<p>ಸಾಗರ: ಯಾವುದೇ ಜನಾಂಗದವರು ತಾವು ಹುಟ್ಟಿ ಬೆಳೆದ ಪ್ರದೇಶವನ್ನು ಮರೆಯದೆ ಆ ಭಾಗದ ಬೆಳವಣಿಗೆಗೆ ತಮ್ಮ ಕೈಲಾದ ನೆರವು ನೀಡಬೇಕು ಎಂದು ಶಿವಮೊಗ್ಗದ ವಿದ್ವಾನ್ ವಿ.ಎನ್. ಭಟ್ ಹೇಳಿದರು.<br /> ಬೆಂಗಳೂರಿನ ಅಖಿಲ ಹವ್ಯಕ ಮಹಾಸಭಾ ಹಾಗೂ ಶಿವಮೊಗ್ಗ ಜಿಲ್ಲಾ ಹವ್ಯಕ ಸಮನ್ವಯ ಸಮಿತಿ ಈಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹವ್ಯಕ ಸಮಾಜದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿ ಅವರು ಮಾತನಾಡಿದರು.<br /> <br /> ಹವ್ಯಕ ಜನಾಂಗದ ವಿದ್ಯಾವಂತ ಯುವಕರು ನಗರ ಪ್ರದೇಶಗಳಿಗೆ ವಲಸೆ ಹೋಗುವುದು ಹೆಚ್ಚಾಗುತ್ತಿದ್ದು, ಈ ಕಾರಣ ಹಳ್ಳಿಗಳು ವೃದ್ಧಾಶ್ರಮಗಳಂತೆ ಕಾಣುತ್ತಿವೆ. ಎಲ್ಲಿಯೆ ಇದ್ದರೂ ಯುವಜನಾಂಗ ತಮ್ಮ ಮೂಲ ಸೆಲೆಯಿಂದ ದೂರಾಗಬಾರದು ಎಂದರು.<br /> <br /> ಹವ್ಯಕರು ಮೂಲತಃ ಋಷಿ ಮತ್ತು ಕೃಷಿ ಸಂಸ್ಕೃತಿಯವರು. ವೇದ, ವಿದ್ಯೆ ಮತ್ತು ಕೃಷಿಯೆ ಈ ಜನಾಂಗದ ಜೀವಾಳವಾಗಿದೆ. ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಸಮಾಜದಲ್ಲಿ ಬೇರೂರುವಂತೆ ಮಾಡುವಲ್ಲಿ ಹವ್ಯಕರು ಮೊದಲಿನಿಂದಲೂ ಪ್ರಮುಖ ಪಾತ್ರ ವಹಿಸುತ್ತಾ ಬಂದಿದ್ದಾರೆ ಎಂದರು.<br /> <br /> ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಿ.ಆರ್. ಜಯಂತ್ ಮಾತನಾಡಿ, ಪ್ರತಿಭೆ ಎಂಬುದು ಯಾರೊಬ್ಬರ ಸ್ವತ್ತು ಅಲ್ಲ. ಪ್ರತಿಭೆ ಹೊರ ಬರಲು ಸೂಕ್ತ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.<br /> <br /> ಇದೇ ಸಂದರ್ಭದಲ್ಲಿ ಹವ್ಯಕ ವಿದ್ಯಾನಿಧಿಗೆ ್ಙ ಒಂದು ಲಕ್ಷ ದೇಣಿಗೆ ನೀಡಿದ ಮಂಕಳಲೆ ದೇವಕಮ್ಮ ಅವರನ್ನು ಸನ್ಮಾನಿಸಲಾಯಿತು. ಲೇಖಕಿ ವಿಜಯಾ ಶ್ರೀಧರ್ ವಿಶೇಷ ಉಪನ್ಯಾಸ ನೀಡಿದರು.<br /> <br /> ಕೆ.ಆರ್. ಶ್ರೀಧರ್ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಿ. ಗೋಪಾಲಕೃಷ್ಣರಾವ್, ನರಹರಿ, ಮುಗಲೋಡಿ ಕೃಷ್ಣಮೂರ್ತಿ ಹಾಜರಿದ್ದರು. ಸರಸ್ವತಿ ಲಕ್ಷ್ಮಿನಾರಾಯಣ ಪ್ರಾರ್ಥಿಸಿದರು. ಈಳಿ ಶ್ರೀಧರ್ ಸ್ವಾಗತಿಸಿದರು. ತಿರುಮಲ ಮಾವಿನಕುಳಿ ನಿರೂಪಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಗರ: ಯಾವುದೇ ಜನಾಂಗದವರು ತಾವು ಹುಟ್ಟಿ ಬೆಳೆದ ಪ್ರದೇಶವನ್ನು ಮರೆಯದೆ ಆ ಭಾಗದ ಬೆಳವಣಿಗೆಗೆ ತಮ್ಮ ಕೈಲಾದ ನೆರವು ನೀಡಬೇಕು ಎಂದು ಶಿವಮೊಗ್ಗದ ವಿದ್ವಾನ್ ವಿ.