<p>ಚಿತ್ರದುರ್ಗ: ಪ್ರಚಲಿತ ವಿದ್ಯಮಾನಗಳ ತಿಳಿವಳಿಕೆಗೆ ಸರ್ಕಾರ ಪಿಯು ಉಪನ್ಯಾಸಕರಿಗಾಗಿ ತರಬೇತಿ ಮತ್ತು ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಒತ್ತಾಯಿಸಿದರು. <br /> <br /> ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಇತಿಹಾಸ ವೇದಿಕೆ ಆಶ್ರಯದಲ್ಲಿ ಶುಕ್ರವಾರ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಪ್ರಶಿಕ್ಷಣ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ತರಬೇತಿ ಕೇಂದ್ರದಲ್ಲಿ ಒಂದು ವರ್ಷದಲ್ಲಿ 4 ಬಾರಿ ಉಪನ್ಯಾಸಕರಿಗೆ ಪುನರ್ಮನನ ಕಾರ್ಯಕ್ರಮ ಆಯೋಜಿಸಬೇಕು. ಹೊಸದಾಗಿ ನೇಮಕಗೊಂಡ ಉಪನ್ಯಾಸಕರಿಗೂ ಪ್ರಚಲಿತ ವಿದ್ಯಾಮಾನಗಳ ತರಬೇತಿ ನೀಡುವುದರಿಂದ ಬೋಧನೆಗೆ ಹೆಚ್ಚಿನ ಸಹಕಾರಿಯಾಗಲಿದೆ. ಇಲ್ಲದಿದ್ದರೇ ಮಕ್ಕಳು ಕೇಳುವ ಪ್ರಶ್ನೆಗೆ ಉತ್ತರಿಸಲು ಪರದಾಡಬೇಕಾಗುತ್ತದೆ ಎಂದರು. <br /> <br /> ಇತಿಹಾಸಕ್ಕೆ ತನ್ನದೇ ಪರಂಪರೆಯಿದ್ದು, ಮಾನವನಿಗೆ ಸಂಬಂಧಿಸಿದ ವಿಷಯವಾಗಿದೆ. ಒಳ ಗರ್ಭದಲ್ಲಿರುವ ವಿಷಯಗಳ ಬಗ್ಗೆ ಇತಿಹಾಸ ತಜ್ಞರು ಸಂಶೋಧನೆ ನಡೆಸಿ ಜನರಿಗೆ ತಿಳಿಸುವ ಕಾರ್ಯವಾಗಬೇಕಿದೆ ಎಂದರು. <br /> <br /> ಪದವಿಪೂರ್ವ ಉಪನ್ಯಾಸಕರ ವೇತನದ ವರದಿಯನ್ನು ಮುಖ್ಯಮಂತ್ರಿ ಯಥಾವತ್ತಾಗಿ ಜಾರಿಗೊಳಿಸಬೇಕು, ಪದವಿ ಹಾಗೂ ಪದವಿಪೂರ್ವ ಉಪನ್ಯಾಸಕರ ವೇತನ ಅಂತರ ಕಡಿಮೆಗೊಳಿಸಿ ಸಮಾನ ವೇತನ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. <br /> <br /> ರಾಜ್ಯದಲ್ಲಿ ಬಹುತೇಕ ಪದವಿಪೂರ್ವ ಕಾಲೇಜುಗಳಿಗೆ ಸ್ವಂತ ಕಟ್ಟಡವಿಲ್ಲದೇ ಪ್ರೌಢಶಾಲಾ ಕಟ್ಟಡಗಳಲ್ಲಿ ಕಾಲೇಜು ನಡೆಸಲಾಗುತ್ತಿದೆ. ಸರ್ಕಾರ ಪಿಯು ಕಾಲೇಜು ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. <br /> <br /> ಬೆಂಗಳೂರು ವಿವಿ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎಂ.ವಿ. ವಸು ಉಪನ್ಯಾಸ ನೀಡಿದರು. ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್. ಬಸವರಾಜಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.<br /> ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ. ಜಗದೀಶ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮಾಡಿದರು. ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಯಾದವರೆಡ್ಡಿ, ಪ್ರಾಂಶುಪಾಲ ಸಂಘದ ಅಧ್ಯಕ್ಷ ಶಿವಮೂರ್ತಿ, ನಿವೃತ್ತ ಉಪನ್ಯಾಸಕ ಕೋಟ್ರಬಸಪ್ಪ ಹಾಜರಿದ್ದರು. <br /> <br /> ಜಿಲ್ಲಾ ಪದವಿಪೂರ್ವ ಕಾಲೇಜುಗಳ ಇತಿಹಾಸ ವೇದಿಕೆ ಅಧ್ಯಕ್ಷ ಎಸ್.ಜಿ. ಬೋರಯ್ಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಬಿ. ಕೃಷ್ಣಪ್ಪ ನಿರೂಪಿಸಿದರು. ಖಜಾಂಚಿ ಎಚ್.