<p><strong>ಮೊಳಕಾಲ್ಮುರು: </strong>ತಾಲ್ಲೂಕಿನ ಹಿರೇಕೆರೆಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಳವಾರಹಳ್ಳಿಯಲ್ಲಿ ಮೂರು ದಿನಗಳಿಂದ ವಾಂತಿ, ಭೇದಿ ಪ್ರಕರಣಗಳು ಕಂಡುಬಂದಿದ್ದು, ಒಬ್ಬ ವೃದ್ಧೆ ಮೃತಪಟ್ಟು, ಹಲವರು ಅಸ್ವಸ್ಥರಾಗಿದ್ದಾರೆ.<br /> <br /> ಗ್ರಾಮದ ಸಿದ್ದಮ್ಮ (70) ಎಂಬುವರು ಮೃತಪಟ್ಟಿದ್ದು, ಗೀತಾ, ಬೋರಯ್ಯ, ಓಬಕ್ಕ, ಭಾಗ್ಯವತಿ, ಪಾಲಕ್ಕ, ಮಲ್ಲೇಶ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ಥಳೀಯ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ. <br /> <br /> ಹಿರೇಕೆರೆಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ 10ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದಿದ್ದಾರೆ. ಶನಿವಾರ ಗ್ರಾಮಕ್ಕೆ ತುರ್ತು ಚಿಕಿತ್ಸಾ ವಾಹನ ಜತೆ ಭೇಟಿ ನೀಡಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಓಬಣ್ಣ, ಜ್ಯೋತಿ ಎಂಬುವವರಿಗೆ ಚಿಕಿತ್ಸೆ ನೀಡಿದೆ ಎಂದು ವರದಿಯಾಗಿದೆ.</p>.<p><br /> ಜಿಲ್ಲಾ ಪಂಚಾಯ್ತಿ ಸದಸ್ಯೆ ನರಸಮ್ಮ ಗೋವಿಂದಪ್ಪ, ತಾಲ್ಲೂಕು ಪಂಚಾಯ್ತಿ ಇಒ ಅಂಜನ್ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪದ್ಮಾವತಿ, ಡಾ.ರುದ್ರೀಬಾಯಿ, ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ ನೇತೃತ್ವದ ತಂಡ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.</p>.<p><br /> ಕುಡಿಯುವ ನೀರು ಸರಬರಾಜು ಪೈಪ್ಗಳು ನಾಲ್ಕು ಕಡೆ ಒಡೆದು ಕಲುಷಿತ ನೀರು ಸೇರಿಕೊಳ್ಳುತ್ತಿರುವುದು. ಚರಂಡಿ ಸೌಲಭ್ಯವಿಲ್ಲದೇ ಅಸ್ವಚ್ಛತೆ ಮನೆ ಮಾಡಿರುವುದು. ನೊಣ, ಸೊಳ್ಳೆಗಳ ಕಾಟ ತೀವ್ರವಾಗಿರುವುದು ಕಂಡುಬಂದಿತು.</p>.<p>ಈ ಹಿನ್ನೆಲೆಯಲ್ಲಿ ತಾಲ್ಲೂಕು ಪಂಚಾಯ್ತಿ ಇಒ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ, ಚರಂಡಿ ನಿರ್ಮಾಣಕ್ಕೆ ಅಗತ್ಯವಿರುವ ಕಾರ್ಯ ಕೈಗೊಳ್ಳಲು ಅನುಮತಿಯನ್ನು ತಂಡ ಪಡೆದುಕೊಂಡಿತು.</p>.<p><br /> ನಂತರ ಗ್ರಾಮಸಭೆ ನಡೆಸಿ, ಶುದ್ಧ, ಕಾಯಿಸಿ ಆರಿಸಿದ ನೀರು ಕುಡಿಯಬೇಕು. ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಅಧಿಕಾರಿಗಳು ಗ್ರಾಮಸ್ಥರಲ್ಲಿ ಮನವಿ ಮಾಡಿದರು.<br /> <br /> ಪ್ರತಿ ಮನೆಗೆ ಒಂದು ಲೀಟರ್ ಫಿನಾಯಿಲ್ ನೀಡಲಾಗಿದ್ದು, ಭಾನುವಾರ ನೀರು ಶುದ್ಧೀಕರಣ ಮಾಡಲು ಹ್ಯಾಲೋಜನ್ ಮಾತ್ರೆ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಶಿಕ್ಷಣಾಧಿಕಾರಿ ಚಿದಾನಂದಪ್ಪ ತಿಳಿಸಿದರು.</p>.<p><br /> ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕುಡಿಯುವ ನೀರು ಪೂರೈಕೆ ಮಾಡುವ ತೊಟ್ಟಿ ಮುಚ್ಚಳ ಕಿತ್ತು ಹೋಗಿದ್ದು ಕಸ, ಕಡ್ಡಿ, ತ್ಯಾಜ್ಯ ವಸ್ತುಗಳು ಬಿದ್ದು ನೀರು ಮಲಿನವಾಗುತ್ತಿವೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಗ್ರಾಮ ಪಂಚಾಯ್ತಿಗೆ ಮನವಿ ಮಾಡಿದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ. ಸಂಬಂಧಿಸಿದ ಇಲಾಖೆಯೂ ಇತ್ತ ಗಮನಹರಿಸಿಲ್ಲ ಎಂದು ಗೊಂಚಗಾರ್ ತಿಮ್ಮಣ್ಣ, ಗೌಡ್ರ ಓಬಣ್ಣ, ಹೊನ್ನಯ್ಯ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು: </strong>ತಾಲ್ಲೂಕಿನ ಹಿರೇಕೆರೆಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಳವಾರಹಳ್ಳಿಯಲ್ಲಿ ಮೂರು ದಿನಗಳಿಂದ ವಾಂತಿ, ಭೇದಿ ಪ್ರಕರಣಗಳು ಕಂಡುಬಂದಿದ್ದು, ಒಬ್ಬ ವೃದ್ಧೆ ಮೃತಪಟ್ಟು, ಹಲವರು ಅಸ್ವಸ್ಥರಾಗಿದ್ದಾರೆ.