<p><strong>ತರೀಕೆರೆ:</strong> ತರೀಕೆರೆ ತಾಲ್ಲೂಕಿನಲ್ಲಿ ರಾಜ್ಯ ಸರ್ಕಾರದ ವಿಶೇಷ ಅನುದಾನದಲ್ಲಿ ರೂ15 ಕೋಟಿ ಹಣದಲ್ಲಿ ಗ್ರಾಮಾಂತರ ರಸ್ತೆಗಳ ಅಭಿವೃದ್ಧಿಯಾಗಿದೆ ಮತ್ತು ಲೋಕೋಪಯೋಗಿ ಇಲಾಖೆಯಿಂದ ರೂ 9 ಕೋಟಿಗೂ ಅಧಿಕ ಮೊತ್ತದ ರಸ್ತೆ ಕಾಮಗಾರಿ ನಡೆದಿದ್ದರೂ ಕೆಲವು ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳು ಗುಂಡಿ ಗೊಟರುಗಳಿಂದ ಕೂಡಿದ್ದು, ಸಂಚರಿಸಲು ಜನತೆ ಹರಸಹಾಸ ಪಡಬೇಕಿದೆ.<br /> <br /> ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 60ಕ್ಕೂ ಹೆಚ್ಚು ಕಿ.ಮಿ. ಗ್ರಾಮೀಣ ಪ್ರದೇಶದ ರಸ್ತೆಯನ್ನು ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ಉಪ ವಿಭಾಗ ತಾಲ್ಲೂಕಿನಲ್ಲಿ ನಿರ್ಮಿಸಿದೆ. ಈ ಭಾಗಗಳಲ್ಲಿ ಬರುವ ಸೇತುವೆಗಳ ನಿರ್ಮಾಣ ಮತ್ತು ದುರಸ್ತಿಯನ್ನು ಇಲಾಖೆ ಕೈಗೊಂಡಿದೆ.<br /> <br /> ಲೋಕೋಪಯೋಗಿ ಇಲಾಖೆ ವಿಶೇಷ ಘಟಕ ಯೋಜನೆಯಡಿ ತಾಲ್ಲೂಕಿನಲ್ಲಿ ಜಿಲ್ಲಾ ಮುಖ್ಯರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದ್ದು, ರೂ 9.5 ಕೋಟಿಹಣದಲ್ಲಿ 7ರಸ್ತೆಯನ್ನು ನಿರ್ಮಿಸಿದೆ. ಕಳೆದ ವರ್ಷದಲ್ಲಿ ಹೆಚ್ಚಾಗಿ ಬಿದ್ದ ಮಳೆಯಿಂದ ರಸ್ತೆಗಳ ಗುಣಮಟ್ಟ ಹಾಳಾಗಿದ್ದು, ಅದನ್ನು ದುರಸ್ತಿ ಮಾಡುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಅಂಕಿಂಶಗಳು ಏನೆ ಇದ್ದರೂ ಗ್ರಾಮೀಣ ಪ್ರದೇಶವನ್ನು ಸಂಪರ್ಕಿಸುವ ಹಳಿಯೂರು ಕೆರೆಹೊಸಳ್ಳಿ ರಸ್ತೆ ತರೀಕೆರೆ-ಯಲುಗೆರೆ-ದುಗ್ಲಾಪುರ ರಸ್ತೆ ನಿರ್ಮಾಣವಾಗದೆ ಜನತೆ ಪರಿತಪಿಸುವಂತಾಗಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ:</strong> ತರೀಕೆರೆ ತಾಲ್ಲೂಕಿನಲ್ಲಿ ರಾಜ್ಯ ಸರ್ಕಾರದ ವಿಶೇಷ ಅನುದಾನದಲ್ಲಿ ರೂ15 ಕೋಟಿ ಹಣದಲ್ಲಿ ಗ್ರಾಮಾಂತರ ರಸ್ತೆಗಳ ಅಭಿವೃದ್ಧಿಯಾಗಿದೆ ಮತ್ತು ಲೋಕೋಪಯೋಗಿ ಇಲಾಖೆಯಿಂದ ರೂ 9 ಕೋಟಿಗೂ ಅಧಿಕ ಮೊತ್ತದ ರಸ್ತೆ ಕಾಮಗಾರಿ ನಡೆದಿದ್ದರೂ ಕೆಲವು ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳು ಗುಂಡಿ ಗೊಟರುಗಳಿಂದ ಕೂಡಿದ್ದು, ಸಂಚರಿಸಲು ಜನತೆ ಹರಸಹಾಸ ಪಡಬೇಕಿದೆ.<br /> <br /> ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 60ಕ್ಕೂ ಹೆಚ್ಚು ಕಿ.ಮಿ. ಗ್ರಾಮೀಣ ಪ್ರದೇಶದ ರಸ್ತೆಯನ್ನು ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ಉಪ ವಿಭಾಗ ತಾಲ್ಲೂಕಿನಲ್ಲಿ ನಿರ್ಮಿಸಿದೆ. ಈ ಭಾಗಗಳಲ್ಲಿ ಬರುವ ಸೇತುವೆಗಳ ನಿರ್ಮಾಣ ಮತ್ತು ದುರಸ್ತಿಯನ್ನು ಇಲಾಖೆ ಕೈಗೊಂಡಿದೆ.<br /> <br /> ಲೋಕೋಪಯೋಗಿ ಇಲಾಖೆ ವಿಶೇಷ ಘಟಕ ಯೋಜನೆಯಡಿ ತಾಲ್ಲೂಕಿನಲ್ಲಿ ಜಿಲ್ಲಾ ಮುಖ್ಯರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದ್ದು, ರೂ 9.5 ಕೋಟಿಹಣದಲ್ಲಿ 7ರಸ್ತೆಯನ್ನು ನಿರ್ಮಿಸಿದೆ. ಕಳೆದ ವರ್ಷದಲ್ಲಿ ಹೆಚ್ಚಾಗಿ ಬಿದ್ದ ಮಳೆಯಿಂದ ರಸ್ತೆಗಳ ಗುಣಮಟ್ಟ ಹಾಳಾಗಿದ್ದು, ಅದನ್ನು ದುರಸ್ತಿ ಮಾಡುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಅಂಕಿಂಶಗಳು ಏನೆ ಇದ್ದರೂ ಗ್ರಾಮೀಣ ಪ್ರದೇಶವನ್ನು ಸಂಪರ್ಕಿಸುವ ಹಳಿಯೂರು ಕೆರೆಹೊಸಳ್ಳಿ ರಸ್ತೆ ತರೀಕೆರೆ-ಯಲುಗೆರೆ-ದುಗ್ಲಾಪುರ ರಸ್ತೆ ನಿರ್ಮಾಣವಾಗದೆ ಜನತೆ ಪರಿತಪಿಸುವಂತಾಗಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>