<p><strong>ಬೆಂಗಳೂರು</strong>: ‘ಸ್ವಾತಂತ್ರ್ಯ ಬಂದು 60 ವರ್ಷಗಳಾದರೂ ಬಡತನ ಜಾಸ್ತಿಯಾಗುತ್ತಲೇ ಇದೆ. ಇದಕ್ಕೆ ಪರಿಹಾರವೆಂದರೆ ಜನರು ಶ್ರಮ ಜೀವಿಗಳಾಗಬೇಕು’ ಎಂದು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ಅರಮನೆ ಮೈದಾನದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ಆರನೇ ದಿನದ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಆಶೀರ್ವಚನ ನೀಡಿದರು.<br /> <br /> ‘ಬಸವಣ್ಣನವರ ಕಾಯಕ- ದಾಸೋಹದ ತತ್ವಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಸಮಾಜ ಜಾಗೃತಿಯತ್ತ ಚಿಂತನೆ ನಡೆಸಬೇಕಾದ ಅಗತ್ಯವಿದೆ. ತರಳಬಾಳು ಹುಣ್ಣಿಮೆಯಂಥ ಕಾರ್ಯಕ್ರಮಗಳನ್ನು ವರ್ಷಕ್ಕೊಮ್ಮೆ ಆಯೋಜಿಸುವ ಮೂಲಕ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ನುಡಿದರು.<br /> <br /> ‘ಭಾರತ ಆಧ್ಯಾತ್ಮಿಕ ಕ್ಷೇತ್ರದಲ್ಲಿ 3000 ವರ್ಷಗಳಿಂದ ಅಪಾರ ಸಾಧನೆ ಮಾಡಿದೆ. ಇಂದಿನ ಸಾಮಾಜಿಕ, ರಾಜಕೀಯ, ಆರ್ಥಿಕ ಕ್ಷೇತ್ರಗಳಲ್ಲೂ ಅಧ್ಯಾತ್ಮವನ್ನು ಅಳವಡಿಸಿಕೊಳ್ಳುವ ಬಗ್ಗೆ ಆತ್ಮಾವಲೋಕನ ನಡೆಯಬೇಕು. ಜನರನ್ನು ಶಿಕ್ಷಿತರನ್ನಾಗಿ ಮಾಡುವ ನಿಟ್ಟಿನಲ್ಲಿ ಮಠಗಳು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿರುವುದು ಶ್ಲಾಘನೀಯ’ ಎಂದರು.<br /> <br /> ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ ‘ಇಂದಿನ ಚುನಾವಣಾ ಪದ್ಧತಿಯಲ್ಲಿ ಬದಲಾವಣೆಗಳನ್ನು ತರಬೇಕು. ಪಕ್ಷದ ರಚನೆಯಲ್ಲಿಯೂ ಬದಲಾವಣೆಗಳಾಗಬೇಕು’ ಎಂದು ಅಭಿಪ್ರಾಯಪಟ್ಟರು.<br /> <br /> ‘ಅಹಿಂಸೆ ಹಾಗೂ ಇನ್ನೊಬ್ಬರಿಗೆ ನೋವಾಗದಂತೆ ನಡೆದುಕೊಳ್ಳುವ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ತರಳಬಾಳು ಮಠದ ಕಾರ್ಯ ಸ್ತುತ್ಯರ್ಹ’ ಎಂದು ಸಚಿವ ಡಾ.ವಿ.ಎಸ್.ಆಚಾರ್ಯ ಹೇಳಿದರು.<br /> <br /> ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಮಾತನಾಡಿ, ‘ಮನುಷ್ಯನ ಆರೋಗ್ಯಕ್ಕಿಂತಲೂ ಸಮುದಾಯದ ಆರೋಗ್ಯ ಬಹಳ ಮುಖ್ಯ’ ಎಂದರು.<br /> <br /> ಅಂಕಣಕಾರ ಡಾ.ಗುರುರಾಜ ಕರ್ಜಗಿ ಅವರು ‘ಬಾಳಿಗೊಂದು ನಂಬಿಕೆ’ ವಿಷಯವಾಗಿ ಮತ್ತು ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಅವರು ‘ಹೃದಯ ಮತ್ತು ಹೃದಯವಂತಿಕೆ’ ವಿಷಯ ಕುರಿತು ಉಪನ್ಯಾಸ ನೀಡಿದರು.<br /> <br /> ಮಾಜಿ ಸಚಿವ ಎಚ್.ಕೆ.ಪಾಟೀಲ್, ಬ್ರಿಟನ್ನ ಲ್ಯಾಂಬೆತ್ ನಗರದ ಮೇಯರ್ ಕನ್ನಡಿಗ ಡಾ.ನೀರಜ್ ಪಾಟೀಲ್, ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಎಸ್.