<p><strong>ತರೀಕೆರೆ: </strong>ಗರ್ಭಿಣಿಯರ ಅನುಕೂಲಕ್ಕಾಗಿ ನೂತನ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸುವ ಮೂಲಕ ಸಾರ್ವಜನಿಕ ಆಸ್ಪತ್ರೆಯನ್ನು ಮತ್ತಷ್ಟು ಆಧುನೀಕರಣಗೊಳಿಸಲಾಗುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ನೂತನ ಸುಸಜ್ಜಿತ ಆಂಬುಲೆನ್ಸ್ ಅನ್ನು ಗರ್ಭಿಣಿಯರ ಉಪಯೋಗಕ್ಕಾಗಿ ಚಾಲನೆ ನೀಡಿ ಮಾತನಾಡಿದರು.<br /> <br /> ಆಸ್ಪತ್ರೆಗೆ ಅಗತ್ಯ ಇರುವ ಮೂಲ ಸೌಕರ್ಯ ಹಾಗೂ ಖಾಲೀ ಇರುವ ವೈದ್ಯರನ್ನು ಸದ್ಯದಲ್ಲಿಯೇ ಭರ್ತಿ ಮಾಡಲಾಗುವುದು ಎಂದರು.<br /> ಕೇವಲ ಜಿಲ್ಲಾ ಆಸ್ಪತ್ರೆಗೆ ಸೀಮಿತ ಇದ್ದ ಡಯಾಲಿಸಿಸ್ ವ್ಯವಸ್ಥೆ ಕೇಂದ್ರವನ್ನು ತರೀಕೆರೆ ಸಾರ್ವಜನಿಕ ಆಸ್ಪತ್ರೆಗೆ ಮಂಜೂರು ಮಾಡಿಸಲಾಗಿದ್ದು ಸದ್ಯದಲ್ಲಿಯೇ ರೋಗಿಗಳಿಗೆ ಈ ಸೌಲಭ್ಯ ದೊರೆಯಲಿದೆ ಎಂದರು.<br /> <br /> ಆಸ್ಪತ್ರೆಯಲ್ಲಿನ ರೋಗಿಗಳಿಗೆ ಮತ್ತು ಅವರ ಜೊತೆ ಬರುವವರಿಗೆ ಊಟದ ವ್ಯವಸ್ಥೆ ಮಾಡಲು ಅಗತ್ಯ ಇರುವ ಕೊಠಡಿಗೆ ಶಾಸಕರ ನಿಧಿಯಿಂದ 3 ಲಕ್ಷ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಡಾ.ದೇವರಾಜ್, ಉಪವಿಭಾಗಾಧಿಕಾರಿ ಜಿ.ಅನುರಾಧಾ, ಸಿಡಿಪಿಒ ಶ್ರೀಧರ್, ವೈದ್ಯಾಧಿಕಾರಿ ಮಲ್ಲಿಕಾರ್ಜನಪ್ಪ, ಡಾ.ಶಿವಮೂರ್ತಿ, ಡಾ.ರವಿಕೀರ್ತಿ, ಮುಖಂಡರಾದ ರವಿಶಾನುಭೋಗ್, ಹೇಮಲತಾ, ಫಾರೂಕ್, ಪುರಸಭೆ ಸದಸ್ಯ ಪದ್ಮರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ: </strong>ಗರ್ಭಿಣಿಯರ ಅನುಕೂಲಕ್ಕಾಗಿ ನೂತನ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸುವ ಮೂಲಕ ಸಾರ್ವಜನಿಕ ಆಸ್ಪತ್ರೆಯನ್ನು ಮತ್ತಷ್ಟು ಆಧುನೀಕರಣಗೊಳಿಸಲಾಗುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ತಿಳಿಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ನೂತನ ಸುಸಜ್ಜಿತ ಆಂಬುಲೆನ್ಸ್ ಅನ್ನು ಗರ್ಭಿಣಿಯರ ಉಪಯೋಗಕ್ಕಾಗಿ ಚಾಲನೆ ನೀಡಿ ಮಾತನಾಡಿದರು.<br /> <br /> ಆಸ್ಪತ್ರೆಗೆ ಅಗತ್ಯ ಇರುವ ಮೂಲ ಸೌಕರ್ಯ ಹಾಗೂ ಖಾಲೀ ಇರುವ ವೈದ್ಯರನ್ನು ಸದ್ಯದಲ್ಲಿಯೇ ಭರ್ತಿ ಮಾಡಲಾಗುವುದು ಎಂದರು.<br /> ಕೇವಲ ಜಿಲ್ಲಾ ಆಸ್ಪತ್ರೆಗೆ ಸೀಮಿತ ಇದ್ದ ಡಯಾಲಿಸಿಸ್ ವ್ಯವಸ್ಥೆ ಕೇಂದ್ರವನ್ನು ತರೀಕೆರೆ ಸಾರ್ವಜನಿಕ ಆಸ್ಪತ್ರೆಗೆ ಮಂಜೂರು ಮಾಡಿಸಲಾಗಿದ್ದು ಸದ್ಯದಲ್ಲಿಯೇ ರೋಗಿಗಳಿಗೆ ಈ ಸೌಲಭ್ಯ ದೊರೆಯಲಿದೆ ಎಂದರು.<br /> <br /> ಆಸ್ಪತ್ರೆಯಲ್ಲಿನ ರೋಗಿಗಳಿಗೆ ಮತ್ತು ಅವರ ಜೊತೆ ಬರುವವರಿಗೆ ಊಟದ ವ್ಯವಸ್ಥೆ ಮಾಡಲು ಅಗತ್ಯ ಇರುವ ಕೊಠಡಿಗೆ ಶಾಸಕರ ನಿಧಿಯಿಂದ 3 ಲಕ್ಷ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಡಾ.ದೇವರಾಜ್, ಉಪವಿಭಾಗಾಧಿಕಾರಿ ಜಿ.ಅನುರಾಧಾ, ಸಿಡಿಪಿಒ ಶ್ರೀಧರ್, ವೈದ್ಯಾಧಿಕಾರಿ ಮಲ್ಲಿಕಾರ್ಜನಪ್ಪ, ಡಾ.ಶಿವಮೂರ್ತಿ, ಡಾ.ರವಿಕೀರ್ತಿ, ಮುಖಂಡರಾದ ರವಿಶಾನುಭೋಗ್, ಹೇಮಲತಾ, ಫಾರೂಕ್, ಪುರಸಭೆ ಸದಸ್ಯ ಪದ್ಮರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>