್ಮಾಹುತಿಗೆ ಯತ್ನ:</strong> ಜಲ್ಲಿಕಟ್ಟು ನಿಷೇಧ ದಿಂದ ಹತಾಶಗೊಂಡ ವ್ಯಕ್ತಿಯೊಬ್ಬ ತಿರುಚಿನಾಪಳ್ಳಿಯಲ್ಲಿ ಮೈಗೆ ಬೆಂಕಿ ಹೊತ್ತಿಸಿಕೊಂಡು ಆತ್ಮಾಹುತಿಗೆ ಯತ್ನಿಸಿದ. ಪೊಲೀಸರು ಮಧ್ಯಪ್ರವೇಶಿಸಿ ಆತನ ಯತ್ನವನ್ನು ವಿಫಲಗೊಳಿಸಿದರು. ಈ ಮಧ್ಯೆ ಜಲ್ಲಿಕಟ್ಟು ಸ್ಪರ್ಧೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿ ಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸಿದೆ.<br /> ನ್ಯಾಯಾಲಯದಲ್ಲಿ ಅರ್ಜಿಗಳ ವಿಚಾರಣೆ ನಡೆಯುತ್ತಿರುವುದರಿಂದ ಈ ಹಂತದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಮಿಳುನಾಡು ಸರ್ಕಾರಕ್ಕೆ ತಿಳಿಸಿದೆ.<br /> <br /> ರಾಜ್ಯ ಸರ್ಕಾರ ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಬಹುದಾಗಿದ್ದು, ಈ ವಿಚಾರದಲ್ಲಿ ನಾವು ಬೆಂಬಲ ನೀಡುತ್ತೇವೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಹಾಮಲ್ಲಪುರಂನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಜಲ್ಲಿಕಟ್ಟು ಸ್ಪರ್ಧೆಗೆ ಕೋರ್ಟ್ ಆದೇಶ ಅಡ್ಡಿಯಾಗಿದ್ದರಿಂದ ಉದ್ರಿಕ್ತಗೊಂಡ ಜನರು ಚೆನ್ನೈ, ಮದುರೆ, ತಿರುಚಿನಾಪಳ್ಳಿ, ಪುದುಕೋಟ್ಟೈ ಮತ್ತು ಸೇಲಂನಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.<br /> <br /> ಚೆನ್ನೈಯಲ್ಲಿ ‘ಮೇ 17 ಆಂದೋಲನ’ ಮತ್ತು ‘ತಮಿಳರ ಮುನ್ನೇತ್ರ ಪಡಿ’ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರ ಕೂಡಲೇ ಮಧ್ಯೆ ಪ್ರವೇಶ ಮಾಡಿ ಜಲ್ಲಿಕಟ್ಟು ನಡೆಯಲು ಅನುಕೂಲ ಮಾಡಿಕೊ ಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.<br /> <br /> ಮದುರೆ ಜಿಲ್ಲೆಯ ಅಲಂಗನಲ್ಲೂರು ಮತ್ತು ಪಲಮೇಡುವಿನಲ್ಲಿ ಜಲ್ಲಿಕಟ್ಟು ಸ್ಪರ್ಧೆಯ ಅಭಿಮಾನಿಗಳು ಉಪವಾಸ ಸತ್ಯಾಗ್ರಹ ನಡೆಸಿದರು.<br /> ಕೆಲವು ಕಡೆಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ರಸ್ತೆ ತಡೆ ನಡೆಸಲಾಯಿತು. ಕೇಶ ಮುಂಡನ: ಮದುರೆಯಲ್ಲಿ ಕೆಲವು ಯುವಕರು ಸುಪ್ರೀಂಕೋರ್ಟ್ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಕೇಶ ಮುಂಡನ ಮಾಡಿಸಿಕೊಂಡರು.