ತರಕಾರಿ ಖರೀದಿಸಿದ ಸಚಿವ!

ಹಳಿಯಾಳ: ತಾಲ್ಲೂಕಿನ ಮುರ್ಕವಾಡ ಗ್ರಾಮದಲ್ಲಿ ರಾಜ್ಯದ ಬೃಹತ್ ಕೈಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ಅವರು ವಾರದ ಸಂತೆಯ ಮಾರುಕಟ್ಟೆಯಲ್ಲಿ ಶುಕ್ರವಾರ ತರಕಾರಿ ತರಕಾರಿ ಖರೀದಿಸಿದರು.
ಮುರ್ಕವಾಡ ಗ್ರಾಮ ಪಂಚಾಯ್ತಿಯಲ್ಲಿ ನೂತನವಾಗಿ ಆಳವಡಿಸಲಾದ ಬಾಪೂಜಿ ಸೇವಾ ಕೇಂದ್ರ ಉದ್ಘಾಟಿಸಿದ ನಂತರ ಸಭಾ ಕಾರ್ಯಕ್ರಮಕ್ಕೆ ತೆರಳುವ ಮುನ್ನ ವಾರದ ಸಂತೆ ಮೂಲಕ ಮುಖ್ಯ ಬೀದಿಯಿಂದ ತೆರಳುವಾಗ ಸಂತೆಗೆ ಭೇಟಿ ನೀಡಿದರು.
ರೈತರು ಬೆಳೆದ ತರಕಾರಿಗಳು, ಧಾನ್ಯದ ಬೆಲೆ ವಿಚಾರಿಸಿದ ಅವರು ಬೆಳೆಗೆ ಸೂಕ್ತ ಬೆಲೆ ಸಿಗುತ್ತಿದೆಯೇ ಎಂದು ಮಾಹಿತಿ ಪಡೆದರು. ಈ ವೇಳೆ ಅವರು ತರಕಾರಿ ಖರೀದಿಸಿದರು. ಇದೇ ಸಂದರ್ಭದಲ್ಲಿ ಮಾರಾಟಗಾರರ ಹಾಗೂ ರೈತರೊಂದಿಗೆ ತೋಟಗಾರಿಕೆ ಬೆಳೆಗಳ ಕುರಿತು ಕೆಲ ಹೊತ್ತು ಸಂವಾದ ನಡೆಸಿ ನೂತನ ಹಾಗೂ ಸುಲಭ ಆಧುನಿಕ ತಂತ್ರಜ್ಞಾನ ಅಳವಡಿಸಿ ತೋಟಗಾರಿಕೆ ಹಾಗೂ ವಾಣಿಜ್ಯ ಬೆಳೆ ಹೆಚ್ಚು ಹೆಚ್ಚು ಬೆಳೆಸಿ ಆರ್ಥಿಕ ಅಭಿವೃದ್ಧಿ ಹೊಂದಬೇಕು ಎಂದು ಸಲಹೆ ನೀಡಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.