<p><strong>ಚೆನ್ನೈ (ಐಎಎನ್ಎಸ್):</strong> ಬಿಹಾರದ ಸರನ್ ಜಿಲ್ಲೆಯ ಬಿಸಿಯೂಟ ದುರಂತ ಇನ್ನೂ ಕಣ್ಣಮುಂದೆಯೆ ಇರುವಾಗ ತಮಿಳುನಾಡಿನಲ್ಲೂ ಇಂತಹುದೆ ಘಟನೆ ಗುರುವಾರ ನಡೆದಿದೆ.<br /> <br /> ರಾಜ್ಯದ ಕಡಲೂರು ಜಿಲ್ಲೆಯ ನೈವೇಲಿ ಎನ್ಎಲ್ಸಿ ಬಾಲಕಿಯರ ಶಾಲೆಯ 155 ವಿದ್ಯಾರ್ಥಿನಿಯರು ಬಿಸಿಯೂಟದ ನಂತರ ಅಸ್ವಸ್ಥಗೊಂಡಿದ್ದು, ಈ ಪೈಕಿ 13 ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಕ್ಕಳ ಸ್ಥಿತಿ ಸ್ಥಿರವಾಗಿದ್ದು ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆಮಾಡುವ ಸಾಧ್ಯತೆ ಇದೆ ಎಂದು ಕಡಲೂರು ಜಿಲ್ಲಾಧಿಕಾರಿ ಕೆ. ಕಿರ್ಲೋಶ್ ಕುಮಾರ್ ತಿಳಿಸಿದರು.<br /> <br /> ಘಟನೆಗೆ ವಿಷಾಹಾರ ಸೇವನೆ ಕಾರಣ ಎನ್ನಲಾಗಿದ್ದು, ನೀಡಲಾದ ಆಹಾರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಘಟನೆ ತಿಳಿಯುತ್ತಲೇ ಆತಂಕಗೊಂಡ ನೂರಾರು ಪಾಲಕರು ಶಾಲೆಯ ಆವರಣದಲ್ಲಿ ಜಮಾಯಿಸಿದ್ದರಿಂದ ಕೆಲಹೊತ್ತು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ (ಐಎಎನ್ಎಸ್):</strong> ಬಿಹಾರದ ಸರನ್ ಜಿಲ್ಲೆಯ ಬಿಸಿಯೂಟ ದುರಂತ ಇನ್ನೂ ಕಣ್ಣಮುಂದೆಯೆ ಇರುವಾಗ ತಮಿಳುನಾಡಿನಲ್ಲೂ ಇಂತಹುದೆ ಘಟನೆ ಗುರುವಾರ ನಡೆದಿದೆ.<br /> <br /> ರಾಜ್ಯದ ಕಡಲೂರು ಜಿಲ್ಲೆಯ ನೈವೇಲಿ ಎನ್ಎಲ್ಸಿ ಬಾಲಕಿಯರ ಶಾಲೆಯ 155 ವಿದ್ಯಾರ್ಥಿನಿಯರು ಬಿಸಿಯೂಟದ ನಂತರ ಅಸ್ವಸ್ಥಗೊಂಡಿದ್ದು, ಈ ಪೈಕಿ 13 ಬಾಲಕಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಕ್ಕಳ ಸ್ಥಿತಿ ಸ್ಥಿರವಾಗಿದ್ದು ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಯಿಂದ ಬಿಡುಗಡೆಮಾಡುವ ಸಾಧ್ಯತೆ ಇದೆ ಎಂದು ಕಡಲೂರು ಜಿಲ್ಲಾಧಿಕಾರಿ ಕೆ. ಕಿರ್ಲೋಶ್ ಕುಮಾರ್ ತಿಳಿಸಿದರು.<br /> <br /> ಘಟನೆಗೆ ವಿಷಾಹಾರ ಸೇವನೆ ಕಾರಣ ಎನ್ನಲಾಗಿದ್ದು, ನೀಡಲಾದ ಆಹಾರದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಘಟನೆ ತಿಳಿಯುತ್ತಲೇ ಆತಂಕಗೊಂಡ ನೂರಾರು ಪಾಲಕರು ಶಾಲೆಯ ಆವರಣದಲ್ಲಿ ಜಮಾಯಿಸಿದ್ದರಿಂದ ಕೆಲಹೊತ್ತು ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>