<p><strong>ಮಡಿಕೇರಿ: </strong>ಇಂದು ಮಧ್ಯರಾತ್ರಿ ತಲಕಾವೇರಿಯಲ್ಲಿ ನಡೆಯಲಿರುವ ಕೊಡಗಿನ ಕುಲದೇವತೆ ಕಾವೇರಿಯ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಭಾನುವಾರ ವಿಧಾನ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. <br /> <br /> ಜಿ.ಪಂ. ಸದಸ್ಯ ರಾಜಾರಾವ್, ಎಪಿಎಂಸಿ ಅಧ್ಯಕ್ಷ ಬೆಲ್ಲು ಸೋಮಯ್ಯ, ಇತರರು ಸಹ ಭೇಟಿ ನೀಡಿದ್ದರು. <br /> ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಎಲ್ಲ ರೀತಿಯ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದೆ. ಸೋಮವಾರ ಬೆಳಿಗ್ಗೆ ವೇಳೆಗೆ ಪೂರ್ಣಗೊಳ್ಳಲಿವೆ. ಈ ಪ್ರದೇಶವೀಗ ಸಂಪೂರ್ಣ ಜಾತ್ರಾಮಯವಾಗಿ ರೂಪುಗೊಂಡಿದೆ.<br /> <br /> ಭಾಗಮಂಡಲದ ತಲಕಾವೇರಿ ಹಾಗೂ ಭಗಂಡೇಶ್ವರ ದೇವಸ್ಥಾನಗಳಿಗೆ ಸುಣ್ಣ-ಬಣ್ಣ ಹಚ್ಚುವ ಕೆಲಸ ಪೂರ್ಣಗೊಂಡಿದೆ. ಇದರ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಲಾಗುತ್ತಿದೆ. ತ್ರೀವೇಣಿ ಸಂಗಮದಲ್ಲಿ ಭಕ್ತರು ಪುಣ್ಯಸ್ನಾನ ಮಾಡುವುದರಿಂದ ಇಲ್ಲಿ ಸ್ವಚ್ಛತೆ ಹಾಗೂ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. <br /> ಭಕ್ತಾದಿಗಳಿಗೆ ಸ್ನಾನಕ್ಕೆ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಲಾಗಿದೆ. ಅಲ್ಲಲ್ಲಿ ಶೌಚಾಲಯಕ್ಕೂ ವ್ಯವಸ್ಥೆ ಮಾಡಲಾಗಿದೆ. <br /> <br /> <strong>ಅನ್ನದಾನಕ್ಕೆ ವಿಶೇಷ ತಂಡ </strong><br /> ಇದೇ ಮೊದಲ ಬಾರಿಗೆ ದೇವಸ್ಥಾನ ಆವರಣದೊಳಗೆ ಅನ್ನದಾನ ಮಾಡುವ ಜವಾಬ್ದಾರಿಯನ್ನು ತಲಕಾವೇರಿ- ಭಾಗಮಂಡಲ ದೇವಸ್ಥಾನ ಸಮಿತಿಗೆ ವಹಿಸಿಕೊಡಲಾಗಿದೆ. ಅನ್ನದಾನ ಮಾಡುವ ಸಂದರ್ಭ ದಲ್ಲಿ ಶುಚಿತ್ವ ಕಾಪಾಡಲು ಹಾಗೂ ಜನದಟ್ಟಣೆಯಾಗದಂತೆ ನೋಡಿಕೊಳ್ಳಲು ಯುವಕರ ವಿಶೇಷ ತಂಡಗಳನ್ನೇ ರಚಿಸಲಾಗಿದೆ. <br /> <br /> ಭಕ್ತರಿಗೆ ತಲಕಾವೇರಿಗೆ ಆಗಮಿಸಲು ವಿಶೇಷ ಬಸ್ ಸೌಕರ್ಯ ಮಾಡಲಾಗಿದೆ. ಮಡಿಕೇರಿ ನಡುವೆ ಓಡಾಟಕ್ಕೆ ಹೆಚ್ಚುವರಿಯಾಗಿ 20 ಬಸ್ಗಳು ಹಾಗೂ ತಲಕಾವೇರಿ- ಭಾಗಮಂಡಲ ನಡುವೆ 10 ಡಬಲ್ ಡೋರ್ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. <br /> <br /> ತಲಕಾವೇರಿಯವರೆಗೆ ತೆರಳಲು ಕೆಎಸ್ಆರ್ಟಿಸಿ ಬಸ್ಗಳಿಗೆ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಬೃಹತ್ ವಾಹನಗಳನ್ನು ಭಾಗಮಂಡಲದಲ್ಲಿಯೇ ನಿಲ್ಲಿಸಬೇಕಾಗುತ್ತದೆ. ನಾಲ್ಕು ಚಕ್ರದ ವಾಹನಗಳನ್ನು ಮಾತ್ರ ತಲಕಾವೇರಿ ಬಳಿಯ ಪಾರ್ಕಿಂಗ್ ಸ್ಥಳಕ್ಕೆ ಬಿಡಲಾಗುವುದು. ಅಲ್ಲಿಂದ 200 ಮೀಟರ್ ನಡೆದು ಭಕ್ತಾಧಿಗಳು ತಲಕಾವೇರಿಗೆ ತೆರಳಬೇಕಾಗಿದೆ. <br /> <br /> ಪಾಸ್ ಹೊಂದಿರುವ ಗಣ್ಯರು ಹಾಗೂ ಅಗತ್ಯತೆ ಇರುವ ವಾಹನಗಳಿಗೆ ಮಾತ್ರ ತಲಕಾವೇರಿ ದೇವಸ್ಥಾನದ ಬಳಿ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಇಂದು ಮಧ್ಯರಾತ್ರಿ ತಲಕಾವೇರಿಯಲ್ಲಿ ನಡೆಯಲಿರುವ ಕೊಡಗಿನ ಕುಲದೇವತೆ ಕಾವೇರಿಯ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಭಾನುವಾರ ವಿಧಾನ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. <br /> <br /> ಜಿ.