<p>ರಾಮನಗರ: ನವೆಂಬರ್ 30ರವರೆಗೆ ಕಾವೇರಿ ನದಿಯಿಂದ ತಮಿಳುನಾಡಿಗೆ 4.8 ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಉಸ್ತುವಾರಿ ಸಮಿತಿಯು ಕರ್ನಾಟಕಕ್ಕೆ ಆದೇಶಿಸಿರುವುದನ್ನು ಖಂಡಿಸಿ ಕಸ್ತೂರಿ ಕನ್ನಡ ಜನಪರ ವೇದಿಕೆ ಕಾರ್ಯಕರ್ತರು ಐಜೂರು ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.<br /> <br /> ಬೆಂಗಳೂರು- ಮೈಸೂರು ರಸ್ತೆಯಲ್ಲಿ ಉರುಳು ಸೇವೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. <br /> <br /> `ತಮಿಳುನಾಡಿಗೆ ಈಗ ನೀರಿನ ಅವಶ್ಯಕತೆಯಿಲ್ಲ. ಆದರೂ ನೀರು ಬಿಡಲು ಕಾವೇರಿ ಉಸ್ತುವಾರಿ ಸಮಿತಿ ಆದೇಶ ನೀಡಿದೆ. ಇದು ಅತ್ಯಂತ ಅವೈಜ್ಞಾನಿಕವಾಗಿದೆ. ಜಯಲಲಿತಾ ಕನ್ನಡ ನಾಡಿನ ಮಗಳಾಗಿದ್ದರೂ, ನಾಡಿನ ವಿರುದ್ಧನಡೆದುಕೊಳ್ಳುತ್ತಿದ್ದಾರೆ. ಜಯಲಲಿತಾ ರಾಜ್ಯಕ್ಕೆ ಬಂದರೆ ಅವರ ಮುಖಕ್ಕೆ ಮಸಿ ಬಳಿಯಲಾಗುವುದು~ ಎಂದು ಎಚ್ಚರಿಸಿದರು. <br /> <br /> `ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸರ್ಕಾರ ಕೂಡ ರೈತರ ಪರವಾಗಿಲ್ಲ. ರಾಜಕಾರಣಿಗಳಲ್ಲಿ ಇಚ್ಛಾಶಕ್ತಿಯ ಕೊರತೆ ಇದೆ. ಕಾವೇರಿ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ಪರಿಹರಿಸುತ್ತಿಲ್ಲ. ಇಂದು ಸಾಂಕೇತಿಕ ಪ್ರತಿಭಟನೆಯನ್ನು ಮಾಡಲಾಗಿದ್ದು, ಕಾವೇರಿ ನದಿಯಿಂದ ತಮಿಳುನಾಡಿಗೆ ನೀರನ್ನು ಬಿಟ್ಟರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು~ ಎಂದು ಕಸ್ತೂರಿ ಕನ್ನಡ ಜನಪರ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಬೇವೂರು ಯೋಗೇಶ್ ಹೇಳಿದರು. <br /> <br /> ಮಹಿಳಾ ಘಟಕದ ಕೋಶಾಧ್ಯಕ್ಷೆ ಲಕ್ಷ್ಮಮ್ಮ, ಮುಖಂಡರಾದ ರಂಜಿತ್ಗೌಡ, ಮಂಗಳಮ್ಮ, ವಿನಯ್, ಶಶಿಧರ್, ದಿಲೀಪ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ನವೆಂಬರ್ 30ರವರೆಗೆ ಕಾವೇರಿ ನದಿಯಿಂದ ತಮಿಳುನಾಡಿಗೆ 4.8 ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಉಸ್ತುವಾರಿ ಸಮಿತಿಯು ಕರ್ನಾಟಕಕ್ಕೆ ಆದೇಶಿಸಿರುವುದನ್ನು ಖಂಡಿಸಿ ಕಸ್ತೂರಿ ಕನ್ನಡ ಜನಪರ ವೇದಿಕೆ ಕಾರ್ಯಕರ್ತರು ಐಜೂರು ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.<br /> <br /> ಬೆಂಗಳೂರು- ಮೈಸೂರು ರಸ್ತೆಯಲ್ಲಿ ಉರುಳು ಸೇವೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. <br /> <br /> `ತಮಿಳುನಾಡಿಗೆ ಈಗ ನೀರಿನ ಅವಶ್ಯಕತೆಯಿಲ್ಲ. ಆದರೂ ನೀರು ಬಿಡಲು ಕಾವೇರಿ ಉಸ್ತುವಾರಿ ಸಮಿತಿ ಆದೇಶ ನೀಡಿದೆ. ಇದು ಅತ್ಯಂತ ಅವೈಜ್ಞಾನಿಕವಾಗಿದೆ. ಜಯಲಲಿತಾ ಕನ್ನಡ ನಾಡಿನ ಮಗಳಾಗಿದ್ದರೂ, ನಾಡಿನ ವಿರುದ್ಧನಡೆದುಕೊಳ್ಳುತ್ತಿದ್ದಾರೆ. ಜಯಲಲಿತಾ ರಾಜ್ಯಕ್ಕೆ ಬಂದರೆ ಅವರ ಮುಖಕ್ಕೆ ಮಸಿ ಬಳಿಯಲಾಗುವುದು~ ಎಂದು ಎಚ್ಚರಿಸಿದರು. <br /> <br /> `ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸರ್ಕಾರ ಕೂಡ ರೈತರ ಪರವಾಗಿಲ್ಲ. ರಾಜಕಾರಣಿಗಳಲ್ಲಿ ಇಚ್ಛಾಶಕ್ತಿಯ ಕೊರತೆ ಇದೆ. ಕಾವೇರಿ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ಪರಿಹರಿಸುತ್ತಿಲ್ಲ. ಇಂದು ಸಾಂಕೇತಿಕ ಪ್ರತಿಭಟನೆಯನ್ನು ಮಾಡಲಾಗಿದ್ದು, ಕಾವೇರಿ ನದಿಯಿಂದ ತಮಿಳುನಾಡಿಗೆ ನೀರನ್ನು ಬಿಟ್ಟರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು~ ಎಂದು ಕಸ್ತೂರಿ ಕನ್ನಡ ಜನಪರ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಬೇವೂರು ಯೋಗೇಶ್ ಹೇಳಿದರು. <br /> <br /> ಮಹಿಳಾ ಘಟಕದ ಕೋಶಾಧ್ಯಕ್ಷೆ ಲಕ್ಷ್ಮಮ್ಮ, ಮುಖಂಡರಾದ ರಂಜಿತ್ಗೌಡ, ಮಂಗಳಮ್ಮ, ವಿನಯ್, ಶಶಿಧರ್, ದಿಲೀಪ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>