<br /> <br /> ಗ್ರಾಮದ ಸಿದ್ದಮ್ಮ (70) ಎಂಬುವರು ಮೃತಪಟ್ಟಿದ್ದು, ಗೀತಾ, ಬೋರಯ್ಯ, ಓಬಕ್ಕ, ಭಾಗ್ಯವತಿ, ಪಾಲಕ್ಕ, ಮಲ್ಲೇಶ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸ್ಥಳೀಯ ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಮೂಲಗಳು ತಿಳಿಸಿವೆ. <br /> <br /> ಹಿರೇಕೆರೆಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ 10ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದಿದ್ದಾರೆ. ಶನಿವಾರ ಗ್ರಾಮಕ್ಕೆ ತುರ್ತು ಚಿಕಿತ್ಸಾ ವಾಹನ ಜತೆ ಭೇಟಿ ನೀಡಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಓಬಣ್ಣ, ಜ್ಯೋತಿ ಎಂಬುವವರಿಗೆ ಚಿಕಿತ್ಸೆ ನೀಡಿದೆ ಎಂದು ವರದಿಯಾಗಿದೆ.</p>.<p><br /> ಜಿಲ್ಲಾ ಪಂಚಾಯ್ತಿ ಸದಸ್ಯೆ ನರಸಮ್ಮ ಗೋವಿಂದಪ್ಪ, ತಾಲ್ಲೂಕು ಪಂಚಾಯ್ತಿ ಇಒ ಅಂಜನ್ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪದ್ಮಾವತಿ, ಡಾ.ರುದ್ರೀಬಾಯಿ, ಆರೋಗ್ಯ ಶಿಕ್ಷಣಾಧಿಕಾರಿ ಡಿ. ಚಿದಾನಂದಪ್ಪ ನೇತೃತ್ವದ ತಂಡ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.</p>.<p><br /> ಕುಡಿಯುವ ನೀರು ಸರಬರಾಜು ಪೈಪ್ಗಳು ನಾಲ್ಕು ಕಡೆ ಒಡೆದು ಕಲುಷಿತ ನೀರು ಸೇರಿಕೊಳ್ಳುತ್ತಿರುವುದು. ಚರಂಡಿ ಸೌಲಭ್ಯವಿಲ್ಲದೇ ಅಸ್ವಚ್ಛತೆ ಮನೆ ಮಾಡಿರುವುದು. ನೊಣ, ಸೊಳ್ಳೆಗಳ ಕಾಟ ತೀವ್ರವಾಗಿರುವುದು ಕಂಡುಬಂದಿತು.</p>.<p>ಈ ಹಿನ್ನೆಲೆಯಲ್ಲಿ ತಾಲ್ಲೂಕು ಪಂಚಾಯ್ತಿ ಇಒ ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ, ಚರಂಡಿ ನಿರ್ಮಾಣಕ್ಕೆ ಅಗತ್ಯವಿರುವ ಕಾರ್ಯ ಕೈಗೊಳ್ಳಲು ಅನುಮತಿಯನ್ನು ತಂಡ ಪಡೆದುಕೊಂಡಿತು.</p>.<p><br /> ನಂತರ ಗ್ರಾಮಸಭೆ ನಡೆಸಿ, ಶುದ್ಧ, ಕಾಯಿಸಿ ಆರಿಸಿದ ನೀರು ಕುಡಿಯಬೇಕು. ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಅಧಿಕಾರಿಗಳು ಗ್ರಾಮಸ್ಥರಲ್ಲಿ ಮನವಿ ಮಾಡಿದರು.<br /> <br /> ಪ್ರತಿ ಮನೆಗೆ ಒಂದು ಲೀಟರ್ ಫಿನಾಯಿಲ್ ನೀಡಲಾಗಿದ್ದು, ಭಾನುವಾರ ನೀರು ಶುದ್ಧೀಕರಣ ಮಾಡಲು ಹ್ಯಾಲೋಜನ್ ಮಾತ್ರೆ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಶಿಕ್ಷಣಾಧಿಕಾರಿ ಚಿದಾನಂದಪ್ಪ ತಿಳಿಸಿದರು.</p>.<p><br /> ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕುಡಿಯುವ ನೀರು ಪೂರೈಕೆ ಮಾಡುವ ತೊಟ್ಟಿ ಮುಚ್ಚಳ ಕಿತ್ತು ಹೋಗಿದ್ದು ಕಸ, ಕಡ್ಡಿ, ತ್ಯಾಜ್ಯ ವಸ್ತುಗಳು ಬಿದ್ದು ನೀರು ಮಲಿನವಾಗುತ್ತಿವೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಗ್ರಾಮ ಪಂಚಾಯ್ತಿಗೆ ಮನವಿ ಮಾಡಿದ್ದರೂ ನಿರ್ಲಕ್ಷ್ಯ ವಹಿಸಲಾಗಿದೆ. ಸಂಬಂಧಿಸಿದ ಇಲಾಖೆಯೂ ಇತ್ತ ಗಮನಹರಿಸಿಲ್ಲ ಎಂದು ಗೊಂಚಗಾರ್ ತಿಮ್ಮಣ್ಣ, ಗೌಡ್ರ ಓಬಣ್ಣ, ಹೊನ್ನಯ್ಯ ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>