ಪುಟ್ಟಣ್ಣಯ್ಯ ಅವರು ಮಾತನಾಡಿದರು. ಇದಕ್ಕೂ ಮುನ್ನ ನಗರದ ಕಲಾತೀರ ಒಡಿಸ್ಸಿ ನೃತ್ಯ ತಂಡದ ಕಲಾವಿದರು ನೃತ್ಯ ಪ್ರದರ್ಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸ್ವಾತಂತ್ರ್ಯ ಬಂದು 60 ವರ್ಷಗಳಾದರೂ ಬಡತನ ಜಾಸ್ತಿಯಾಗುತ್ತಲೇ ಇದೆ. ಇದಕ್ಕೆ ಪರಿಹಾರವೆಂದರೆ ಜನರು ಶ್ರಮ ಜೀವಿಗಳಾಗಬೇಕು’ ಎಂದು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅಭಿಪ್ರಾಯಪಟ್ಟರು.<br /> <br /> ಅರಮನೆ ಮೈದಾನದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ಆರನೇ ದಿನದ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಆಶೀರ್ವಚನ ನೀಡಿದರು.<br /> <br /> ‘ಬಸವಣ್ಣನವರ ಕಾಯಕ- ದಾಸೋಹದ ತತ್ವಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಸಮಾಜ ಜಾಗೃತಿಯತ್ತ ಚಿಂತನೆ ನಡೆಸಬೇಕಾದ ಅಗತ್ಯವಿದೆ. ತರಳಬಾಳು ಹುಣ್ಣಿಮೆಯಂಥ ಕಾರ್ಯಕ್ರಮಗಳನ್ನು ವರ್ಷಕ್ಕೊಮ್ಮೆ ಆಯೋಜಿಸುವ ಮೂಲಕ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ನುಡಿದರು.<br /> <br /> ‘ಭಾರತ ಆಧ್ಯಾತ್ಮಿಕ ಕ್ಷೇತ್ರದಲ್ಲಿ 3000 ವರ್ಷಗಳಿಂದ ಅಪಾರ ಸಾಧನೆ ಮಾಡಿದೆ. ಇಂದಿನ ಸಾಮಾಜಿಕ, ರಾಜಕೀಯ, ಆರ್ಥಿಕ ಕ್ಷೇತ್ರಗಳಲ್ಲೂ ಅಧ್ಯಾತ್ಮವನ್ನು ಅಳವಡಿಸಿಕೊಳ್ಳುವ ಬಗ್ಗೆ ಆತ್ಮಾವಲೋಕನ ನಡೆಯಬೇಕು. ಜನರನ್ನು ಶಿಕ್ಷಿತರನ್ನಾಗಿ ಮಾಡುವ ನಿಟ್ಟಿನಲ್ಲಿ ಮಠಗಳು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿರುವುದು ಶ್ಲಾಘನೀಯ’ ಎಂದರು.<br /> <br /> ಸಚಿವ ಜಗದೀಶ್ ಶೆಟ್ಟರ್ ಮಾತನಾಡಿ ‘ಇಂದಿನ ಚುನಾವಣಾ ಪದ್ಧತಿಯಲ್ಲಿ ಬದಲಾವಣೆಗಳನ್ನು ತರಬೇಕು. ಪಕ್ಷದ ರಚನೆಯಲ್ಲಿಯೂ ಬದಲಾವಣೆಗಳಾಗಬೇಕು’ ಎಂದು ಅಭಿಪ್ರಾಯಪಟ್ಟರು.<br /> <br /> ‘ಅಹಿಂಸೆ ಹಾಗೂ ಇನ್ನೊಬ್ಬರಿಗೆ ನೋವಾಗದಂತೆ ನಡೆದುಕೊಳ್ಳುವ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ತರಳಬಾಳು ಮಠದ ಕಾರ್ಯ ಸ್ತುತ್ಯರ್ಹ’ ಎಂದು ಸಚಿವ ಡಾ.ವಿ.ಎಸ್.ಆಚಾರ್ಯ ಹೇಳಿದರು.<br /> <br /> ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಮಾತನಾಡಿ, ‘ಮನುಷ್ಯನ ಆರೋಗ್ಯಕ್ಕಿಂತಲೂ ಸಮುದಾಯದ ಆರೋಗ್ಯ ಬಹಳ ಮುಖ್ಯ’ ಎಂದರು.<br /> <br /> ಅಂಕಣಕಾರ ಡಾ.ಗುರುರಾಜ ಕರ್ಜಗಿ ಅವರು ‘ಬಾಳಿಗೊಂದು ನಂಬಿಕೆ’ ವಿಷಯವಾಗಿ ಮತ್ತು ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಅವರು ‘ಹೃದಯ ಮತ್ತು ಹೃದಯವಂತಿಕೆ’ ವಿಷಯ ಕುರಿತು ಉಪನ್ಯಾಸ ನೀಡಿದರು.<br /> <br /> ಮಾಜಿ ಸಚಿವ ಎಚ್.ಕೆ.ಪಾಟೀಲ್, ಬ್ರಿಟನ್ನ ಲ್ಯಾಂಬೆತ್ ನಗರದ ಮೇಯರ್ ಕನ್ನಡಿಗ ಡಾ.ನೀರಜ್ ಪಾಟೀಲ್, ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಎಸ್.ಪುಟ್ಟಣ್ಣಯ್ಯ ಅವರು ಮಾತನಾಡಿದರು. ಇದಕ್ಕೂ ಮುನ್ನ ನಗರದ ಕಲಾತೀರ ಒಡಿಸ್ಸಿ ನೃತ್ಯ ತಂಡದ ಕಲಾವಿದರು ನೃತ್ಯ ಪ್ರದರ್ಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>