ಎಸ್. ಮೈಲಾರಲಿಂಗಂ ವಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ಪ್ರಚಲಿತ ವಿದ್ಯಮಾನಗಳ ತಿಳಿವಳಿಕೆಗೆ ಸರ್ಕಾರ ಪಿಯು ಉಪನ್ಯಾಸಕರಿಗಾಗಿ ತರಬೇತಿ ಮತ್ತು ಸಂಶೋಧನಾ ಕೇಂದ್ರ ಸ್ಥಾಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಒತ್ತಾಯಿಸಿದರು. <br /> <br /> ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಇತಿಹಾಸ ವೇದಿಕೆ ಆಶ್ರಯದಲ್ಲಿ ಶುಕ್ರವಾರ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಪ್ರಶಿಕ್ಷಣ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ತರಬೇತಿ ಕೇಂದ್ರದಲ್ಲಿ ಒಂದು ವರ್ಷದಲ್ಲಿ 4 ಬಾರಿ ಉಪನ್ಯಾಸಕರಿಗೆ ಪುನರ್ಮನನ ಕಾರ್ಯಕ್ರಮ ಆಯೋಜಿಸಬೇಕು. ಹೊಸದಾಗಿ ನೇಮಕಗೊಂಡ ಉಪನ್ಯಾಸಕರಿಗೂ ಪ್ರಚಲಿತ ವಿದ್ಯಾಮಾನಗಳ ತರಬೇತಿ ನೀಡುವುದರಿಂದ ಬೋಧನೆಗೆ ಹೆಚ್ಚಿನ ಸಹಕಾರಿಯಾಗಲಿದೆ. ಇಲ್ಲದಿದ್ದರೇ ಮಕ್ಕಳು ಕೇಳುವ ಪ್ರಶ್ನೆಗೆ ಉತ್ತರಿಸಲು ಪರದಾಡಬೇಕಾಗುತ್ತದೆ ಎಂದರು. <br /> <br /> ಇತಿಹಾಸಕ್ಕೆ ತನ್ನದೇ ಪರಂಪರೆಯಿದ್ದು, ಮಾನವನಿಗೆ ಸಂಬಂಧಿಸಿದ ವಿಷಯವಾಗಿದೆ. ಒಳ ಗರ್ಭದಲ್ಲಿರುವ ವಿಷಯಗಳ ಬಗ್ಗೆ ಇತಿಹಾಸ ತಜ್ಞರು ಸಂಶೋಧನೆ ನಡೆಸಿ ಜನರಿಗೆ ತಿಳಿಸುವ ಕಾರ್ಯವಾಗಬೇಕಿದೆ ಎಂದರು. <br /> <br /> ಪದವಿಪೂರ್ವ ಉಪನ್ಯಾಸಕರ ವೇತನದ ವರದಿಯನ್ನು ಮುಖ್ಯಮಂತ್ರಿ ಯಥಾವತ್ತಾಗಿ ಜಾರಿಗೊಳಿಸಬೇಕು, ಪದವಿ ಹಾಗೂ ಪದವಿಪೂರ್ವ ಉಪನ್ಯಾಸಕರ ವೇತನ ಅಂತರ ಕಡಿಮೆಗೊಳಿಸಿ ಸಮಾನ ವೇತನ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. <br /> <br /> ರಾಜ್ಯದಲ್ಲಿ ಬಹುತೇಕ ಪದವಿಪೂರ್ವ ಕಾಲೇಜುಗಳಿಗೆ ಸ್ವಂತ ಕಟ್ಟಡವಿಲ್ಲದೇ ಪ್ರೌಢಶಾಲಾ ಕಟ್ಟಡಗಳಲ್ಲಿ ಕಾಲೇಜು ನಡೆಸಲಾಗುತ್ತಿದೆ. ಸರ್ಕಾರ ಪಿಯು ಕಾಲೇಜು ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. <br /> <br /> ಬೆಂಗಳೂರು ವಿವಿ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕ ಡಾ.ಎಂ.ವಿ. ವಸು ಉಪನ್ಯಾಸ ನೀಡಿದರು. ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್. ಬಸವರಾಜಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.<br /> ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಜಿ. ಜಗದೀಶ್ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಮಾಡಿದರು. ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಯಾದವರೆಡ್ಡಿ, ಪ್ರಾಂಶುಪಾಲ ಸಂಘದ ಅಧ್ಯಕ್ಷ ಶಿವಮೂರ್ತಿ, ನಿವೃತ್ತ ಉಪನ್ಯಾಸಕ ಕೋಟ್ರಬಸಪ್ಪ ಹಾಜರಿದ್ದರು. <br /> <br /> ಜಿಲ್ಲಾ ಪದವಿಪೂರ್ವ ಕಾಲೇಜುಗಳ ಇತಿಹಾಸ ವೇದಿಕೆ ಅಧ್ಯಕ್ಷ ಎಸ್.ಜಿ. ಬೋರಯ್ಯ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಬಿ. ಕೃಷ್ಣಪ್ಪ ನಿರೂಪಿಸಿದರು. ಖಜಾಂಚಿ ಎಚ್.ಎಸ್. ಮೈಲಾರಲಿಂಗಂ ವಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>