ಪಂ. ಸದಸ್ಯ ರಾಜಾರಾವ್, ಎಪಿಎಂಸಿ ಅಧ್ಯಕ್ಷ ಬೆಲ್ಲು ಸೋಮಯ್ಯ, ಇತರರು ಸಹ ಭೇಟಿ ನೀಡಿದ್ದರು. <br /> ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಎಲ್ಲ ರೀತಿಯ ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪಿದೆ. ಸೋಮವಾರ ಬೆಳಿಗ್ಗೆ ವೇಳೆಗೆ ಪೂರ್ಣಗೊಳ್ಳಲಿವೆ. ಈ ಪ್ರದೇಶವೀಗ ಸಂಪೂರ್ಣ ಜಾತ್ರಾಮಯವಾಗಿ ರೂಪುಗೊಂಡಿದೆ.<br /> <br /> ಭಾಗಮಂಡಲದ ತಲಕಾವೇರಿ ಹಾಗೂ ಭಗಂಡೇಶ್ವರ ದೇವಸ್ಥಾನಗಳಿಗೆ ಸುಣ್ಣ-ಬಣ್ಣ ಹಚ್ಚುವ ಕೆಲಸ ಪೂರ್ಣಗೊಂಡಿದೆ. ಇದರ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಲಾಗುತ್ತಿದೆ. ತ್ರೀವೇಣಿ ಸಂಗಮದಲ್ಲಿ ಭಕ್ತರು ಪುಣ್ಯಸ್ನಾನ ಮಾಡುವುದರಿಂದ ಇಲ್ಲಿ ಸ್ವಚ್ಛತೆ ಹಾಗೂ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. <br /> ಭಕ್ತಾದಿಗಳಿಗೆ ಸ್ನಾನಕ್ಕೆ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಲಾಗಿದೆ. ಅಲ್ಲಲ್ಲಿ ಶೌಚಾಲಯಕ್ಕೂ ವ್ಯವಸ್ಥೆ ಮಾಡಲಾಗಿದೆ. <br /> <br /> <strong>ಅನ್ನದಾನಕ್ಕೆ ವಿಶೇಷ ತಂಡ </strong><br /> ಇದೇ ಮೊದಲ ಬಾರಿಗೆ ದೇವಸ್ಥಾನ ಆವರಣದೊಳಗೆ ಅನ್ನದಾನ ಮಾಡುವ ಜವಾಬ್ದಾರಿಯನ್ನು ತಲಕಾವೇರಿ- ಭಾಗಮಂಡಲ ದೇವಸ್ಥಾನ ಸಮಿತಿಗೆ ವಹಿಸಿಕೊಡಲಾಗಿದೆ. ಅನ್ನದಾನ ಮಾಡುವ ಸಂದರ್ಭ ದಲ್ಲಿ ಶುಚಿತ್ವ ಕಾಪಾಡಲು ಹಾಗೂ ಜನದಟ್ಟಣೆಯಾಗದಂತೆ ನೋಡಿಕೊಳ್ಳಲು ಯುವಕರ ವಿಶೇಷ ತಂಡಗಳನ್ನೇ ರಚಿಸಲಾಗಿದೆ. <br /> <br /> ಭಕ್ತರಿಗೆ ತಲಕಾವೇರಿಗೆ ಆಗಮಿಸಲು ವಿಶೇಷ ಬಸ್ ಸೌಕರ್ಯ ಮಾಡಲಾಗಿದೆ. ಮಡಿಕೇರಿ ನಡುವೆ ಓಡಾಟಕ್ಕೆ ಹೆಚ್ಚುವರಿಯಾಗಿ 20 ಬಸ್ಗಳು ಹಾಗೂ ತಲಕಾವೇರಿ- ಭಾಗಮಂಡಲ ನಡುವೆ 10 ಡಬಲ್ ಡೋರ್ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. <br /> <br /> ತಲಕಾವೇರಿಯವರೆಗೆ ತೆರಳಲು ಕೆಎಸ್ಆರ್ಟಿಸಿ ಬಸ್ಗಳಿಗೆ ಅವಕಾಶ ಕಲ್ಪಿಸಲಾಗಿದೆ. ಖಾಸಗಿ ಬೃಹತ್ ವಾಹನಗಳನ್ನು ಭಾಗಮಂಡಲದಲ್ಲಿಯೇ ನಿಲ್ಲಿಸಬೇಕಾಗುತ್ತದೆ. ನಾಲ್ಕು ಚಕ್ರದ ವಾಹನಗಳನ್ನು ಮಾತ್ರ ತಲಕಾವೇರಿ ಬಳಿಯ ಪಾರ್ಕಿಂಗ್ ಸ್ಥಳಕ್ಕೆ ಬಿಡಲಾಗುವುದು. ಅಲ್ಲಿಂದ 200 ಮೀಟರ್ ನಡೆದು ಭಕ್ತಾಧಿಗಳು ತಲಕಾವೇರಿಗೆ ತೆರಳಬೇಕಾಗಿದೆ. <br /> <br /> ಪಾಸ್ ಹೊಂದಿರುವ ಗಣ್ಯರು ಹಾಗೂ ಅಗತ್ಯತೆ ಇರುವ ವಾಹನಗಳಿಗೆ ಮಾತ್ರ ತಲಕಾವೇರಿ ದೇವಸ್ಥಾನದ ಬಳಿ ವಾಹನ ನಿಲುಗಡೆಗೆ ಅವಕಾಶ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>