<p><strong>ತಾಂಬಾ: </strong>ಸಂಸಾರದ ಜಂಜಾಟದಿಂದ ಸ್ವಲ್ಪ ಹೊರಬಂದು ದೇವರಲ್ಲಿ ಅನನ್ಯ ಭಕ್ತಿ ಭಾವದಿಂದ ನಮಿಸಿದಾಗ ಮನಸ್ಸು ಉಲ್ಲಾಸಗೊಳ್ಳುತ್ತದೆ. ಮಾನವನ ಬದುಕಿನಲ್ಲಿ ಮನಸ್ಸಿನ ಕಾಮನೆಗಳ ಬಗ್ಗೆ ಹಿಡಿತವಿರಬೇಕು. ಅಂದಾಗ ಜೀವನ ಮುಕ್ತಿ ಪಥದತ್ತ ಕೊಂಡೊಯ್ಯಲು ಸಾಧ್ಯ ಎಂದು ಜಿ.ಪಂ.ಸದ್ಯಸ್ಯ ದೇವಾನಂದ ಚವ್ಹಾಣ ಹೇಳಿದರು.<br /> <br /> ಗ್ರಾಮದ ಅಂಬಾಭವಾನಿ ಎಜ್ಯುಕೇಶನ್ ಟ್ರಸ್ಟ್ ಆವರಣದಲ್ಲಿ ನವರಾತ್ರಿ ಉತ್ಸವದ ನಿಮಿತ್ತ ಹಮ್ಮಿಕೊಂಡಿರುವ `ನಮ್ಮೂರ ನಾಡದೇವಿ ಉತ್ಸವ~ದ ಚಂಡಿ ಹೋಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ನಾಡದೇವಿ ಮಂದಿರದಲ್ಲಿ ನಡೆದ ಚಂಡಿ ಹೋಮ ಕಾರ್ಯಕ್ರಮದಲ್ಲಿ ಅರ್ಚಕ ಕೃಷ್ಣಭಟ ಆಚಾರ್ಯ, ಅಚ್ಯುತ್ ಆಚಾರ್ಯ ಅವರು ನಾಡದೇವಿಗೆ ಮಹಾರುದ್ರಾಭಿಷೇಕ ಬಿಲ್ವಾರ್ಚನೆ, ಹೋಮ ಹವನ ಕಾರ್ಯಕ್ರಮ ನಡೆಸಿಕೊಟ್ಟರು.<br /> <br /> ಕಾರ್ಯಕ್ರಮದಲ್ಲಿ ಎಫ್.ಎನ್.ಚವ್ಹಾಣ, ಬಿ.ಇಡಿ ಕಾಲೇಜಿನ ಪ್ರಾಚಾರ್ಯ ಸುನೀತಾ ಚವ್ಹಾಣ, ಗ್ರಾಮ ಪಂಚಾಯಿತಿ ಸದಸ್ಯೆ ಮಮತಾ ಚವ್ಹಾಣ, ರವಿಕುಮಾರ ಚವ್ಹಾಣ ಮುಂತಾದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾಂಬಾ: </strong>ಸಂಸಾರದ ಜಂಜಾಟದಿಂದ ಸ್ವಲ್ಪ ಹೊರಬಂದು ದೇವರಲ್ಲಿ ಅನನ್ಯ ಭಕ್ತಿ ಭಾವದಿಂದ ನಮಿಸಿದಾಗ ಮನಸ್ಸು ಉಲ್ಲಾಸಗೊಳ್ಳುತ್ತದೆ. ಮಾನವನ ಬದುಕಿನಲ್ಲಿ ಮನಸ್ಸಿನ ಕಾಮನೆಗಳ ಬಗ್ಗೆ ಹಿಡಿತವಿರಬೇಕು. ಅಂದಾಗ ಜೀವನ ಮುಕ್ತಿ ಪಥದತ್ತ ಕೊಂಡೊಯ್ಯಲು ಸಾಧ್ಯ ಎಂದು ಜಿ.ಪಂ.ಸದ್ಯಸ್ಯ ದೇವಾನಂದ ಚವ್ಹಾಣ ಹೇಳಿದರು.<br /> <br /> ಗ್ರಾಮದ ಅಂಬಾಭವಾನಿ ಎಜ್ಯುಕೇಶನ್ ಟ್ರಸ್ಟ್ ಆವರಣದಲ್ಲಿ ನವರಾತ್ರಿ ಉತ್ಸವದ ನಿಮಿತ್ತ ಹಮ್ಮಿಕೊಂಡಿರುವ `ನಮ್ಮೂರ ನಾಡದೇವಿ ಉತ್ಸವ~ದ ಚಂಡಿ ಹೋಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ನಾಡದೇವಿ ಮಂದಿರದಲ್ಲಿ ನಡೆದ ಚಂಡಿ ಹೋಮ ಕಾರ್ಯಕ್ರಮದಲ್ಲಿ ಅರ್ಚಕ ಕೃಷ್ಣಭಟ ಆಚಾರ್ಯ, ಅಚ್ಯುತ್ ಆಚಾರ್ಯ ಅವರು ನಾಡದೇವಿಗೆ ಮಹಾರುದ್ರಾಭಿಷೇಕ ಬಿಲ್ವಾರ್ಚನೆ, ಹೋಮ ಹವನ ಕಾರ್ಯಕ್ರಮ ನಡೆಸಿಕೊಟ್ಟರು.<br /> <br /> ಕಾರ್ಯಕ್ರಮದಲ್ಲಿ ಎಫ್.ಎನ್.ಚವ್ಹಾಣ, ಬಿ.ಇಡಿ ಕಾಲೇಜಿನ ಪ್ರಾಚಾರ್ಯ ಸುನೀತಾ ಚವ್ಹಾಣ, ಗ್ರಾಮ ಪಂಚಾಯಿತಿ ಸದಸ್ಯೆ ಮಮತಾ ಚವ್ಹಾಣ, ರವಿಕುಮಾರ ಚವ್ಹಾಣ ಮುಂತಾದವರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>