<p>ಪಂಕಜ್ ಅಭಿನಯದ ~ರಣ~ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ತಮಿಳುನಾಡಿನಲ್ಲಿ ಚಿತ್ರೀಕರಣ ನಡೆಸಿರುವ ಚಿತ್ರತಂಡ ಅಕ್ಟೋಬರ್ 10ರಿಂದ ಎರಡನೇ ಹಂತದ ಚಿತ್ರೀಕರಣ ನಡೆಸಲಿದೆ. ಶ್ರೀನಿವಾಸ ಮೂರ್ತಿ ಚಿತ್ರದ ನಿರ್ದೇಶಕರು. ಸುಪ್ರೀತಾ, ಅರ್ಚನಾ ಮತ್ತು ಸೋನಿಯಾ ಗೌಡ ಚಿತ್ರದ ಮೂವರು ನಾಯಕಿಯರು.</p>.<p><strong>`ಪ್ರೀತಿಸಿ...~ ಚಿತ್ರೀಕರಣ ಪೂರ್ಣ</strong><br /> ಕುಮಾರ್ ಗೋವಿಂದ್ ಕಥೆ, ಚಿತ್ರಕಥೆ ಬರೆದು ನಿರ್ದೇಶನವನ್ನೂ ಮಾಡಿರುವ `ಪ್ರೀತಿಸಿ ಹೊರಟವಳೇ~ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಶೀಘ್ರದಲ್ಲೇ ಪ್ರಥಮ ಪ್ರತಿ ಸಿದ್ಧವಾಗಲಿದೆ. ತ್ರಿಕೋನ ಪ್ರೇಮಕಥೆಯ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಗೌತಮ್ ಶ್ರೀನಿವಾಸ್ ಸಂಗೀತ ನೀಡಿದ್ದಾರೆ. ಕುಮಾರ್ ಗೋವಿಂದ್, ಡಿಂಪಲ್, ಪದ್ಮಾವಾಸಂತಿ, ಸುಂದರರಾಜ್, ಬ್ಯಾಂಕ್ ಜನಾರ್ದನ್ ನಟಿಸಿದ್ದಾರೆ. ಊಟಿ, ಕುಂದಾಪುರ, ನಂದಿ, ಬೆಂಗಳೂರು ಮುಂತಾದೆಡೆ ಚಿತ್ರೀಕರಣ ನಡೆಸಲಾಗಿದೆ.<br /> <br /> <strong>`ಅಲೆಮಾರಿ~ ಚಿತ್ರೀಕರಣ</strong><br /> ಲೂಸ್ ಮಾದ ಯೋಗೀಶ್ ನಾಯಕರಾಗಿ ನಟಿಸುತ್ತಿರುವ `ಅಲೆಮಾರಿ~ ಚಿತ್ರದ ಹಾಡು ಮತ್ತು ಸನ್ನಿವೇಶಗಳ ಚಿತ್ರೀಕರಣ ಬೆಂಗಳೂರಿನ ಕೆಲವು ರಸ್ತೆ ಮತ್ತು ಮನೆಗಳಲ್ಲಿ ನಡೆಯಿತು. ಚಿತ್ರಕ್ಕಾಗಿ ಚಿತ್ರತಂಡ ವಿವಿಧ ಪ್ರದೇಶಗಳಿಗೆ ಸಂಚರಿಸಲಿದೆ.<br /> <br /> ನಾಯಕ ಪ್ರೀತಿಯನ್ನು ಅರಸುತ್ತ ಊರೂರು ಅಲೆಯುವಾಗ ನಡೆಯುವ ಘಟನಾವಳಿಗಳ ಕಥೆಯ ಎಳೆಯನ್ನು ಈ ಚಿತ್ರ ಹೊಂದಿದೆ. ಸಂತು ಮೊದಲ ಬಾರಿಗೆ ಈ ಚಿತ್ರದ ಮೂಲಕ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಬಿ.ಕೆ.ಶ್ರೀನಿವಾಸ್ ಚಿತ್ರದ ನಿರ್ಮಾಪಕರು. ರಾಧಿಕಾ ಪಂಡಿತ್ ಚಿತ್ರದ ನಾಯಕಿ. ಮಂಜುನಾಥ್ ನಾಯಕ್ ಛಾಯಾಗ್ರಹಣ ಮಾಡಿದ್ದಾರೆ. <br /> <br /> ಮಂಜು ಮಾಂಡವ್ಯ ಸಂಭಾಷಣೆ ರಚಿಸಿದ್ದಾರೆ. ರವಿವರ್ಮ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ರಂಗಾಯಣ ರಘು, ಆದಿ ಲೋಕೇಶ್, ರಾಕೇಶ್, ಉಮಾಶ್ರೀ, ರಮೇಶ್ ಭಟ್, ರಘುರಾಂ, ರಮೇಶ್ ಪಂಡಿತ್ ಮೊದಲಾದವರು ಚಿತ್ರದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಂಕಜ್ ಅಭಿನಯದ ~ರಣ~ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ತಮಿಳುನಾಡಿನಲ್ಲಿ ಚಿತ್ರೀಕರಣ ನಡೆಸಿರುವ ಚಿತ್ರತಂಡ ಅಕ್ಟೋಬರ್ 10ರಿಂದ ಎರಡನೇ ಹಂತದ ಚಿತ್ರೀಕರಣ ನಡೆಸಲಿದೆ. ಶ್ರೀನಿವಾಸ ಮೂರ್ತಿ ಚಿತ್ರದ ನಿರ್ದೇಶಕರು. ಸುಪ್ರೀತಾ, ಅರ್ಚನಾ ಮತ್ತು ಸೋನಿಯಾ ಗೌಡ ಚಿತ್ರದ ಮೂವರು ನಾಯಕಿಯರು.</p>.<p><strong>`ಪ್ರೀತಿಸಿ...~ ಚಿತ್ರೀಕರಣ ಪೂರ್ಣ</strong><br /> ಕುಮಾರ್ ಗೋವಿಂದ್ ಕಥೆ, ಚಿತ್ರಕಥೆ ಬರೆದು ನಿರ್ದೇಶನವನ್ನೂ ಮಾಡಿರುವ `ಪ್ರೀತಿಸಿ ಹೊರಟವಳೇ~ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು ಶೀಘ್ರದಲ್ಲೇ ಪ್ರಥಮ ಪ್ರತಿ ಸಿದ್ಧವಾಗಲಿದೆ. ತ್ರಿಕೋನ ಪ್ರೇಮಕಥೆಯ ಈ ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಗೌತಮ್ ಶ್ರೀನಿವಾಸ್ ಸಂಗೀತ ನೀಡಿದ್ದಾರೆ. ಕುಮಾರ್ ಗೋವಿಂದ್, ಡಿಂಪಲ್, ಪದ್ಮಾವಾಸಂತಿ, ಸುಂದರರಾಜ್, ಬ್ಯಾಂಕ್ ಜನಾರ್ದನ್ ನಟಿಸಿದ್ದಾರೆ. ಊಟಿ, ಕುಂದಾಪುರ, ನಂದಿ, ಬೆಂಗಳೂರು ಮುಂತಾದೆಡೆ ಚಿತ್ರೀಕರಣ ನಡೆಸಲಾಗಿದೆ.<br /> <br /> <strong>`ಅಲೆಮಾರಿ~ ಚಿತ್ರೀಕರಣ</strong><br /> ಲೂಸ್ ಮಾದ ಯೋಗೀಶ್ ನಾಯಕರಾಗಿ ನಟಿಸುತ್ತಿರುವ `ಅಲೆಮಾರಿ~ ಚಿತ್ರದ ಹಾಡು ಮತ್ತು ಸನ್ನಿವೇಶಗಳ ಚಿತ್ರೀಕರಣ ಬೆಂಗಳೂರಿನ ಕೆಲವು ರಸ್ತೆ ಮತ್ತು ಮನೆಗಳಲ್ಲಿ ನಡೆಯಿತು. ಚಿತ್ರಕ್ಕಾಗಿ ಚಿತ್ರತಂಡ ವಿವಿಧ ಪ್ರದೇಶಗಳಿಗೆ ಸಂಚರಿಸಲಿದೆ.<br /> <br /> ನಾಯಕ ಪ್ರೀತಿಯನ್ನು ಅರಸುತ್ತ ಊರೂರು ಅಲೆಯುವಾಗ ನಡೆಯುವ ಘಟನಾವಳಿಗಳ ಕಥೆಯ ಎಳೆಯನ್ನು ಈ ಚಿತ್ರ ಹೊಂದಿದೆ. ಸಂತು ಮೊದಲ ಬಾರಿಗೆ ಈ ಚಿತ್ರದ ಮೂಲಕ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಬಿ.ಕೆ.ಶ್ರೀನಿವಾಸ್ ಚಿತ್ರದ ನಿರ್ಮಾಪಕರು. ರಾಧಿಕಾ ಪಂಡಿತ್ ಚಿತ್ರದ ನಾಯಕಿ. ಮಂಜುನಾಥ್ ನಾಯಕ್ ಛಾಯಾಗ್ರಹಣ ಮಾಡಿದ್ದಾರೆ. <br /> <br /> ಮಂಜು ಮಾಂಡವ್ಯ ಸಂಭಾಷಣೆ ರಚಿಸಿದ್ದಾರೆ. ರವಿವರ್ಮ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ರಂಗಾಯಣ ರಘು, ಆದಿ ಲೋಕೇಶ್, ರಾಕೇಶ್, ಉಮಾಶ್ರೀ, ರಮೇಶ್ ಭಟ್, ರಘುರಾಂ, ರಮೇಶ್ ಪಂಡಿತ್ ಮೊದಲಾದವರು ಚಿತ್ರದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>