<p><br /> ಶಿವಮೊಗ್ಗ: ಗ್ರಾಮೀಣ ಭಾಗದಲ್ಲಿನ ಪ್ರತಿಭೆಗಳಿಗೆ ಸೂಕ್ತ ಮಾರ್ಗದರ್ಶನವಿಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳಿಂದ ವಂಚಿತರಾಗುತ್ತಿದ್ದಾರೆ. ಅಂತಹವರನ್ನು ಗುರುತಿಸಿ, ಸಜ್ಜುಗೊಳಿಸುವ ಕೆಲಸವನ್ನು ‘ಬೇಸ್’ ಸಂಸ್ಥೆ ಮಾಡಲಿದೆ ಎಂದು ಬೆಂಗಳೂರಿನ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಡಾ.ಎಚ್.ಎಸ್. ನಾಗರಾಜ್ ತಿಳಿಸಿದರು. <br /> <br /> ನಗರದ ವಾಸವಿ ಮಹಾವಿದ್ಯಾಲಯದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಬೇಸ್’ ತರಬೇತಿ ಸಂಸ್ಥೆಯ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳು ದೊಡ್ಡ ನಗರಗಳ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿವೆ. ಗ್ರಾಮೀಣ ಪ್ರದೇಶದಲ್ಲಿನ ಪ್ರತಿಭೆಗಳನ್ನು ಇಂತಹ ಅವಕಾಶ ಕಲ್ಪಿಸಲು ಈ ಕೇಂದ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುವುದು ಎಂದರು. <br /> <br /> ಕಳೆದ ಸಾಲಿನಲ್ಲಿ ಐಐಟಿ ಪರೀಕ್ಷೆಯಲ್ಲಿ ರಾಜ್ಯದಿಂದ 105ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇದರಲ್ಲಿ 37 ವಿದ್ಯಾರ್ಥಿಗಳು ‘ಬೇಸ್’ ಸಂಸ್ಥೆಯಲ್ಲಿ ತರಬೇತಿ ಪಡೆದವರಾಗಿದ್ದಾರೆ ಎಂದು ಮಾಹಿತಿ ನೀಡಿದರು. <br /> <br /> ಬೆಂಗಳೂರಿನ ಐಐಎಸ್ಸಿಯ ಸಹಾಯಕ ಪ್ರಾಧ್ಯಾಪಕ ಡಾ.ಚಂದ್ರ ಆರ್. ಮೂರ್ತಿ ಉದ್ಘಾಟಿಸಿರು. ಶಿವಮೊಗ್ಗ ಶಾಖೆಯ ಉಸ್ತುವಾರಿ ಸೀತಾಲಕ್ಷ್ಮೀ, ಆಡಳಿತಾಧಿಕಾರಿ ನಂಜುಂಡಯ್ಯ ಉಪಸ್ಥಿತರಿದ್ದರು. ವಾಸವಿ ವಿದ್ಯಾಲಯದ ಕಾರ್ಯದರ್ಶಿ ಎಸ್.ಕೆ. ಶೇಷಾಚಲ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><br /> ಶಿವಮೊಗ್ಗ: ಗ್ರಾಮೀಣ ಭಾಗದಲ್ಲಿನ ಪ್ರತಿಭೆಗಳಿಗೆ ಸೂಕ್ತ ಮಾರ್ಗದರ್ಶನವಿಲ್ಲದೆ ಸ್ಪರ್ಧಾತ್ಮಕ ಪರೀಕ್ಷೆಗಳಿಂದ ವಂಚಿತರಾಗುತ್ತಿದ್ದಾರೆ. ಅಂತಹವರನ್ನು ಗುರುತಿಸಿ, ಸಜ್ಜುಗೊಳಿಸುವ ಕೆಲಸವನ್ನು ‘ಬೇಸ್’ ಸಂಸ್ಥೆ ಮಾಡಲಿದೆ ಎಂದು ಬೆಂಗಳೂರಿನ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಡಾ.ಎಚ್.ಎಸ್. ನಾಗರಾಜ್ ತಿಳಿಸಿದರು. <br /> <br /> ನಗರದ ವಾಸವಿ ಮಹಾವಿದ್ಯಾಲಯದ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಬೇಸ್’ ತರಬೇತಿ ಸಂಸ್ಥೆಯ ಶಾಖೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳು ದೊಡ್ಡ ನಗರಗಳ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿವೆ. ಗ್ರಾಮೀಣ ಪ್ರದೇಶದಲ್ಲಿನ ಪ್ರತಿಭೆಗಳನ್ನು ಇಂತಹ ಅವಕಾಶ ಕಲ್ಪಿಸಲು ಈ ಕೇಂದ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುವುದು ಎಂದರು. <br /> <br /> ಕಳೆದ ಸಾಲಿನಲ್ಲಿ ಐಐಟಿ ಪರೀಕ್ಷೆಯಲ್ಲಿ ರಾಜ್ಯದಿಂದ 105ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇದರಲ್ಲಿ 37 ವಿದ್ಯಾರ್ಥಿಗಳು ‘ಬೇಸ್’ ಸಂಸ್ಥೆಯಲ್ಲಿ ತರಬೇತಿ ಪಡೆದವರಾಗಿದ್ದಾರೆ ಎಂದು ಮಾಹಿತಿ ನೀಡಿದರು. <br /> <br /> ಬೆಂಗಳೂರಿನ ಐಐಎಸ್ಸಿಯ ಸಹಾಯಕ ಪ್ರಾಧ್ಯಾಪಕ ಡಾ.ಚಂದ್ರ ಆರ್. ಮೂರ್ತಿ ಉದ್ಘಾಟಿಸಿರು. ಶಿವಮೊಗ್ಗ ಶಾಖೆಯ ಉಸ್ತುವಾರಿ ಸೀತಾಲಕ್ಷ್ಮೀ, ಆಡಳಿತಾಧಿಕಾರಿ ನಂಜುಂಡಯ್ಯ ಉಪಸ್ಥಿತರಿದ್ದರು. ವಾಸವಿ ವಿದ್ಯಾಲಯದ ಕಾರ್ಯದರ್ಶಿ ಎಸ್.ಕೆ. ಶೇಷಾಚಲ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>