</p>.<p><strong>ಸೂಕ್ತ ಕ್ರಮದ ಭರವಸೆ</strong><br /> ಜಲ್ಲಿಕಟ್ಟು ಸ್ಪರ್ಧೆ ನಡೆಸಲು ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಜಲ ಸಾರಿಗೆ ರಾಜ್ಯ ಸಚಿವ ಪೊನ್ ರಾಧಾಕೃಷ್ಣನ್ ಕಡಲೂರಿನಲ್ಲಿ ಭರವಸೆ ನೀಡಿದ್ದಾರೆ. ಈ ಗ್ರಾಮೀಣ ಸ್ಪರ್ಧೆಯನ್ನು ನಿಷೇಧಿಸಲು ಕಾರಣರಾದವರ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p><strong>ಜನರ ನಿರೀಕ್ಷೆ ಹುಸಿಯಾಗದಿರಲಿ: </strong>ಜಲ್ಲಿಕಟ್ಟು ಸ್ಪರ್ಧೆ ನಡೆಯುತ್ತದೆ ಎಂಬ ಜನರ ನಿರೀಕ್ಷೆ ಹುಸಿಯಾಗದಂತೆ ನೋಡಿ ಕೊಳ್ಳಬೇಕು ಎಂದು ಪಿಎಂಕೆ ಮುಖಂಡ ರಾಮದಾಸ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ ಚೆನ್ನೈ (ಪಿಟಿಐ)</strong>: ಜಲ್ಲಿಕಟ್ಟು ಸ್ಪರ್ಧೆಗೆ ನೀಡಿರುವ ಮಧ್ಯಂತರ ತಡೆಯಾಜ್ಞೆಯನ್ನು ತೆರವುಗೊಳಿಸಲು ಸುಪ್ರೀಂಕೋರ್ಟ್ ಬುಧವಾರ ನಿರಾಕರಿ ಸಿದ್ದರಿಂದ ಪೊಂಗಲ್ ಹಬ್ಬದಂದು ಸ್ಪರ್ಧೆ ನಡೆಸುವ ತಮಿಳುನಾಡು ಜನತೆಯ ಕೊನೆಯ ಪ್ರಯತ್ನವೂ ವಿಫಲಗೊಂಡಿದೆ. ಸುಪ್ರೀಂಕೋರ್ಟ್ ನಿಲುವಿನಿಂದ ಆಕ್ರೋಶಗೊಂಡಿರುವ ಜನರು ತಮಿಳು ನಾಡಿನಾದ್ಯಂತ ಪ್ರತಿಭಟನೆ ತೀವ್ರಗೊ ಳಿಸಿದ್ದಾರೆ.<br /> <br /> <strong>ಆತ್ಮಾಹುತಿಗೆ ಯತ್ನ:</strong> ಜಲ್ಲಿಕಟ್ಟು ನಿಷೇಧ ದಿಂದ ಹತಾಶಗೊಂಡ ವ್ಯಕ್ತಿಯೊಬ್ಬ ತಿರುಚಿನಾಪಳ್ಳಿಯಲ್ಲಿ ಮೈಗೆ ಬೆಂಕಿ ಹೊತ್ತಿಸಿಕೊಂಡು ಆತ್ಮಾಹುತಿಗೆ ಯತ್ನಿಸಿದ. ಪೊಲೀಸರು ಮಧ್ಯಪ್ರವೇಶಿಸಿ ಆತನ ಯತ್ನವನ್ನು ವಿಫಲಗೊಳಿಸಿದರು. ಈ ಮಧ್ಯೆ ಜಲ್ಲಿಕಟ್ಟು ಸ್ಪರ್ಧೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿ ಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ತನ್ನ ಅಸಹಾಯಕತೆಯನ್ನು ವ್ಯಕ್ತಪಡಿಸಿದೆ.<br /> ನ್ಯಾಯಾಲಯದಲ್ಲಿ ಅರ್ಜಿಗಳ ವಿಚಾರಣೆ ನಡೆಯುತ್ತಿರುವುದರಿಂದ ಈ ಹಂತದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ತಮಿಳುನಾಡು ಸರ್ಕಾರಕ್ಕೆ ತಿಳಿಸಿದೆ.