<p><strong>ಬೆಂಗಳೂರು</strong>: ದಾವಣಗೆರೆ ಜಿಲ್ಲೆಯ 79 ಮತ್ತು ರಾಣೇಬೆನ್ನೂರು ತಾಲ್ಲೂಕಿನ ಎರಡು ಗ್ರಾಮಗಳ ರೈತರು ಪ್ರಸಕ್ತ ಹಂಗಾಮಿನ ಕಬ್ಬನ್ನು ಶಾಮನೂರು ಸಕ್ಕರೆ ಕಂಪೆನಿ ಅಥವಾ ದಾವಣಗೆರೆ ಸಕ್ಕರೆ ಕಾರ್ಖಾನೆ ಗಳಿಗೆ ಮಾರಾಟ ಮಾಡಬೇಕು ಎಂದು ಸರ್ಕಾರ ಇತ್ತೀಚೆಗೆ ಹೊರಡಿಸಿದ್ದ ಆದೇಶವನ್ನು ಒಟ್ಟು ಆರು ರೈತರು ಪಾಲಿಸಬೇಕಿಲ್ಲ.<br /> <br /> ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ದಾವಣಗೆರೆಯ ರೈತರ ಜಿ.ಬಿ.ಶಿವಕುಮಾರ್ ಮತ್ತು ಐದು ಜನ ಇತರರು ತಮ್ಮ ಬೆಳೆಯನ್ನು ಯಾವುದೇ ಸಕ್ಕರೆ ಕಾರ್ಖಾನೆಗೆ ಮಾರಾಟ ಮಾಡಬಹುದು ಎಂದು ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ಬುಧವಾರ ಮಧ್ಯಂತರ ಆದೇಶ ನೀಡಿದ್ದಾರೆ. ವಿಚಾರಣೆ ಮುಂದೂಡಿದ್ದಾರೆ.<br /> <br /> ಇದೇ ಅ.19ರಂದು ಹೊಸ ಆದೇಶ ಹೊರಡಿಸಿದ್ದ ಸರ್ಕಾರ, ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿದ್ದ 52 ಗ್ರಾಮಗಳನ್ನು ಶಾಮನೂರು ಸಕ್ಕರೆ ಕಂಪೆನಿಗೆ, 29 ಗ್ರಾಮಗಳನ್ನು ದಾವಣಗೆರೆ ಸಕ್ಕರೆ ಕಂಪೆನಿಗೆ ಹಂಚಿಕೆ ಮಾಡಿದೆ. ಶಾಮನೂರು ಮತ್ತು ದಾವಣಗೆರೆ ಸಕ್ಕರೆ ಕಂಪೆನಿಗಳಿಗಿಂತ ಇತರೆ ಕಂಪೆನಿಗಳು ರೈತರಿಗೆ ಹೆಚ್ಚಿನ ಬೆಲೆ ನೀಡುತ್ತಿವೆ. ಸರ್ಕಾರದ ಆದೇಶದಿಂದ ರೈತರ ಹಕ್ಕುಗಳ ದಮನ ಆಗಿದೆ ಎಂಬುದು ರೈತರ ಅಳಲು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ದಾವಣಗೆರೆ ಜಿಲ್ಲೆಯ 79 ಮತ್ತು ರಾಣೇಬೆನ್ನೂರು ತಾಲ್ಲೂಕಿನ ಎರಡು ಗ್ರಾಮಗಳ ರೈತರು ಪ್ರಸಕ್ತ ಹಂಗಾಮಿನ ಕಬ್ಬನ್ನು ಶಾಮನೂರು ಸಕ್ಕರೆ ಕಂಪೆನಿ ಅಥವಾ ದಾವಣಗೆರೆ ಸಕ್ಕರೆ ಕಾರ್ಖಾನೆ ಗಳಿಗೆ ಮಾರಾಟ ಮಾಡಬೇಕು ಎಂದು ಸರ್ಕಾರ ಇತ್ತೀಚೆಗೆ ಹೊರಡಿಸಿದ್ದ ಆದೇಶವನ್ನು ಒಟ್ಟು ಆರು ರೈತರು ಪಾಲಿಸಬೇಕಿಲ್ಲ.<br /> <br /> ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ದಾವಣಗೆರೆಯ ರೈತರ ಜಿ.ಬಿ.ಶಿವಕುಮಾರ್ ಮತ್ತು ಐದು ಜನ ಇತರರು ತಮ್ಮ ಬೆಳೆಯನ್ನು ಯಾವುದೇ ಸಕ್ಕರೆ ಕಾರ್ಖಾನೆಗೆ ಮಾರಾಟ ಮಾಡಬಹುದು ಎಂದು ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ಬುಧವಾರ ಮಧ್ಯಂತರ ಆದೇಶ ನೀಡಿದ್ದಾರೆ. ವಿಚಾರಣೆ ಮುಂದೂಡಿದ್ದಾರೆ.<br /> <br /> ಇದೇ ಅ.19ರಂದು ಹೊಸ ಆದೇಶ ಹೊರಡಿಸಿದ್ದ ಸರ್ಕಾರ, ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿದ್ದ 52 ಗ್ರಾಮಗಳನ್ನು ಶಾಮನೂರು ಸಕ್ಕರೆ ಕಂಪೆನಿಗೆ, 29 ಗ್ರಾಮಗಳನ್ನು ದಾವಣಗೆರೆ ಸಕ್ಕರೆ ಕಂಪೆನಿಗೆ ಹಂಚಿಕೆ ಮಾಡಿದೆ. ಶಾಮನೂರು ಮತ್ತು ದಾವಣಗೆರೆ ಸಕ್ಕರೆ ಕಂಪೆನಿಗಳಿಗಿಂತ ಇತರೆ ಕಂಪೆನಿಗಳು ರೈತರಿಗೆ ಹೆಚ್ಚಿನ ಬೆಲೆ ನೀಡುತ್ತಿವೆ. ಸರ್ಕಾರದ ಆದೇಶದಿಂದ ರೈತರ ಹಕ್ಕುಗಳ ದಮನ ಆಗಿದೆ ಎಂಬುದು ರೈತರ ಅಳಲು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>