ಎನ್. ಭಟ್ ಹೇಳಿದರು.<br /> ಬೆಂಗಳೂರಿನ ಅಖಿಲ ಹವ್ಯಕ ಮಹಾಸಭಾ ಹಾಗೂ ಶಿವಮೊಗ್ಗ ಜಿಲ್ಲಾ ಹವ್ಯಕ ಸಮನ್ವಯ ಸಮಿತಿ ಈಚೆಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹವ್ಯಕ ಸಮಾಜದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸಿ ಅವರು ಮಾತನಾಡಿದರು.<br /> <br /> ಹವ್ಯಕ ಜನಾಂಗದ ವಿದ್ಯಾವಂತ ಯುವಕರು ನಗರ ಪ್ರದೇಶಗಳಿಗೆ ವಲಸೆ ಹೋಗುವುದು ಹೆಚ್ಚಾಗುತ್ತಿದ್ದು, ಈ ಕಾರಣ ಹಳ್ಳಿಗಳು ವೃದ್ಧಾಶ್ರಮಗಳಂತೆ ಕಾಣುತ್ತಿವೆ. ಎಲ್ಲಿಯೆ ಇದ್ದರೂ ಯುವಜನಾಂಗ ತಮ್ಮ ಮೂಲ ಸೆಲೆಯಿಂದ ದೂರಾಗಬಾರದು ಎಂದರು.<br /> <br /> ಹವ್ಯಕರು ಮೂಲತಃ ಋಷಿ ಮತ್ತು ಕೃಷಿ ಸಂಸ್ಕೃತಿಯವರು. ವೇದ, ವಿದ್ಯೆ ಮತ್ತು ಕೃಷಿಯೆ ಈ ಜನಾಂಗದ ಜೀವಾಳವಾಗಿದೆ. ಸಂಸ್ಕಾರ ಹಾಗೂ ಸಂಸ್ಕೃತಿಯನ್ನು ಸಮಾಜದಲ್ಲಿ ಬೇರೂರುವಂತೆ ಮಾಡುವಲ್ಲಿ ಹವ್ಯಕರು ಮೊದಲಿನಿಂದಲೂ ಪ್ರಮುಖ ಪಾತ್ರ ವಹಿಸುತ್ತಾ ಬಂದಿದ್ದಾರೆ ಎಂದರು.<br /> <br /> ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಿ.ಆರ್. ಜಯಂತ್ ಮಾತನಾಡಿ, ಪ್ರತಿಭೆ ಎಂಬುದು ಯಾರೊಬ್ಬರ ಸ್ವತ್ತು ಅಲ್ಲ. ಪ್ರತಿಭೆ ಹೊರ ಬರಲು ಸೂಕ್ತ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.<br /> <br /> ಇದೇ ಸಂದರ್ಭದಲ್ಲಿ ಹವ್ಯಕ ವಿದ್ಯಾನಿಧಿಗೆ ್ಙ ಒಂದು ಲಕ್ಷ ದೇಣಿಗೆ ನೀಡಿದ ಮಂಕಳಲೆ ದೇವಕಮ್ಮ ಅವರನ್ನು ಸನ್ಮಾನಿಸಲಾಯಿತು. ಲೇಖಕಿ ವಿಜಯಾ ಶ್ರೀಧರ್ ವಿಶೇಷ ಉಪನ್ಯಾಸ ನೀಡಿದರು.<br /> <br /> ಕೆ.ಆರ್. ಶ್ರೀಧರ್ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಿ. ಗೋಪಾಲಕೃಷ್ಣರಾವ್, ನರಹರಿ, ಮುಗಲೋಡಿ ಕೃಷ್ಣಮೂರ್ತಿ ಹಾಜರಿದ್ದರು. ಸರಸ್ವತಿ ಲಕ್ಷ್ಮಿನಾರಾಯಣ ಪ್ರಾರ್ಥಿಸಿದರು. ಈಳಿ ಶ್ರೀಧರ್ ಸ್ವಾಗತಿಸಿದರು. ತಿರುಮಲ ಮಾವಿನಕುಳಿ ನಿರೂಪಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>