<br /> <br /> ರಾಜ್ಯ ಸರ್ಕಾರ ಈ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಬಹುದಾಗಿದ್ದು, ಈ ವಿಚಾರದಲ್ಲಿ ನಾವು ಬೆಂಬಲ ನೀಡುತ್ತೇವೆ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮಹಾಮಲ್ಲಪುರಂನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಜಲ್ಲಿಕಟ್ಟು ಸ್ಪರ್ಧೆಗೆ ಕೋರ್ಟ್ ಆದೇಶ ಅಡ್ಡಿಯಾಗಿದ್ದರಿಂದ ಉದ್ರಿಕ್ತಗೊಂಡ ಜನರು ಚೆನ್ನೈ, ಮದುರೆ, ತಿರುಚಿನಾಪಳ್ಳಿ, ಪುದುಕೋಟ್ಟೈ ಮತ್ತು ಸೇಲಂನಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ.<br /> <br /> ಚೆನ್ನೈಯಲ್ಲಿ ‘ಮೇ 17 ಆಂದೋಲನ’ ಮತ್ತು ‘ತಮಿಳರ ಮುನ್ನೇತ್ರ ಪಡಿ’ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರ ಕೂಡಲೇ ಮಧ್ಯೆ ಪ್ರವೇಶ ಮಾಡಿ ಜಲ್ಲಿಕಟ್ಟು ನಡೆಯಲು ಅನುಕೂಲ ಮಾಡಿಕೊ ಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.<br /> <br /> ಮದುರೆ ಜಿಲ್ಲೆಯ ಅಲಂಗನಲ್ಲೂರು ಮತ್ತು ಪಲಮೇಡುವಿನಲ್ಲಿ ಜಲ್ಲಿಕಟ್ಟು ಸ್ಪರ್ಧೆಯ ಅಭಿಮಾನಿಗಳು ಉಪವಾಸ ಸತ್ಯಾಗ್ರಹ ನಡೆಸಿದರು.<br /> ಕೆಲವು ಕಡೆಗಳಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ರಸ್ತೆ ತಡೆ ನಡೆಸಲಾಯಿತು. ಕೇಶ ಮುಂಡನ: ಮದುರೆಯಲ್ಲಿ ಕೆಲವು ಯುವಕರು ಸುಪ್ರೀಂಕೋರ್ಟ್ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಕೇಶ ಮುಂಡನ ಮಾಡಿಸಿಕೊಂಡರು.</p>.<p><strong>ಸೂಕ್ತ ಕ್ರಮದ ಭರವಸೆ</strong><br /> ಜಲ್ಲಿಕಟ್ಟು ಸ್ಪರ್ಧೆ ನಡೆಸಲು ಸೂಕ್ತ ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಜಲ ಸಾರಿಗೆ ರಾಜ್ಯ ಸಚಿವ ಪೊನ್ ರಾಧಾಕೃಷ್ಣನ್ ಕಡಲೂರಿನಲ್ಲಿ ಭರವಸೆ ನೀಡಿದ್ದಾರೆ. ಈ ಗ್ರಾಮೀಣ ಸ್ಪರ್ಧೆಯನ್ನು ನಿಷೇಧಿಸಲು ಕಾರಣರಾದವರ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p><strong>ಜನರ ನಿರೀಕ್ಷೆ ಹುಸಿಯಾಗದಿರಲಿ: </strong>ಜಲ್ಲಿಕಟ್ಟು ಸ್ಪರ್ಧೆ ನಡೆಯುತ್ತದೆ ಎಂಬ ಜನರ ನಿರೀಕ್ಷೆ ಹುಸಿಯಾಗದಂತೆ ನೋಡಿ ಕೊಳ್ಳಬೇಕು ಎಂದು ಪಿಎಂಕೆ ಮುಖಂಡ ರಾಮದಾಸ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>